ಬೀದರ್ | ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧದ ಪ್ರತಿಭಟನೆ ಮುಂದೂಡಿಕೆ

Date:

Advertisements

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿಗೊಳಿಸಿರುವುದನ್ನು ವಿರೋಧಿಸಿ ವಕ್ಫ್ ತಿದ್ದುಪಡಿ ಕಾಯ್ದೆ 2025 ವಿರೋಧಿ ಜಂಟಿ ಕ್ರಿಯಾ ಸಮಿತಿ ನಗರದಲ್ಲಿ ಏಪ್ರಿಲ್ 24 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮುಂದೂಡಿದೆ.

ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ನಗರದ ಜಾಮಾ ಮಸೀದಿಯಲ್ಲಿ ಬುಧವಾರ ತುರ್ತು ಸಭೆ ನಡೆಸಿದ ಮುಸ್ಲಿಮ್ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರಮುಖರು ಪ್ರತಿಭಟನೆ ಮುಂದೂಡುವ ನಿರ್ಣಯ ಕೈಗೊಂಡರು.

ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ನಿರ್ದೇಶನದ ಮೇರೆಗೆ ಪ್ರತಿಭಟನೆ ಮುಂದೂಡಲಾಗಿದೆ ಎಂದು ಮಂಡಳಿಯ ಸದಸ್ಯರೂ ಆದ ವಕ್ಫ್ ತಿದ್ದುಪಡಿ ಕಾಯ್ದೆ 2025 ವಿರೋಧಿ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಡಾ.ಅಬ್ದುಲ್ ಖದೀರ್ ತಿಳಿಸಿದರು.

Advertisements

ಪಹಲ್ಗಾಮ್ ದಾಳಿಗೆ ಖಂಡನೆ :

ಕಾಶ್ಮೀರದ ಪಹಲ್ಗಾಮ್ ಸಮೀಪದ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಘಟನೆಯನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು ಎಂದು ಹೇಳಿದರು.

ಪ್ರವಾಸಿಗರ ಮೇಲಿನ ದಾಳಿ ಅಮಾನವೀಯ. ಅತ್ಯಂತ ನೋವಿನ ಸಂಗತಿ. ಸಂಕಷ್ಟದ ಈ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯ ಸೇರಿದಂತೆ ದೇಶದ ಎಲ್ಲರೂ ಸಂತ್ರಸ್ತ ಕುಟುಂಬಗಳ ಪರ ನಿಲ್ಲಲಿದ್ದಾರೆ. ಅವರ ದುಃಖದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಮಹ್ಮಮದ್ ಗೌಸ್, ಸದಸ್ಯ ಮನ್ಸೂರ್ ಅಹಮ್ಮದ್ ಖಾದ್ರಿ, ಪ್ರಮುಖರಾದ ಸರ್ಫರಾಜ್ ಹಾಸ್ಮಿ, ಅಬ್ದುಲ್ ಅಜೀಜ್ ಮುನ್ನಾ, ಮೌಲಾನಾ ಮೋನಿಸ್ ಕಿರ್ಮಾನಿ, ಡಾ.ಜಿಯಾವುಲ್ ಇಸ್ಲಾಂ ಕುಂಜೆನಶೀನ್, ಕಾಂಗ್ರೆಸ್ ಬೀದರ್ ನಗರ ಘಟಕದ ಅಧ್ಯಕ್ಷ ಮಹಮ್ಮದ್ ಯುಸೂಫ್, ರಫೀಕ್ ಅಹಮ್ಮದ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X