ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನೀರಿಲ್ಲ ಜಾಸ್ತಿ ಹಣ ಪಾವತಿ ಮಾಡಿ ಶೌಚಾಲಯ ಬಳಸಿ

Date:

Advertisements

ಶಿವಮೊಗ್ಗ ನಗರದ ಕೆ ಎಸ್ ಆರ್ ಟಿ ಬಸ್ ಸ್ಟಾಂಡ್ ಒಳಗೆ 3 ಶೌಚಾಲಯ ವಿರುತ್ತದೆ ಆದರೆ ಇಲ್ಲಿ ಇಂದು ಒಂದು ಶೌಚಾಲಯದಲ್ಲಿ ಮಹಿಳಾ ಪ್ರಯಾಣಿಕರಿಗೆ ಶೌಚಾಲಯ ಬಳಕಗೆ ಸಿಬ್ಬಂದಿ ನೀರು ಇಲ್ಲದಾಗಿದೆ ಹಾಗಾಗಿ 10₹ ಪಾವತಿಸಿ ಎಂದು ಪ್ರಯಾಣಿಕರಿಗೆ ಕಿರಿ ಕಿರಿ ಅನುಚಿತ ವರ್ತನೆ ಉಂಟು ಮಾಡುತ್ತಿದ್ದು ಕಂಡುಬಂದಿದೆ. ಶೌಚಾಲಯ ಸಿಬ್ಬಂದಿ ಯಾರಿಗೋ ಕರೆ ಮಾಡಿ ಕರೆಸಲು ನೋಡಿದ್ದು ಕಂಡ ಪ್ರಯಾಣಿಕರು ಯಾರನ್ನು ಕರೆಸುತ್ತಿಯ ಕರೆಸು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಯಾಣಿಕರು ತೊಂದರೆ ಆಗುತ್ತಿದೆ ಎಂದು ತಿಳಿಸಿದರೆ ಯಾರಿಗೋ ಕರೆ ಮಾಡಿ ಬರಲು ತಿಳಿಸಿದ್ದು ಪ್ರಯಾಣಿಕರ ಆಕ್ರೋಶ ಹೆಚ್ಚು ಮಾಡಿದೆ.

ಅದರಂತೆ ಬೇರೆ ಊರಿಂದ ಬಂದಿದ್ದ ಕುಟುಂಬ ಹಾಗೂ ಶೌಚಾಲಯ ಸಿಬ್ಬಂದಿಯೊಂದಿಗೆ ಕೆಲಕಾಲ ಜಗಳವಾಗಿದೆ, ಶೌಚಾಲಯ ಸಿಬ್ಬಂದಿ, ಇದು ನಾನು ನಿರ್ಮಿಸಿರುವ ಶೌಚಾಲಯ ಎಂದು ವಾಗ್ವದಕ್ಕೆ ಇಳಿದಿದ್ದ, ತದ ನಂತರ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದು ಕೊನೆಗೆ ಮಹಿಳಾ ಪ್ರಯಾಣಿಕರು ಹಾಗೂ ಕುಟುಂಬದವರು ಅಸಹಾಯಕರಾಗಿ ತೆರಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ನೀರಿಲ್ಲ ಹಾಗಾಗಿ ಶೌಚಾಲಯ ಬಳಸುವುದಕ್ಕೆ 10₹ ಪಾವತಿ ಮಾಡಿ ಎಂದು ಬೋರ್ಡ್ ಹಾಕಿ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಹಾಗೆ ದಿನ ನಿತ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಇರುವ ಶೌಚಾಲಯಗಳ ಬಳಸುವ ವಿಚಾರಕ್ಕೆ ಮನಸೋ ಇಚ್ಛೆ ಹಣ ಕೇಳುತ್ತಾರೆ ಹಾಗೆ ಪ್ರಯಾಣಿಕರೊಂದಿಗೆ ಜಗಳ ಕಿರಿ ಕಿರಿ ತೊಂದರೆ ಅನುಚಿತ ವರ್ತನೆ ಮಾಡುತ್ತಾರೆ, ಇದರ ಕುರಿತು ದಿನ ನಿತ್ಯ ಮನಸಿಗೆ ಕಿರಿ ಕಿರಿ ಮಾಡಿಕೊಂಡು ಹೋಗಬೇಕಾಗಿದೆ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಶೌಚಾಲಯ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿಯಿಂದ ಸಮಸ್ಯೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

1001506150

ಆದಷ್ಟು ಬೇಗ ಈ ಯಾಕೆ ನೀರಿನ ಸಮಸ್ಯೆ ಆಗಿದೆ? ಎಂದುಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕಾಗಿದೆ. ಮತ್ತು ನಿರ್ದಿಷ್ಟ ಹಣದ ಬೋರ್ಡ್ ಹಾಕಿ ಬೇಕಾಬಿಟ್ಟಿ ಹಣ ಪೀಕುವುದನ್ನ ತಡೆಯಬೇಕಾಗಿದೆ ಎಂಬುದು ಪ್ರಯಾಣಿಕರು ಹಾಗೂ ಸಾರ್ವಜನಿಕರ ಆಗ್ರಹವಾಗಿದೆ.

raghavendra 1
+ posts

ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಾಘವೇಂದ್ರ
ರಾಘವೇಂದ್ರ
ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X