ವಿಜಯನಗರ | ಪಹಲ್‌ಗಾಮ್ ಭಯೋತ್ಪಾದಕರ ದಾಳಿಗೆ 28 ಜನರ ಸಾವು; ಡಿವೈಎಫ್ಐ ಖಂಡನೆ

Date:

Advertisements

ಕಾಶ್ಮೀರದ ಪಹಲ್‌ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸಾರನ್ ಕಣಿವೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯಿಂದ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಮಧುಸೂದನ್‌ ರಾವ್‌ ಹಾಗೂ ಹಾವೇರಿಯ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ತೀವ್ರವಾಗಿ ಖಂಡಿಸಿದೆ.

“ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರ್ಕಾರ ಕ್ರಮವಹಿಸಬೇಕು. ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದೆ.

“ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಫ್ಐ ಸಂತಾಪಗಳನ್ನು ಸಲ್ಲಿಸುತ್ತದೆ. ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ‘ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ’ ಎಂದು ಹೇಳುತ್ತಲೇ ಇದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಸರ್ಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು”‌ ಎಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಶ್ರೀನಗರ ಪ್ರವಾಸದಲ್ಲಿರುವ ಕುಟುಂಬಗಳಿಗೆ ಸತೋಷ್ ಲಾಡ್ ಭೇಟಿ

“ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದುಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ”‌ ಎಂಬುದು ಡಿವೈಎಫ್‌ಐ ಆಗ್ರಹ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X