ಬೀದರ್ | ಪುಸ್ತಕ ಓದು ಹವ್ಯಾಸದಿಂದ ವ್ಯಕ್ತಿತ್ವ ವಿಕಸನ: ಮನ್ಮತ ಡೋಳೆ

Date:

Advertisements

ಪುಸ್ತಕ ಓದುವ ಹವ್ಯಾಸದಿಂದ ಧನಾತ್ಮಕ ಚಿಂತನೆ ಬೆಳೆಯಲು ಸಾಧ್ಯ ಎಂದು ನಾಲಂದಾ ಪಿಯು ಕಾಲೇಜು ಪ್ರಾಚಾರ್ಯ ಡಾ.ಮನ್ಮತ ಡೋಳೆ ಹೇಳಿದರು.

ಔರಾದ್ ಪಟ್ಟಣದ ಪತ್ರಿಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ ವಿಶ್ವ ಪುಸ್ತಕ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಪುಸ್ತಕ ಓದು ಜ್ಞಾನ, ಕೌಶಲ್ಯ ಮತ್ತು ವಿಮರ್ಶಾತ್ಮಕ ಗುಣಗಳು ವೃದ್ಧಿಸಿ ವ್ಯಕ್ತಿತ್ವ ವಿಕಸನ ಸದೃಢಗೊಳ್ಳುತ್ತದೆ’ ಎಂದರು.

Advertisements

ನಿವೃತ್ತ ಉಪನ್ಯಾಸಕ ಕಲ್ಯಾಣರಾವ ಶೆಂಬೆಳ್ಳೆ ಮಾತನಾಡಿ, ‘ಪುಸ್ತಕ ಯಾವತ್ತಿಗೂ ವಾಸ್ತವ ಸತ್ಯವನ್ನು ತಿಳಿಸುತ್ತವೆ. ಯುವ ಸಮೂಹ ಮೊಬೈಲ್ ವ್ಯಾಮೋಹ ಬಿಟ್ಟು ಪುಸ್ತಕ ಓದುವ ಸಂಸ್ಕೃತಿ ರೂಢಿಸಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ಅಧ್ಯಕ್ಷ ಬಿ.ಎಂ.ಅಮರವಾಡಿ, ‘ವಿಶ್ವ ಪುಸ್ತಕ ದಿನಾಚರಣೆ ಹಿನ್ನೆಲೆ ಮತ್ತು ಮಹತ್ವ ಕುರಿತು ತಿಳಿಸಿದ ಅವರು ಪುಸ್ತಕಗಳ ಓದುವಿಕೆ ಸುಂದರ ಬದುಕು ರೂಪಿಸಬಲ್ಲವು ಎಂಬುದಕ್ಕೆ ಹಲವು ನಿದರ್ಶನಗಳಿವೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪುಸ್ತಕ ಓದುವ ಸಂಸ್ಕೃತಿ ಜೀವಂತವಾಗಿಟ್ಟ ಪುಸ್ತಕ ಪ್ರೇಮಿ ವಿಶ್ವನಾಥ ಕನಕೆ ಅವರಿಗೆ ತಾಲೂಕು ಕಸಾಪ ವತಿಯಿಂದ ವಿಶೇಷ ಸನ್ಮಾನ ಮಾಡಲಾಯಿತು. ಅಲ್ಲದೇ ಕಾಲೇಜಿನ ಕೆಲ ಮಕ್ಕಳಿಗೆ ಪುಸ್ತಕಗಳು ನೀಡಿ ಸಾಹಿತ್ಯದ ಕುರಿತು ಆಸಕ್ತಿ ಹೆಚ್ಚಿಸಿಕೊಳ್ಳಲು ವಿನಂತಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಯುಸಿ ಪರೀಕ್ಷೆ ಫಲಿತಾಂಶ : ಜಿಲ್ಲೆಯ 13 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

ಪತ್ರಿಸ್ವಾಮಿ ಕಾಲೇಜು ಪ್ರಾಚಾರ್ಯ ಎಸ್.ಕೆ ಅಖೀಲ್, ಉಪನ್ಯಾಸಕ ಅನೀಲ್, ಧನರಾಜ ಮಾನೆ, ಅಮೃತರಾವ ಬಿರಾದಾರ್, ಮಲ್ಲಿಕಾರ್ಜುನ ಟಂಕಸಾಲೆ, ಸಂದೀಪ ಪಾಟೀಲ್, ಅಮರ ಸ್ವಾಮಿ, ಆನಂದ ದ್ಯಾಡೆ, ಶಾಂತಾ ಕನಕೆ, ಕುಮಾರಿ ಸುಷ್ಮಾ ವಿಜಯಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X