ಉಡುಪಿ | ಪರ್ಮಿಟ್ ಇದ್ದೂ ಓಡಿಸದ ಖಾಸಗೀ ಬಸ್ ಮಾಲಕರ ಪರವಾನಿಗೆ ರದ್ದು ಪಡಿಸಿರಿ

Date:

Advertisements

ಕಳೆದ ಒಂದು ವರ್ಷದಿಂದ ಕುಂದಾಪುರ, ತ್ರಾಸಿ, ಮೊವಾಡಿ, ನಾಡ, ಪಡುಕೋಣೆ, ಕೋಣ್ಕಿ, ಬಡಾಕೆರೆ ಮಾರ್ಗವಾಗಿ ಓಡುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಖಾಸಗಿ ಬಸ್ ಮಾಲೀಕರ ಕುತಂತ್ರದಿಂದ ನಿಲುಗಡೆ ಆಗಿರುವುದನ್ನು ಪುನಃ ಆರಂಭಿಸಬೇಕೆಂದು ಆಗ್ರಹಿಸಿ ಇಂದು ನಾಡ ಮತ್ತು ಮೊವಾಡಿ ನೂರಾರು ನಾಗರಿಕರು ನಾಡ ಗ್ರಾಮ ಪಂಚಾಯತ್ ಎದುರುಗಡೆ ಧರಣಿ ನಡೆಸಿ ಪ್ರತಿಭಟಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ನಾಡ ಗ್ರಾಮ ಪಂಚಾಯತ್ ಸದಸ್ಯ ರಾಜೀವ ಪಡುಕೋಣೆ ಮಾತನಾಡಿ, ಈ ಗ್ರಾಮಗಳ ಬಸ್ ಸೇವೆಗಾಗಿ ಕಳೆದ 9 ತಿಂಗಳಿಂದ ಹೋರಾಟ ನಡೆಸಿ ಖಾಸಗೀ ಬಸ್ ಇಲ್ಲದ ಕಡೆಗಳಲ್ಲಿ ಪರವಾನಿಗೆ ಪಡೆಯಲಾಗಿದ್ದು ಉತ್ತಮ ಸೇವೆ ಸಲ್ಲಿಸಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸುಮಾರು 30 ಲಕ್ಷ ಪ್ರಯೋಜನ ಪಡೆದಿದ್ದಾರೆ ಆದರೆ ಖಾಸಗೀ ಬಸ್ ಮಾಲಕರು ಸುಳ್ಳು ಮಾಹಿತಿ ನೀಡಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಜನರಿಗೆ ಅನ್ಯಾಯ ಮಾಡಿದ್ದಾರೆ ಇದನ್ನು ಪ್ರಶ್ನಿಸಿ ಬೀದಿ ಹೋರಾಟ ಹಾಗೂ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದರು.

1005159431

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ:ಖಾಸಗೀ ಬಸ್ ಮಾಲಕರು ಎಲ್ಲಾ ಮಾರ್ಗಗಳಲ್ಲಿ ಪರ್ಮಿಟ್ ಪಡೆದರೂ ಬಹುತೇಕ ಕಡೆಗಳಲ್ಲಿ ಬಸ್ ಓಡಿಸದೇ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕೆಲವು ಮಾರ್ಗಗಳಲ್ಲಿ ಪರ್ಮಿಟ್ ಇಲ್ಲದೆಯೂ ಕಾನೂನು ಬಾಹಿರವಾಗಿ ಓಡುಸುತ್ತಿರುವವರ ವಿರುದ್ಧ ಪ್ರಾಧೀಕಾರದ ಕ್ರಮ ಕೈಗೊಂಡು ರದ್ದು ಪಡಿಸಬೇಕು ಎಂದು ಹೇಳಿದರು.

Advertisements

ಡಿವೈಎಫ್ಐ ಮುಖಂಡ ರಾಜೇಶ್ ಪಡುಕೋಣೆ ಮಾತನಾಡಿ, ಆಲೂರು ಹೊಯ್ಯಾಣ, ಅಕ್ಕಸಾಲಿ ಬೆಟ್ಟು ಮಾ ರ್ಗದಲ್ಲಿ ಪಕ್ಕಾ ಕೆಎಸ್ಸಾರ್ಟಿಸಿ ಪರ್ಮಿಟ್ ಇದ್ದರೂ ಕೂಡ ಸರಕಾರಿ ಬಸ್ ಓಡಿಸದೇ ಇರುವುದು ಜನರಿಗೆ ಅನುಮಾನ ಮೂಡುವಂತಾಗಿದೆ ಎಂದು ದೂರಿದರು.

ಪ್ರತಿಭಟನೆಯನ್ನುದ್ದೇಶಿಸಿ ಸ್ಥಳೀಯರಾದ ಫಿಲಿಪ್ ಡಿಸಿಲ್ವ, ಸಿಐಟಿಯು ಜಿಲ್ಲಾ ಮುಖಂಡರಾದ ಎಚ್ ನರಸಿಂಹ, ಜನವಾದಿ ಮಹಿಳಾ ಸಂಘಟನೆಯ ನಾಗರತ್ನ ನಾಡ ಮಾತನಾಡಿದರು. ಮನೋರಮ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ನಾಡ, ಡಿವೈಎಫ್ಐ ಮುಖಂಡ ನಿಸರ್ಗ, ಕಟ್ಟಡ ಕಾರ್ಮಿಕರ ಸಂಘದ ಗುಲಾಬಿ ಮೊವಾಡಿ, ಶಿವಾನಂದ ಮೊದಲಾದವರಿದ್ದರು.

ಮನವಿಯನ್ನು ಆರ್ ಟಿಓ ಅಧಿಕಾರಿ ಕಮಲ ಕುಮಾರ್, ಶಾಂತರಾಜ್, ಉದಯ ಶೆಟ್ಟಿ ಕುಂದಾಪುರ ಇವರಿಗೆ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಮೊಗವೀರ ಅವರಿಗೂ ಮನವಿ ನೀಡಲಾಯಿತು.
ಸಭೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಲಾಯಿತು ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X