ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ

Date:

Advertisements

ವಿಶ್ವ ಪುಸ್ತಕ ದಿನದಂದು (ಏಪ್ರಿಲ್ 23) ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ ನೀಡಲಾಗಿದೆ. ಜೊತೆಗೆ ವಿಶೇಷ ಉಪನ್ಯಾಸವೂ ನಡೆದಿದೆ.

ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶೇಷಾದ್ರಿಪುರದಲ್ಲಿರುವ ಚಿತ್ರಕಲಾ ಪರಿಷತ್‌ನ ದೇವರಾಜ ಅರಸು ಗ್ಯಾಲರಿಯಲ್ಲಿ ನೂತನ ಸಂಘಕ್ಕೆ ಚಾಲನೆ ನೀಡಲಾಗಿದೆ. ಜೊತೆಗೆ ಅಂಬೇಡ್ಕರ್ ಜಯಂತಿ, ವಿಶ್ವ ಪುಸ್ತಕ ದಿನಾಚರಣೆ, ವಿಶೇಷ ಉಪನ್ಯಾಸ ನಡೆಸಲಾಗಿದೆ. ‘ಸಮಕಾಲೀನ ಸಂದರ್ಭದಲ್ಲಿ ಪುಸ್ತಕಗಳು’ ವಿಷಯದಲ್ಲಿ ಸಾಹಿತಿ, ಚಿಂತಕ ರಹಮತ್ ತರೀಕೆರೆ ಅವರು ಉಪನ್ಯಾಸ ನೀಡಿದರು.

ಇದನ್ನು ಓದಿದ್ದೀರಾ? ವಿಶ್ವ ಪುಸ್ತಕ ದಿನದಂದು ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ

Advertisements

“ಪ್ರಸ್ತುತ ತಾಳ್ಮೆಯೇ ಇಲ್ಲದ ಯುವ ಸಮುದಾಯವಿದೆ. ಅವರು ದೊಡ್ಡ ಕೃತಿಗಳನ್ನು ಓದುತ್ತಾರಾ ಎಂಬುದು ಸಂಶಯ. ಡಿಜಿಟಲ್‌ನಲ್ಲಾದರೂ ಓದುವಂತಾಗಬೇಕು. ಪುಸ್ತಕ ಸಂಸ್ಕೃತಿ ನಶಿಸಿ ಹೋದರೂ ಓದುವ ಸಂಸ್ಕೃತಿ ಕೊನೆಯಾಗಬಾರದು ಎಂದು ರಹಮತ್ ತರೀಕೆರೆ ಹೇಳಿದರು.

ಚಾಲನೆ2

“ವ್ಯಾಪಾರದ ಉದ್ದೇಶದಿಂದಲೇ ಪುಸ್ತಕ ಉತ್ಪಾದಿಸುವ ವರ್ಗವೊಂದಿದೆ. ರಾಜಕೀಯಕ್ಕಾಗಿ ಇತಿಹಾಸವನ್ನೇ ತಿರುಚಿ ಬರೆಯುವ ವರ್ಗವೂ ದೊಡ್ಡದಿದೆ. ಆದರೆ ಜನರ ಒಳಿತಿಗಾಗಿ ಕೃತಿ ಪ್ರಕಟಿಸಿ ಸಂವೇದನಾಶೀಲ ನಾಗರಿಕರನ್ನು ಸೃಷ್ಟಿಸುವ, ರಾಜಕೀಯ ಪ್ರಜ್ಞೆಯನ್ನು ಮೂಡಿಸುವ ಮೂರನೇ ವರ್ಗ ಬೇಕಾಗಿದೆ” ಎಂದು ಅಭಿಪ್ರಾಯಿಸಿದರು.

ಚಾಲನೆ1

ಸಂಘದ ಲಾಂಛನ ಬಿಡುಗಡೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತೆ, ಪ್ರಕಾಶಕರು ಆರ್ ಪೂರ್ಣಿಮಾ ಆಗಮಿಸಿದ್ದರು. ಹೋರಾಟಗಾರ ಮಾವಳ್ಳಿ ಶಂಕರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X