ವಿಜಯಪುರ | ಫುಟ್ಪಾತ್‌ ಮೇಲಿನ ಅಂಗಡಿಗಳ ತೆರವು; ಪುರಸಭೆ ನಡೆ ವಿರೋಧಿಸಿ ದಸಂಸ ಪ್ರತಿಭಟನೆ

Date:

Advertisements

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಇಂದು ಬೆಳಗ್ಗೆ ಪುರಸಭೆ ಅಧಿಕಾರಿಗಳು ಫುಟ್ಬಾತ್ ಮೇಲಿನ ಅನಧಿಕೃತ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯಚರಣೆ ನಡೆಸಿದ್ದಾರೆ.

ಪುರಸಭೆ ಮುಖ್ಯ ಅಧಿಕಾರಿ ರುದ್ರೇಶ್ ಛತ್ತರಗಿ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದ ಬಸ್ ನಿಲ್ದಾಣದ ಮುಂಭಾಗ, ಮುದ್ದೇಬಿಹಾಳ ರಸ್ತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಪಿ ಐ ಗುರುಶಾಂತ್ ದಾಶಾಲ್ ಪೊಲೀಸ್ ಭದ್ರತೆ ಒದಗಿಸಿದ್ದರು. ಇನ್ನು ಇದೇ ಸಂದರ್ಭದಲ್ಲಿ ಅನಧಿಕೃತ ಅಂಗಡಿಗಳನ್ನು ವಶಕ್ಕೆ ಪಡೆಯಲಾಯಿತು.

ಈ ವೇಳೆ ರುದ್ರೇಶ್ ಛತ್ತರಗಿ ಮಾತನಾಡಿ, “ಪುರಸಭೆಯಿಂದ 2-3 ಬಾರಿ ಫುಟ್ಪಾತ್‌ ತೆರವು ಕಾರ್ಯಾಚರಣೆ ಮಾಡಲಾಗಿತ್ತು. ಮತ್ತೆ ಕೆಲವರು ಇಲ್ಲೇ ಅಂಗಡಿ ಹಾಕಿದ್ದರು. ಇದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು. ಮೇಘ ಮಾರುಕಟ್ಟೆ ಪಕ್ಕದಲ್ಲಿ ಅಂಗಡಿ ಹಾಕಲು ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಫುಟ್ಪಾತ್‌ ಮೇಲೆ ಅಂಗಡಿ ಹಾಕಿದರೆ ಅಂತವರ ಅಂಗಡಿ ಸೀಜ್ ಮಾಡಿ ಕ್ರಮ ಕೈಗೊಳ್ಳಲಾಗುವುದು” ಎಂದರು.

Advertisements

ತೆರವು ವಿರೋಧಿಸಿ ಪ್ರತಿಭಟನೆ:

ಬೆಳ್ಳಂ ಬೆಳಗ್ಗೆ ನಡೆದ ತೆರವು ಕಾರ್ಯಚರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ದಸಂಸ ಮುಖಂಡ ಅಶೋಕ ಚಲವಾದಿ, “ಪಟ್ಟಣದಲ್ಲಿ ಕೆಲ ಗಣ್ಯ ವರ್ತಕರು ಸೇಫ್ಟಿ ಮಾಡಿಕೊಂಡಿದ್ದಾರೆ. ಪುರಸಭೆ ಮುಖ್ಯ ಅಧಿಕಾರಿಗಳು ಅವರನ್ನೆಲ್ಲ ಬಿಟ್ಟು ಬಡ ವ್ಯಾಪಾರಸ್ಥರ ಮೇಲೆ ದೌರ್ಜನ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮುಖ್ಯ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಿ ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ತಹಶೀಲ್ದಾರರ ಕಚೇರಿ ಮುಂಭಾಗದಲ್ಲಿ ಆಹೋರಾತ್ರಿ ಧರಣಿ ನಡೆಸಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಪ್ರತಿಭಟನೆಯಲ್ಲಿ ಪರಶುರಾಮ ದಿಂಡಿವಾರ, ಗುರು ಗುಡಿಮನಿ, ಮಹಾಂತೇಶ ಚಕ್ರವರ್ತಿ, ಗಂಗಾಧರ ಆರ್ಯರ, ಮಹೇಶ ಕೊಡಗಾನೂರ, ಯಮನೂರಿ ಚಲವಾದಿ, ಸಂತೋಷ ದಳಪತಿ, ಚಂದ್ರಶೇಖರ ನಾಲತವಾಡ, ಪ್ರಶಾಂತ ಭೂತನಾಳ, ಮುತ್ತು ಬೀದರಿ, ರವಿ ಮ್ಯಾಗೇರಿ, ಚಿದಾನಂದ ಪರನಾಕರ, ಸಂಜೆಯ ಬಿಸನಾಳ, ಲಕ್ಷ್ಮಣ ಹಲ್ಯಾಳ ಹಾಗೂ ಸಂಗಪ್ಪ ಛಲವಾದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X