ತಿಪಟೂರು | ಭೂಮಿ ಸಂರಕ್ಷಣೆ ಎಲ್ಲರ ಕರ್ತವ್ಯ : ಸಿ. ಎಫ್. ಮಹಮ್ಮದ್ ಆರಿಫುಲ್ಲ

Date:

Advertisements

ಭೂಮಿಯನ್ನು ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಹಮ್ಮದ್ ಆರಿಫುಲ್ಲ ಸಿ.ಎಫ್ ತಿಳಿಸಿದರು.

ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹೊಸ ಪಟ್ಟಣ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ತಿಪಟೂರು ಹಾಗೂ ವಿದ್ಯೋದಯ ಕಾನೂನು ಕಾಲೇಜಿನ  ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಭೂಮಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಸಕಲ ಜೀವರಾಶಿಗಳಿಗೆ ಆಶ್ರಯ ತಾಣವಾಗಿರುವ ಭೂಮಿಯನ್ನು ಪ್ರಸ್ತುತ ಮಾನವನು ತಮ್ಮ ಸ್ವಾರ್ಥ ಸಾಧನೆಯಿಂದ ಅದನ್ನು ಹಾಳು ಮಾಡುತ್ತಿದ್ದು, ಭೂಮಿಯನ್ನು ರಕ್ಷಣೆ ಮಾಡಬೇಕು ಎಂಬುದನ್ನು ಭಾರತದ ಸತ್ಪ್ರಜೆಯಾದ ನಾವುಗಳು ಎಲ್ಲರಲ್ಲಿಯೂ ಅರಿವು ಮೂಡಿಸಿ ಮುಂದಿನ ಪೀಳಿಗೆಗೆ ಆರೋಗ್ಯಯುತ ಪರಿಸರವನ್ನು ನಿರ್ಮಾಣ ಮಾಡಿಕೊಡಬೇಕು ಎಂದು ತಿಳಿಸಿದರು. 

 ಅಧಿಕ ಸಿವಿಲ್ ನ್ಯಾಯಾಧೀಶರಾದ ಮಧುಶ್ರೀ ಜಿ.ಎಸ್ ಮಾತನಾಡಿ  ನಾವು ಒಬ್ಬೊಬ್ಬರೂ ಒಂದೊಂದು ಗಿಡ ನೆಡುವ ನಿಟ್ಟಿನಲ್ಲಿ ಸುತ್ತಮುತ್ತ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರ ಕರ್ತವ್ಯ ಅತ್ಯಧಿಕವಾದದ್ದು, ಅಲ್ಲದೆ ನಿರುಪಯುಕ್ತ ವಸ್ತುಗಳನ್ನು ಪರಿಸರದಲ್ಲಿ ಬಿಸಾಡದೇ ಅವೆಲ್ಲವನ್ನು ಒಂದೆಡೆ ಸಂಗ್ರಹಿಸಿ ನಾಶಗೊಳಿಸುವ ನಿಟ್ಟಿನಲ್ಲಿ ಹಾಗೂ ಪ್ರಮುಖವಾಗಿ ಪ್ಲಾಸ್ಟಿಕ್ ಅನ್ನು ಬಳಸದೆ ಭೂಮಿಯನ್ನು ಸಂರಕ್ಷಣೆ ಗೊಳಿಸಬೇಕು ಎಂಬುದಾಗಿ ತಿಳಿಸಿದರು.

Advertisements

 ಕಾರ್ಯಕ್ರಮದಲ್ಲಿ  ತಾಲೂಕು ವಕೀಲರ ಸಂಘ ಅಧ್ಯಕ್ಷರು  ಬಿ.ಎನ್ ಅಜಯ್, ಕಾರ್ಯದರ್ಶಿ ಬಿ ಮಲ್ಲಿಕಾರ್ಜುನಯ್ಯ, ನ್ನಿತರರು ಹಾಜರಿದ್ದರು..

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X