ಮನೆಯಲ್ಲಿ ಹಣ ಪತ್ತೆ: ನ್ಯಾ. ವರ್ಮಾ ವಿಚಾರಣೆ ನಡೆಸಿದ್ದ 52 ಪ್ರಕರಣಗಳ ಮರುವಿಚಾರಣೆಗೆ ದೆಹಲಿ ಹೈಕೋರ್ಟ್‌ ನಿರ್ಧಾರ

Date:

Advertisements

ಇತ್ತೀಚೆಗೆ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಕೋಟಿ-ಕೋಟಿ ರೂ. ಹಣ ಪತ್ತೆಯಾದ ಬಳಿಕ, ವರ್ಮಾ ಅವರನ್ನು ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಅವರು ದೆಹಲಿ ಹೈಕೋರ್ಟ್‌ನಲ್ಲಿದ್ದಾಗ ವಿಚಾರಣೆ ನಡೆಸಿದ್ದ, ಅಂತಿಮ ತೀರ್ಪು ಬಂದಿರದ 52 ಪ್ರಕರಣಗಳನ್ನು ಹೊಸದಾಗಿ ಮರುವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್‌ ನಿರ್ಧರಿಸಿದೆ.

ಈ ಬಗ್ಗೆ ಸಾರ್ವಜನಿಕ ಸೂಚನೆ ನೀಡಿರುವ ದೆಹಲಿ ಹೈಕೋರ್ಟ್‌, “ನ್ಯಾಯಮೂರ್ತಿ ಯಶವಂತ್ ವರ್ಮಾ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ವಿಭಾಗೀಯ ಪೀಠದ ಮುಂದೆ ಈ ಹಿಂದೆ ಪಟ್ಟಿ ಮಾಡಲಾಗಿದ್ದ ಮತ್ತು ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದ ಪ್ರಕರಣಗಳು ಇವು. ಯಾವುದೇ ಆದೇಶಗಳನ್ನು ಹೊರಡಿಸಿದ ಈ 52 ಪ್ರಕರಣಗಳನ್ನು ಮರು ಪಟ್ಟಿ ಮಾಡಿ, ಹೊಸದಾಗಿ ಆರಂಭದಿಂದ ವಿಚಾರಣೆ ನಡೆಸಲಾಗುವುದು. ಸಂಬಂಧಪಟ್ಟ ಎಲ್ಲರಿಗೂ ಮಾಹಿತಿ ನೀಡಲಾಗಿದೆ” ಎಂದು ಹೇಳಿದೆ.

ಮರು ವಿಚಾರಣೆಗೆ ಪಟ್ಟಿ ಮಾಡಲಾಗಿರುವ 52 ಪ್ರಕರಣಗಳಲ್ಲಿ ಹೆಚ್ಚಿನವು ಜಿಎಸ್‌ಟಿ ಮತ್ತು ತೆರಿಗೆಗೆ ಸಂಬಂಧಿತ ವಿವಾದಗಳಿಗೆ ಸಂಬಂಧಿಸಿವೆ ಎಂದು ವರದಿಯಾಗಿದೆ.

Advertisements

ಈ ವರದಿ ಓದಿದ್ದೀರಾ?: ದೇಶದ್ರೋಹಿ’ಯೊಬ್ಬನ ಅಪೂರ್ಣ ಆಂದೋಲನ

ಮಾರ್ಚ್ 14ರಂದು ದೆಹಲಿಯಲ್ಲಿನ ವರ್ಮಾ ಅವರ ನಿವಾಸದಲ್ಲಿ ಬೆಂಕಿ ಅವಗಢ ಸಂಭವಿಸಿತ್ತು. ಈ ವೇಳೆ, ಕಳೆದ ತಿಂಗಳು ಅರೆ-ಬರೆ ಸುಟ್ಟುಹೋಗಿದ್ದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ವರ್ಮಾ ಅವರ ವಿರುದ್ಧ ಆಂತರಿಕ ತನಿಖೆ ನಡೆದು, ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ.

ಅವರನ್ನು ಅಲಹಾಬಾದ್‌ಗೆ ವರ್ಗಾವಣೆ ಮಾಡಿದ್ದನ್ನು ಅಲಹಾಬಾದ್‌ನ ಬಾರ್ ಕೌನ್ಸಿಲ್‌ಗಳು ವಿರೋಧಿಸಿದ್ದವು. ವಿರೋಧದ ಪರಿಣಾಮವಾಗಿ ಅವರ ಪ್ರಮಾಣವಚನವನ್ನು ಸಾರ್ವಜನಿಕ ಸಮಾರಂಭದಲ್ಲಿ ನಡೆಸುವ ಬದಲು ಖಾಸಗಿಯಾಗಿ ನಡೆಸಲಾಯಿತು. ಅಲ್ಲದೆ, ಸದ್ಯಕ್ಕೆ ವರ್ಮಾ ಅವರು ಯಾವುದೇ ಪ್ರಕರಣಗಳ ವಿಚರಣೆ ನಡೆಸದಂತೆ ಸುಪ್ರೀಂ ಕೋರ್ಟ್‌ ನಿರ್ಬಂಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X