ಬ್ರ್ಯಾಂಡ್‌ ಬೆಂಗಳೂರು | ಜುಲೈ 15ರವರೆಗೆ ಸಲಹೆ ನೀಡುವ ಅವಧಿ ವಿಸ್ತರಣೆ

Date:

Advertisements
  • ಸಾರ್ವಜನಿಕರ ಅಭಿಪ್ರಾಯ ಪಡೆಯುವ ಉದ್ದೇಶದಿಂದ ‘ಬ್ರ್ಯಾಂಡ್‌ ಬೆಂಗಳೂರು’ ಪೋರ್ಟಲ್‌ ಆರಂಭ
  • ನಾಗರಿಕರಿಂದ ನಿರೀಕ್ಷೆಗೂ ಮೀರಿ ಸಲಹೆಗಳು ಬರುತ್ತಿರುವ ಹಿನ್ನೆಲೆ, ಅವಧಿ ವಿಸ್ತರಣೆ ಮಾಡಿದ ಸರ್ಕಾರ

ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರಂಭ ಮಾಡಿರುವ ‘ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನಕ್ಕೆ ಕಳೆದ ಹತ್ತು ದಿನಗಳಲ್ಲಿ ಸಾರ್ವಜನಿಕರಿಂದ ಬರೋಬ್ಬರಿ 20 ಸಾವಿರಕ್ಕೂ ಅಧಿಕ ಸಲಹೆಗಳು ಬಂದಿವೆ. ನಾಗರಿಕರಿಂದ ಸಲಹೆಗಳನ್ನು ಪಡೆಯುವ ಅವಧಿಯನ್ನು ಜೂನ್ 30 ರಿಂದ ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ನಗರ ಸಮಗ್ರ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರು ಮಾಡುವ ಉದ್ದೇಶದಿಂದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಬ್ರ್ಯಾಂಡ್‌ ಬೆಂಗಳೂರು ಅಭಿಯಾನ ಪ್ರಾರಂಭಿಸಿ, ಇದರ ನೇತೃತ್ವ ವಹಿಸಿದ್ದರು.

ಡಿ ಕೆ ಶಿವಕುಮಾರ್ ಅವರು ಸರ್ವಪಕ್ಷ ಶಾಸಕರ ಜೊತೆ ಹಾಗೂ ನಾನಾ ಕ್ಷೇತ್ರಗಳ ಗಣ್ಯರ ಜೊತೆ ಸಭೆ ನಡೆಸಿ ಸಲಹೆಗಳನ್ನು ಪಡೆದಿದ್ದಾರೆ. ಇದರ ಜತೆಗೆ ಸಾರ್ವಜನಿಕರ ಅಭಿಪ್ರಾಯ ಪಡೆಯುವ ಉದ್ದೇಶದಿಂದ ‘ಬ್ರ್ಯಾಂಡ್‌ ಬೆಂಗಳೂರು’ ಪೋರ್ಟಲ್‌ ಆರಂಭಿಸಿದ್ದರು. ನಾಗರಿಕರಿಗೆ ಜೂ.30ರವರೆಗೆ ಸಲಹೆ ಸಲ್ಲಿಸುವುದಕ್ಕೆ ಅವಕಾಶ ನೀಡಿದ್ದರು. ಇದೀಗ ಈ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.

Advertisements

ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು ನಾಗರಿಕರಿಂದ ಬೆಂಗಳೂರಿನ ಅಭಿವೃದ್ಧಿಗಾಗಿ ಏಳು ವಿಚಾರಗಳ ಬಗ್ಗೆ ಅಭಿಪ್ರಾಯ ಮತ್ತು ಸಲಹೆ ಪಡೆಯುವ ಸಲುವಾಗಿ ಜೂನ್ 21ರಂದು ಪ್ರತ್ಯೇಕ ವೆಬ್ ಫೋರ್ಟಲ್ www.brandbengaluru.karnataka.gov.in ಬಿಡುಗಡೆಗೊಳಿಸಿದ್ದರು.

ಜೂನ್ 30ರವರೆಗೆ ನಾಗರಿಕರು ಸಲಹೆಗಳನ್ನು ನೀಡುವಂತೆ ನಾಗರಿಕರಲ್ಲಿ ಮನವಿ ಮಾಡಲಾಗಿತ್ತು. ನಾಗರಿಕರಿಂದ ನಿರೀಕ್ಷೆಗೂ ಮೀರಿ ಸಲಹೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಾಗರಿಕರು ನೀಡುವ ಸಲಹೆಗಳ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಎಲ್ಲ ನಾಗರಿಕರು ಈ ಸದವಕಾಶವನ್ನು ಉಪಯೋಗಿಸಿಕೊಂಡು #BrandBengaluru, #BetterBengaluru ಸಮೀಕ್ಷೆಯಲ್ಲಿ ಪಾಲ್ಗೊಂಡು ಇನ್ನೂ ಹೆಚ್ಚು-ಹೆಚ್ಚು ಸಲಹೆಗಳನ್ನು ನೀಡುವ ಮೂಲಕ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ವಿನಂತಿಸಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ವಿದ್ಯಾರ್ಥಿಗಳಿಗೆ ಜುಲೈ 15ರವರೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ

ನಾಗರಿಕರು ವೆಬ್ ಪೋರ್ಟಲ್ www.brandbengaluru.karnataka.gov.in ಮೂಲಕ ಮಾತ್ರವಲ್ಲದೆ ವ್ಯಾಟ್ಸ್ಆಪ್ ಸಂಖ್ಯೆ: 9480685700 ಮೂಲಕವೂ ಸಲಹೆಗಳನ್ನು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1533ಗೆ ಕರೆಮಾಡಬಹುದಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X