ರಾಯಚೂರು | ʼಹಟ್ಟಿ ಕಾರ್ಮಿಕ ಸಂಘʼದ ಚುನಾವಣೆ ನಡೆಸಲು ಒತ್ತಾಯ

Date:

Advertisements

ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆ ನಡೆಸಬೇಕು ಎಂದು ಸೆಂಟರ್ ಅಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಂಘದ ವತಿಯಿಂದ ಕಂಪನಿ ಆಡಳಿತಕ್ಕೆ ಮನವಿ ಸಲ್ಲಿಸಿದರು.

ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಮೂರು ವರ್ಷದ ಅವಧಿ ಪೂರ್ಣಗೊಂಡು ಸುಮಾರು ದಿನಗಳು ಕಳೆದಿವೆ.ಅಭಿವೃದ್ಧಿ ಕುಂಠಿತಗೊಂಡಿದೆ ಚುನಾವಣೆ ನಡೆಸಿ ಮುಂದಿನ ಕಾರ್ಯ ಚಟುವಟಿಕೆಗಳು ನಡೆಯಬೇಕು ಎಂದು ಒತ್ತಾಯಿಸಿದರು

ಈ ಬಗ್ಗೆ ಕಾರ್ಮಿಕ ಮುಖಂಡ ಅನೀಫ್ ಮಾತನಾಡಿ ಚುನಾವಣೆಗಳನ್ನು ಸಮಯಕ್ಕೆ ತಕ್ಕಂತೆ ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಾಗಿದೆ.ಚುನಾವಣೆಗಳು ಉದ್ಯೋಗಿಗಳ ಪ್ರಾತಿನಿಧ್ಯವನ್ನು ಸದೃಢಗೊಳಿಸಿ, ನಿರ್ವಹಣಾ ಮತ್ತು ಕಾರ್ಮಿಕರ ನಡುವಿನ ಸಂಬಂಧವನ್ನು ಮತ್ತಷ್ಟು ಉತ್ತಮಗೊಳಿಸುತ್ತದೆ. ಉದ್ಯೋಗಿಗಳ ನ್ಯಾಯಯುತ ಪ್ರತಿನಿಧಿಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಸಂಸ್ಥೆಯೊಳಗಿನ ಪ್ರಜಾಪ್ರಭುತ್ವಾತ್ಮಕ ವ್ಯವಸ್ಥೆ ಸಕ್ರಿಯವಾಗಿರಿಸಲು ಇದು ಬಹಳ ಅಗತ್ಯವಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಓರ್ವ ಗಂಭೀರ ಗಾಯ

ಕಂಪನಿಯಲ್ಲಿ ಅಭಿವೃದ್ಧಿ,ಹಾಗೂ ಇನ್ನಿತರ ಕಾರ್ಯ ಚಟುವಟಿಕೆಗಳು ನಡೆಯಬೇಕಾದರೆ ಮತ್ತು ಕಾರ್ಮಿಕರ ಬೇಡಿಕೆಗಳನ್ನು ಸಮಸ್ಯೆಗಳನ್ನು ಈಡೇರಿಸಲು ಚುನಾವಣೆ ಮುಖಾಂತರ ಆಯ್ಕೆಯಾಗಿ ಸೇವೆ ಸಲ್ಲಿಸಬೇಕಾಗಿದೆ.ಚುನಾವಣೆ ನಡೆಯದಿದ್ದರೆ ಖಾಸಗೀಕರಣ ವ್ಯವಸ್ಥೆ ಉಂಟಾಗಬಹುದು ಹಾಗಾಗಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆಗಳನ್ನು ಶೀಘ್ರದಲ್ಲಿ ನಡೆಸಬೇಕು ಎಂದು ಹೇಳಿದರು.

ಈ ವೇಳೆ ಕಾರ್ಮಿಕ ಮುಖಂಡ ನಿಂಗಪ್ಪ ಎಂ ವೀರಾಪುರ , ಅಲ್ಲಾಬಕ್ಷ,ಫಕ್ರುದ್ದೀನ್ ಮುಲ್ಲಾ , ವೆಂಕಟೇಶ್ ಗೋರ್ಕಲ್, ನರಸಣ್ಣ ನಾಯಕ ,ಶಬ್ಬಿರ ಜಾಲಹಳ್ಳಿ ಇನ್ನಿತರರು ಹಾಜರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

Download Eedina App Android / iOS

X