ಶಿಡ್ಲಘಟ್ಟ | ಸಂಪಾದನೆಯೊಂದಿಗೆ ಉಳಿತಾಯ ಮನೋಭಾವ ಬೆಳೆಸಿಕೊಳ್ಳಿ : ಈಶ್ವರಪ್ಪ

Date:

Advertisements

ಕೆಲಸ, ವ್ಯಾಪಾರ ಇನ್ನಿತರೆ ಮೂಲಗಳಿಂದ ಹಣ ಸಂಪಾದನೆ ಮಾಡುವ ಜತೆಗೆ ಹಣದ ನಿರ್ವಹಣೆ ಮತ್ತು ಉಳಿತಾಯ ಕೂಡ ಜೀವನದಲ್ಲಿ ಬಹಳ ಮುಖ್ಯ ಎಂದು ಎನ್‌ಆರ್‌ಎಲ್‌ಎಂ ಯೋಜನಾ ನಿರ್ದೇಶಕ ಈಶ್ವರಪ್ಪ ಸಲಹೆ ನೀಡಿದರು.

ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳದಲ್ಲಿ ಶ್ರೀತುಳಸಿ ಸಂಜೀವಿನಿ ಸಕ್ಷಮ್ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ಹಾಗೂ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಡಿಜಿಟಲ್‌ ಅರೆಸ್ಟ್‌, ಡಿಜಿಟಲ್‌ ಕಳ್ಳತನಗಳು ಹೆಚ್ಚಾಗಿವೆ. ಬಹಳಷ್ಟು ಮಂದಿ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ಇಂದು ನಷ್ಟದಲ್ಲಿದ್ದಾರೆ. ಉಳಿತಾಯವಾಗಲಿ, ಸಾಲವೇ ಆಗಲಿ ಬ್ಯಾಂಕ್ ನೊಂದಿಗೆ ವ್ಯವಹಾರ ಮಾಡುವುದು ಎಲ್ಲ ದೃಷ್ಟಿಯಿಂದಲೂ ಸುರಕ್ಷಿತ ಎಂದು ಸಲಹೆ ನೀಡಿದರು.

Advertisements

ಇದನ್ನೂ ಓದಿ : ಶಿಡ್ಲಘಟ್ಟ | ಪರಿಸರ ಸಂರಕ್ಷಣೆ ಘೋಷಣೆಗೆ ಸೀಮಿತವಾಗದಿರಲಿ : ನ್ಯಾ.ಮೊಹಮ್ಮದ್ ರೋಷನ್ ಷಾ

ಶ್ರೀತುಳಸಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಬಿರಾದಾರ್, ಡಿ.ಎಂ.ಮುನಿರಾಜು, ಎಫ್‌ಎಲ್ ಸಿಆರ್‌ಪಿ ಅಮರಾವತಿ, ತಾಲೂಕು ಅಭಿಯಾನ ನಿರ್ವಹಣಾ ಘಟಕದ ಬಾಲರಾಜ್, ಕೆನರಾ ಬ್ಯಾಂಕ್ ತರಬೇತಿ ಕೇಂದ್ರದ ಮಧುಪ್ರಿಯ, ಕೃಷಿ, ಪಶು ಸಖಿಯರು, ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X