‘ಪಕ್ಷದ ನಾಯಕತ್ವಕ್ಕೆ ಎತ್ತಿನ ಹಿಂಭಾಗದಲ್ಲಿ ಒದ್ದಂತೆ ಒದೆಯಬೇಕು’ ಎಂದ ತೆಲಂಗಾಣ ಬಿಜೆಪಿ ಮುಖಂಡ; ವಿಡಿಯೋ ವೈರಲ್

Date:

Advertisements

ತೆಲಂಗಾಣದ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಲೋಕಸಭಾ ಸದಸ್ಯ ಎ ಪಿ ಜಿತೇಂದರ್ ರೆಡ್ಡಿ ಅವರ ಟ್ವೀಟ್‌ವೊಂದು ವಿವಾದಕ್ಕೆ ಗುರಿಯಾಗಿದೆ. ಟ್ರಕ್ ಹತ್ತಲು ಮೊಂಡು ಹಿಡಿದ ಕಾಡು ಎತ್ತಿನ ಹಿಂಭಾಗಕ್ಕೆ ವ್ಯಕ್ತಿಯೊಬ್ಬರು ಒದೆಯುತ್ತಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ವಿಡಿಯೋ ಈಗ ವೈರಲ್ ಆಗಿದೆ.

‘ಈ ಚಿಕಿತ್ಸೆಯು ತೆಲಂಗಾಣ ಬಿಜೆಪಿ ನಾಯಕತ್ವಕ್ಕೆ ಅಗತ್ಯವಾಗಿದೆ” ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರೂ ಆದ ಜಿತೇಂದರ್ ರೆಡ್ಡಿ ಟ್ವೀಟ್ ಮಾಡಿದ್ದಾರೆ. ಅದನ್ನು ಪಕ್ಷದ ಹಿರಿಯ ಮುಖಂಡರಾದ ಅಮಿತ್ ಶಾ, ಸುನಿಲ್ ಬನ್ಸಾಲ್, ಬಿ ಎಲ್ ಸಂತೋಷ್ ಮತ್ತು ಪಕ್ಷದ ಪ್ರಧಾನ ಕಚೇರಿಗೆ ಟ್ಯಾಗ್ ಮಾಡಿದ್ದಾರೆ.

ತೆಲಂಗಾಣ ಬಿಜೆಪಿಯ ಹಿರಿಯ ನಾಯಕರಾದ ಈಟೆಲ ರಾಜೇಂದರ್ ಮತ್ತು ಕೋಮಟಿರೆಡ್ಡಿ ರಾಜ್‌ಗೋಪಾಲ್ ಅವರು ಕೂಡ ತಮ್ಮ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿದ್ದರು.

Advertisements

ತೆಲಂಗಾಣದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಬಗ್ಗೆ ಪಕ್ಷದ ಕೆಲವು ನಾಯಕರೇ ತಿರುಗಿಬಿದ್ದಿದ್ದಾರೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಜಿತೇಂದರ್ ರೆಡ್ಡಿ ಕೂಡ ಟ್ವೀಟ್ ಮಾಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ: ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್; ತಕ್ಷಣವೇ ಶರಣಾಗುವಂತೆ ಸೂಚನೆ

ಜಿತೇಂದರ್ ರೆಡ್ಡಿ ಅವರ ಟ್ವೀಟ್ ಸೇರಿದಂತೆ ಕಳೆದ ಕೆಲವು ದಿನಗಳಲ್ಲಿ ತೆಲಂಗಾಣ ಬಿಜೆಪಿ ನಾಯಕರು ನೀಡಿರುವ ಕೆಲವು ಹೇಳಿಕೆಗಳು ಪಕ್ಷದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿವೆ. “ಈ ರೀತಿಯ ಅಶಿಸ್ತು ನಮ್ಮ ಪಕ್ಷದಲ್ಲಿ ಸ್ವೀಕಾರಾರ್ಹವಲ್ಲ” ಎಂದು ಪಕ್ಷವು ಎಚ್ಚರಿಸಿದೆ.

ಆದರೆ, ತಮ್ಮ ಟ್ವೀಟ್ ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೆ ಉಲ್ಟಾ ಹೊಡೆದಿರುವ ಜಿತೇಂದರ್ ರೆಡ್ಡಿ, ‘ಬಂಡಿ ಸಂಜಯ್ ಅವರ ನಾಯಕತ್ವನ್ನು ಪ್ರಶ್ನಿಸುತ್ತಿರುವವರಿಗೆ ಯಾವ ಬಗೆಯ ಟ್ರೀಟ್‌ಮೆಂಟ್ ಕೊಡಬೇಕು ಎನ್ನುವ ಅರ್ಥದಲ್ಲಿ ತಾನು ಟ್ವೀಟ್ ಮಾಡಿದ್ದು, ತಮ್ಮ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X