ಬಿಜೆಪಿ ಮುಖಂಡನಿಂದ ಸಿಯುಕೆ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ದೂರು ನೀಡಿದರೂ ಕ್ರಮ ವಹಿಸದ ಆಡಳಿತ ವರ್ಗ

Date:

Advertisements

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಎಂ ಎ ಓದುತ್ತಿರುವ ದಲಿತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ವಿದ್ಯಾರ್ಥಿನಿ ದೂರು ನೀಡಿದರೂ ವಿಶ್ವವಿದ್ಯಾಲಯದ ಆಡಳಿತ ವರ್ಗ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಡಾ. ಪಿ ನಂದಕುಮಾರ್ ಆರೋಪಿಸಿದ್ದಾರೆ.

“ವಿಶ್ವವಿದ್ಯಾಲಯದ ಒಳಗೆ ಆಂಧ್ರಪ್ರದೇಶದ ಆದಿಕೇಶವಲು ಎಂಬ ಬಿಜೆಪಿ ಮುಖಂಡನಿಗೆ ಕ್ಯಾಂಟಿನ್ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಈತ ವಿದ್ಯಾರ್ಥಿನಿಯನ್ನು ಪ್ರತ್ಯೇಕ ಕೋಣೆಗೆ ಕರೆದು, ʼನಿನ್ನನ್ನು ನೋಡಿದರೆ ಮೂಡ್ ಬರುತ್ತೆʼ ಎಂಬ ಅಸಭ್ಯ ಮಾತುಗಳನ್ನು ಆಡುತ್ತ ಕೆನ್ನೆಗೆ ಮತ್ತು ಕುತ್ತಿಗೆಗೆ ಮುತ್ತು ಕೊಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದರು.

“ಈ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿದ್ಯಾರ್ಥಿನಿ ಸ್ವತಃ ವಿದ್ಯಾರ್ಥಿಗಳ ಕಲ್ಯಾಣ ಅಧಿಕಾರಿಗಳಾದ ಬಸವರಾಜ ಕುಬಕಡ್ಡಿಯವರಿಗೆ ದೂರು ಕೂಡ ನೀಡಿದ್ದಾಳೆ. ಆದರೆ ವಿಶ್ವವಿದ್ಯಾಲಯದ ಆಡಳಿತ ವರ್ಗ ಈವರೆಗೂ ಈ ವ್ಯಕ್ತಿಯ ಮೇಲೆ ಪೊಲೀಸ್ ಪ್ರಕರಣ ದಾಖಲಿಸುವುದಾಗಲಿ, ಟೆಂಡರ್ ರದ್ದುಗೊಳಿಸುವುದಾಗಲಿ ಯಾವುದೇ ರೀತಿಯ ಕ್ರಮ ಜರುಗಿಸದೆ, ಈತನ ದುಷ್ಕೃತ್ಯಗಳನ್ನು ಪ್ರಚೋದಿಸುತ್ತಿರುವ ಆಡಳಿತ ವರ್ಗ ವಿದ್ಯಾರ್ಥಿನಿಗೆ ಬೆದರಿಕೆ ಒಡ್ಡಿ ಭಯದ ವಾತಾವರಣ ಸೃಷ್ಟಿಸಿದ್ದಾರೆ” ಎಂದು ದೂರಿದರು.

Advertisements
ವಿದ್ಯಾರ್ಥಿನಿ ದೂರು ಪತ್ರ

“ಮಹಿಳಾ ಆಯೋಗ ಹಾಗೂ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿನಿಗೆ ಭದ್ರತೆಯ ಜತೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವರ್ತರಾಗಬೇಕು” ಎಂದು ಡಾ. ಪಿ ನಂದಕುಮಾರ್ ಆಗ್ರಹಿಸಿದ್ದಾರೆ.

ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಪುಂಕಾನುಪುಂಕವಾಗಿ ಪುಂಗುವ ಬಿಜೆಪಿ ನಾಯಕ ಮೋದಿಜಿಯವರು ಇಂತಹ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಮುಕರ ಕೈಗೆ ಆಡಳಿತ ನೀಡುವುದರಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಜಾತಿ ಧರ್ಮಗಳ ರಾಜಕಾರಣ ಮಾಡುತ್ತಿರುವ ಬಿಜೆಪಿಗರಿಗೆ ಇಂತಹ ಸೂಕ್ಷ್ಮ ವಿಚಾರಗಳು ತಿಳಿಯುವುದೇ ಇಲ್ಲ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿಯ ಪ್ರೇಮಕಥನ ‘ಅಮರ ಪ್ರೇಮಿ ಅರುಣ್’ ತೆರೆಗೆ ಬರಲು ಸಿದ್ಧ

ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರಗಳ ತಡೆಗೆ ಮುಂದಾಗದ ಬಿಜೆಪಿಗರು ಜನಿವಾರದ ವಿವಾದ ಹಬ್ಬಿಸುತ್ತ ಒಬ್ಬರಿಗೊಬ್ಬರನ್ನು ಎತ್ತಿಕಟ್ಟುತ್ತಿದ್ದಾರೆ. ಹೆಣಗಳ ಮೇಲೆ ರಾಜಕೀಯ ಮಾಡುವ ಬಿಜೆಪಿಗೆ ಹೆಣ್ಣುಮಕ್ಕಳ ಸುರಕ್ಷತೆ, ರಕ್ಷಣೆ, ಸ್ವಾತಂತ್ರ್ಯ ಬೇಕಿಲ್ಲ. ಕೇಂದ್ರ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಆದಿಕೇಶವಲು ಎಂಬ ಬಿಜೆಪಿ ಮುಖಂಡನ ಕ್ಯಾಂಟಿನ್‌ ಟೆಂಡರ್ ಪರವಾನಗಿ ರದ್ದುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X