ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

Date:

Advertisements

ಸಂಸತ್ತಿನಲ್ಲಿ ಜಾರಿಯಾದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ವೆಲ್ಪರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ತೀವ್ರ ವಿರೋಧಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿತು.

ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಬದ್ಧ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಮತ್ತು ಧಾರ್ಮಿಕ ಸಂಸ್ಥೆಗಳ ಸ್ವಾಯತ್ತತೆಗೆ ಧಕ್ಕೆಯಾಗಿದೆ. ಇದು ಪ್ರಜಾಪ್ರಭುತ್ವ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕೆ ವಿರೋಧವಾಗಿದೆʼ ಎಂದು ದೂರಿದರು.

ವಕ್ಫ್ ತಿದ್ದುಪಡಿ ಕಾಯ್ದೆ ತಕ್ಷಣ ಹಿಂಪಡೆಯಬೇಕು. ಭಾರತೀಯ ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ ಖಚಿತಪಡಿಸಲಾದ ಧಾರ್ಮಿಕ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳಬೇಕು. ಯಾವುದೇ ಧಾರ್ಮಿಕ ಸಮುದಾಯದ ಆಂತರಿಕ ವಿಷಯಗಳಲ್ಲಿ ಸರ್ಕಾರ ಹಸ್ತಕ್ಷೇಪಿಸಬಾರದು. ವಕ್ಫ್ ಬೋರ್ಡ್‌ನ ಸ್ವಾಯತ್ತತೆ ಮತ್ತು ಆಸ್ತಿ ನಿರ್ವಹಣೆಯಲ್ಲಿ ಪಾರದರ್ಶಕತೆ ಖಚಿತಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳು ಮಂಡಿಸಿದರು.

Advertisements

ಪ್ರಮುಖರಾದ ಮುಬೀನ್ ಅಹಮದ್, ಸಲೀಂ ಚಿತಾಪುರಿ, ಬಾಬಾ ಹುಂಡೇಕರ್, ಫಹದ್ ಮೊಹಸಿನ್, ಹೈದರ್ ಅಲಿ ಬಾಗ್ಬಾನ್, ಮುಬಾಶ್ಶಿರ್, ಜಾಕಿರ್ ಹುಸೇನ್ ಸಾಬ್, ಹಾರೂನ್ ಖಾರಡಿ ಮತ್ತಿತರರು ಪಾಲ್ಗೊಂಡಿದ್ದರು.

ಜೇವರ್ಗಿಯಲ್ಲಿ ವಕ್ಫ್‌ ವಿರೋಧಿಸಿ ಪ್ರತಿಭಟನೆ :

ವಕ್ಫ್ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕೆಂದು ಆಗ್ರಹಿಸಿ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳ ಸಂವಿಧಾನ ರಕ್ಷಣೆ ಜನಾಂದೋಲನ ಸಮಿತಿ ಜಂಟಿಯಾಗಿ ಜೇವರ್ಗಿ ಬೃಹತ್ ಪ್ರತಿಭಟನೆ ನಡೆಯಿತು.

ಬೃಹತ್‌ ಪ್ರತಿಭಟನಾ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿದ್ದರು, ಬಳಿಕ ರಾಷ್ಟ್ರಪತಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ʼವಕ್ಫ್‌ ತಿದ್ದುಪಡಿ ಕಾಯ್ದೆಯಲ್ಲಿನ ಹಲವು ಅಂಶಗಳು ಬಿಜೆಪಿಯ ರಾಜಕೀಯ ದ್ವೇಷ, ಅಸೂಯೆಯಿಂದ ಕೂಡಿದ್ದು, ದೇಶದ ಮುಸ್ಲಿಮರನ್ನು ಎರಡನೇ ದರ್ಜೆ ಪ್ರಜೆಯನ್ನಾಗಿಸಿ ಆ ಮೂಲಕ ಡಾ.ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರು ರಚಿಸಿದ ಸಂವಿಧಾನವನ್ನು ಬದಲಾಯಿಸುವ ವ್ಯವಸ್ಥಿತ ಹುನ್ನಾರ ಈ ಕಾನೂನಿನಲ್ಲಿದೆ. ಕೂಡಲೇ ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕುʼ ಎಂದು ಆಗ್ರಹಿಸಿದರು.

‘ಸಂಸತ್ತಿನಲ್ಲಿ ಅಂಗೀಕೃತವಾಗಿರುವ ಸಂವಿಧಾನ ವಿರೋಧಿ ವಕ್ಸ್ ತಿದ್ದುಪಡಿ ಕಾಯ್ದೆಯನ್ನು ಜಾರಿ ಆಗದಂತೆ ತಡೆಹಿಡಿದು ಸಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯಲು ಮುಂದಾಗಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಭೀಕರ ಕಾರು ಅಪಘಾತ : ಒಂದೇ ಕುಟುಂಬದ ಮೂವರ ಸಾವು

ಈ ಸಂದರ್ಭದಲ್ಲಿ ಪ್ರಮುಖರಾದ ಮಹಮ್ಮದ್ ಇಸುಬ್ ಕನ್ನಿ, ಮಹೇಶಕುಮಾರ ರಾಠೋಡ, ಬಾಬು ಪಾಟೀಲ, ಇಬ್ರಾಹಿಂ ಪಟೇಲ್ ಯಾಳವಾರ, ಸಿದ್ರಾಮ ಕಟ್ಟಿ, ಮೋಯಿಯುದ್ದೀನ್, ಇನಾಮ್ಹಾರ ರೌಫ್ ಹವಾಲ್ದಾರ್, ರಾಜಾಪಟೇಲ್ ಯಾಳವಾರ, ಅಬ್ದುಲ್ ಖಾದರ್, ಇಬ್ರಾಹಿಂ ಪಟೇಲ್ ಜೇವರ್ಗಿ, ಬಿ.ಸ್.ಮಾಲಿಪಾಟೀಲ್, ಮೆಹಬೂಬ್ ಮನಿಯಾರ ಮಳ್ಳಿ, ಮಲ್ಲಿಕಾರ್ಜುನ ನೆಲೋಗಿ, ಭೀಮರಾಯ ಉಸ್ಮಾನ್‌ಸಿಪಾಯಿ, ದುಮ್ಮದ್ರಿ, ಮೌಲಾಮೂಲಾ, ಸಿದ್ದು ಕೆರೂರ, ಅಜ್ಮೀರ್ ಪಟೇಲ್ ಯಡ್ರಾಮಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X