ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರ ಸಂವಿಧಾನ ವಿರೋಧಿ ಕಾಯಿದೆವಾಗಿದೆ.ಇದರ ವಿರುದ್ಧವಾಗಿ ದೇಶಾದ್ಯಂತ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಹೋರಾಟಕ್ಕೆ ಕರೆ ನೀಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶೇಖ್ ಬಾಬಾ ಹುಸೇನ್ ಹೇಳಿದರು.
ಮಾನ್ವಿ ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಈ ಅಸಂವಿಧಾನಿಕ ತಿದ್ದುಪಡಿಯ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪವಾಗಿದೆ. ಇದನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಖಂಡಿಸುತ್ತದೆ ಎಂದರು.
ಇದರ ಅಂಗವಾಗಿ ರಾಜ್ಯದ್ದಲಿ ವಕ್ಪ್ ಸಂರಕ್ಷಣೆ ನಮ್ಮ ಹೊಣೆ ಎಂಬ ಶೀರ್ಷಿಕೆ ಅಡಿಯಲ್ಲಿ ಏಪ್ರಿಲ್ 20 ರಿಂದ 27ರ ವರೆಗೆ ರಾಜ್ಯವ್ಯಾಪಿ ಚಳುವಳಿ ಹಮ್ಮಿಕೊಂಡಿದೆ. ಈ ಚಳುವಳಿಯ ಭಾಗವಾಗಿ ರಾಜ್ಯದಾದ್ಯಂತ ಪತ್ರಿಕಾ ಘೋಷ್ಠಿ, ಬಿತ್ತಿ ಪತ್ರ, ವಿಚಾರಗೋಷ್ಠಿಗಳು, ಪ್ರತಿಭಟನೆ, ಧರಣಿ ಸತ್ಯಾಗ್ರಹ, ಪಾದಯಾತ್ರೆ, ಸಹಿ ಸಂಗ್ರಹಣೆ, ಕರಪತ್ರ ಹಂಚಿಕೆ, ಹೀಗೆ ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಓರ್ವ ಗಂಭೀರ ಗಾಯ
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು. ಸರ್ಕಾರ ಈ ಕಾಯ್ದೆ ವಾಪಸ್ ಪಡೆಯವವರೆಗೂ ಹೋರಾಟ ನಡೆಸಲಾಗುವುದು, ಇದು ಕೇವಲ ಒಂದು ಸಮುದಾಯದ ವಿಷಯವಲ್ಲದೆ ಸಂವಿಧಾನ ವಿರೋಧಿ ನಡೆಯಾಗಿದ್ದು ರಾಜ್ಯದ ಎಲ್ಲಾ ನಾಗರಿಕರು ಈ ಹೋರಾಟಕ್ಕೆ ಬೆಂಬಲಿಸಬೇಕು’ ಎಂದು ಅವರು ಮನವಿ ಮಾಡಿದರು.
ಪಕ್ಷದ ಮುಖಂಡರಾದ ಶೇಖ್ ಫರೀದ್ ಉಮರಿ, ನಾಸೀರ್ ಅಲಿ, ಎಮ್ಎಎಚ್ ಮುಖೀಮ್, ಶೇಖ್ ಮಹೆಬೂಬ, ಹಬೀಬ್ ಸಹರಾ,ಯುನೂಸ್ ನಾಯ್ಕ, ಶೇಖ್ ಅಹ್ಮದ್ ಹುಸೇನ್ ಉಪಸ್ಥಿತರಿದ್ದರು.
