ದಾವಣಗೆರೆ | ಪಹಲ್‌ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಗೆ ಎಸ್‌ಯುಸಿಐ(ಸಿ) ಖಂಡನೆ

Date:

Advertisements

“ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22, 2025 ರಂದು ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಭೀಕರ ಕುಕೃತ್ಯದ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು” ಎಂದು ದಾವಣಗೆರೆಯಲ್ಲಿ ಎಸ್‌ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ ಶ್ರೀಮತಿ ಕೆ.ಉಮಾ ಆಕ್ರೋಶ ವ್ಯಕ್ತಪಡಿಸಿದರು.‌

1001880743
ಜಮ್ಮು ಕಾಶ್ಮೀರ ಪೊಲೀಸ್, ಸೇನೆ ಬಿಡುಗಡೆ ಮಾಡಿರುವ ಭಯೋತ್ಪಾದರ ರೇಖಾ ಚಿತ್ರ

“ಜಮ್ಮು ಮತ್ತು ಕಾಶ್ಮೀರದಲ್ಲಿನ ಆರೋಪಿತ ‘ಜನಸಂಖ್ಯಾ ಬದಲಾವಣೆ’ಗೆ ಪ್ರತೀಕಾರವಾಗಿ ಕಾಶ್ಮೀರದ ಪಹಲ್ಗಾಮ್ ಬಳಿ ನಿಷೇಧಿತ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಸಹ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಕರ್ನಾಟಕದ ಇಬ್ಬರು ಸೇರಿದಂತೆ, 28 ಪ್ರವಾಸಿಗರನ್ನು ಹತ್ಯೆ ಮಾಡಿ, ಹತ್ತಾರು ಜನರನ್ನು ಗಾಯಗೊಳಿಸಿರುವುದಕ್ಕೆ ದೇಶದ ಸಮಸ್ತ ಜನರೊಂದಿಗೆ, ನಾವು ಕೂಡ ತೀವ್ರ ಆಘಾತವಾಗಿದೆ. ಇದು ಹೀನ ಕೃತ್ಯ” ಎಂದು ಘಟನೆಯನ್ನು ಖಂಡಿಸಿದರು.

1001880747
ಸಾಂದರ್ಭಿಕ ಚಿತ್ರ, ಕೃಪೆ.

“ಕೇಂದ್ರ ಸರ್ಕಾರ ಭಾರೀ ಪ್ರಮಾಣದ ಮಿಲಿಟರಿ ಸನ್ನದ್ಧತೆ ಮತ್ತು ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿಕೊಂಡರೂ, ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕ ಜನಸಾಮಾನ್ಯರ ರಕ್ಷಣೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯವನ್ನು ಇದು ಸಾಬೀತುಪಡಿಸುತ್ತದೆ.
ಎಲ್ಲಾ ಮೃತರ ಕುಟುಂಬಗಳು ಮತ್ತು ಗಾಯಗೊಂಡವರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕು ಮತ್ತು ಸಂತ್ರಸ್ತ ಕುಟುಂಬಗಳ ಸರಿಯಾದ ಪುನರ್ವಸತಿಯನ್ನು ನೋಡಿಕೊಳ್ಳಬೇಕು” ಎಂದು ಒತ್ತಾಯಿಸಿದರು.‌

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಾತಿ ಗಣತಿ ವರದಿ ವಿರೋಧ ಹಾಸ್ಯಾಸ್ಪದ, ವಿರೋಧಿಗಳಿಗೆ ಅಹಿಂದ ವರ್ಗಗಳ ತಕ್ಕ ಉತ್ತರ; ಜಿಬಿ ವಿನಯ್ ಕುಮಾರ್.

“ಈ ಭೀಕರ ಕುಕೃತ್ಯ ಎಸಗಿದ, ಯೋಜಿಸಿದ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರ ಮತ್ತು ದೇಶದ ಎಲ್ಲಾ ವರ್ಗದ ಜನರು ಈ ಭಯಾನಕ ಹತ್ಯೆಯ ವಿರುದ್ಧ ತಮ್ಮ ಬಲವಾದ ಪ್ರತಿಭಟನೆಯ ಧ್ವನಿಯನ್ನು ಎತ್ತಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X