ಮೈಸೂರು | ಅಂಬೇಡ್ಕರ್ ರವರ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು, ಆರಾಧನೆಯನ್ನಲ್ಲ : ಗುರುಪ್ರಸಾದ್ ಕೆರಗೋಡು

Date:

Advertisements

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ಜಯಂತಿ ಅಂಗವಾಗಿ ನಡೆದ ಜನಜಾಗೃತಿ ಸಮಾವೇಶದಲ್ಲಿ ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಮಾತನಾಡಿ ‘ ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು ಹೊರತು ಆರಾಧನೆಯನ್ನಲ್ಲ ‘ ಎಂದರು.

” ನಾವೆಲ್ಲರೂ ಸಂಘಟಿತರಾಗಿ ಶೈಕ್ಷಣಿಕ ಹೋರಾಟದ ಮೂಲಕ ಸ್ಥಿತಿವಂತರಾಗಿ ಬಾಬಾ ಸಾಹೇಬರ ಆಶಯದಂತೆ ಮಕ್ಕಳ ಭವಿಷ್ಯ ರೂಪಿಸಬೇಕು. ಹೀಗೆ, ಅಂಬೇಡ್ಕರ್ ಅವರ ಆರಾಧನೆ ಮಾಡುವುದು ಸರಿಯಲ್ಲ. ವಿಚಾರಗಳನ್ನು ಅನುಸರಿಸಿ, ಬದುಕಿನಲ್ಲಿ ಅಳವಡಿಸಿಕೊಳ್ಳುವುದನ್ನು ಬಿಟ್ಟು ವಿನಾಕಾರಣ ಭಾವಚಿತ್ರಕ್ಕೆ ಪೂಜಾ ಕೈಂಕರ್ಯ ನೆರವೇರಿಸುವುದು ಸೂಕ್ತವಲ್ಲ. ಇದು ಬಾಬಾ ಸಾಹೇಬರ ನಿಲುವು ಅಲ್ಲ. ವ್ಯಕ್ತಿ ಪೂಜೆಯನ್ನು ನಿಲ್ಲಿಸಬೇಕು. ಬದುಕಿನಲ್ಲಿ ಬಾಬಾ ಸಾಹೇಬರ ವಿಚಾರಧಾರೆ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನಕ್ಕೆ ಬರಬೇಕಿದೆ “.

“ಬಾಬಾ ಸಾಹೇಬರ ಆದರ್ಶಗಳು ಮಣ್ಣು ಪಾಲಾಗದಂತೆ ನಾವೆಲ್ಲರೂ ಎಚ್ಚತ್ತು ನಡೆಯಬೇಕು. ಮುಂದಿನ ಪೀಳಿಗೆಗೆ ಬಾಬಾ ಸಾಹೇಬರ ಮಾರ್ಗವನ್ನ ತಿಳಿಸುವಂತ ಕೆಲಸ ಮಾಡಬೇಕಿದೆ. ಬಾಬಾ ಸಾಹೇಬರ ಕನಸನ್ನ ನೆರವೇರಿಸುವ ನಿಟ್ಟಿನಲ್ಲಿ ಎಲ್ಲರೂ ಪ್ರವೃತ್ತರಾಗಬೇಕು. ಬಾಬಾ ಸಾಹೇಬರ ಬಗ್ಗೆ ಓದುವುದು, ಅರಿಯುವುದು ಮುಖ್ಯ. ಓದುವುದರಿಂದ ಬಾಬಾ ಸಾಹೇಬರು ಏನೆಲ್ಲ ಹೇಳಿದ್ದಾರೆ ಅನ್ನುವುದನ್ನು ಅರಿತು ನಮಗೆ ನಾವೇ ಅನುಸರಿಸಲು ಸಾಧ್ಯವಾಗುತ್ತದೆ. ಅದೇ ಪೂಜೆ ಮಾಡುವುದರಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ”.

Advertisements

” ಬಾಬಾ ಸಾಹೇಬರ ಬದುಕೇ ಹೋರಾಟ. ನಾವು, ನೀವೆಲ್ಲ ಅನುಸರಿಸುವಂತೆ ಆಗಬೇಕು ಮನೆ ಮನಗಳಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿನಿತ್ಯ ಅವರ ಆಶಯಗಳಂತೆ ಸಾಗಿದರೆ ನಾವು ನಿಜಕ್ಕೂ ಸಲ್ಲಿಸುವ ಗೌರವವಾಗಿರುತ್ತದೆ. ಸರ್ವ ಶ್ರೇಷ್ಠವಾದ ಸಂವಿಧಾನ ನೀಡಿದ ಬಾಬಾ ಸಾಹೇಬರು ಆಚರಣೆಯ, ಪೂಜೆಯ ಭಾಗವಾಗದೆ ಬದುಕಿನ ದಾರಿದೀಪವಾಗಬೇಕು. ಹೋರಾಟದ ಕಿಚ್ಚಾಗಿ, ಶೋಷಿತ ವರ್ಗಗಳಿಗೆ ನ್ಯಾಯ ಲಭಿಸುವಂತ ಕೆಲಸ ಮಾಡಬೇಕು. ಮುಂದಿನ ಮಕ್ಕಳು ನೆಮ್ಮದಿಯ ಬದುಕನ್ನು ಕಾಣಲು ಸಾಹೇಬರು ಸ್ಫೂರ್ತಿ ಯಾಗಬೇಕು ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ದುಪ್ಪಟ್ಟು ಕಂದಾಯ ವಸೂಲಾತಿ ಇನ್ನೆರೆಡು ದಿನಗಳಲ್ಲಿ ರದ್ದುಗೊಳ್ಳಲಿದೆ : ಶಾಸಕ ಜಿ. ಡಿ. ಹರೀಶ್ ಗೌಡ

ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯಕೋಟೆ, ಶಂಭುಲಿಂಗ ಸ್ವಾಮಿ, ಅಲಗೂಡು ಶಿವಕುಮಾರ್, ಹೆಗ್ಗನೂರು ನಿಂಗರಾಜು, ಅತ್ತಿಕುಪ್ಪೆ ರಾಮಕೃಷ್ಣ, ರೈತ ಸಂಘದ ಹೊಸೂರು ಕುಮಾರ್, ವರದರಾಜು, ಮಹದೇವಮ್ಮ, ರಾಜು ಚಿಕ್ಕ ಹುಣಸೂರು, ಸಿದ್ದೇಶ್, ಪುಟ್ಟರಾಜು, ನಾರಾಯಣ, ವೆಂಕಟೇಶ್ ಗೌರಿಪುರ, ಹಳೇಪುರ ಕೃಷ್ಣ, ಕಾಯಕ ಸಮಾಜದ ಹೊನ್ನಪ್ಪ,ಚೆಲುವರಾಜು ಪ್ರಸನ್ನ, ಗಿರೀಶ್, ಸಾಲಿಡಾರಿಟಿ ಮೂವ್ಮೆಂಟ್ ನ ಮುದಾಸಿರ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X