ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಪುನರಾರಂಭಿಸಲು ಸಿಎಂ ಸಿದ್ದರಾಮಯ್ಯಗೆ ಆಗ್ರಹ

Date:

Advertisements
  • ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯಿಂದ ಸಿಎಂಗೆ ಪತ್ರ
  • ಡಿಪ್ಲೊಮಾ ಕೋರ್ಸ್‌ ರದ್ದು ಮಾಡಿರುವುದು ರೈತ ವಿರೋಧಿ ನಡೆ ಎಂದು ಟೀಕೆ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಡಿಪ್ಲೊಮಾ ಕೋರ್ಸ್‌ಗಳನ್ನು ರದ್ದು ಪಡಿಸಿರುವ ನಿರ್ಧಾರವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.

ಈ ಕುರಿತು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, “ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿರುವ ಕೃಷಿ ಡಿಪ್ಲೊಮಾ ಕೋರ್ಸ್‌ಗಳನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ರೈತ ವಿರೋಧಿಯಾಗಿದೆ” ಎಂದು ಟೀಕಿಸಿದ್ದಾರೆ.

“ಧಾರವಾಡ ಮತ್ತು ಬೆಂಗಳೂರಿನಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳು, ಕೃಷಿ ಅರಣ್ಯಕರಣ ಮತ್ತು ರೇಷ್ಮೆ ಸಾಕಾಣಿಕೆಗಳಲ್ಲಿ ಎರಡು ವರ್ಷಗಳ ಕನ್ನಡ ಮಾಧ್ಯಮ ಡಿಪ್ಲೊಮಾ ಕೋರ್ಸ್‌ಗಳ‌ ಪ್ರವೇಶಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೃಷಿ ವಿಶ್ವವಿದ್ಯಾಲಯಗಳು ಅಧಿಸೂಚನೆಯನ್ನು ಹಿಂಪಡೆದಿವೆ. ಇದರಿಂದಾಗಿ ಬಡ ವರ್ಗದ ರೈತಾಪಿ ಮಕ್ಕಳು ಕಡಿಮೆ ವೆಚ್ಚದಲ್ಲಿ ಕೃಷಿ ತರಬೇತಿ ಪಡೆಯುವಲ್ಲಿ ವಂಚಿತರಾಗಲಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಸ್ಥಗಿತ, ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಬರೆ ಎಳೆದ ಸರ್ಕಾರ!

“ಸರ್ಕಾರವು ಸಾಕಷ್ಟು ಹಣಕಾಸು ಬೆಂಬಲ ನೀಡದೇ ಇರುವದು ಸಹ ಕೋರ್ಸ್‌ ಸ್ಥಗಿತಕ್ಕೆ ಕಾರಣ ಎನ್ನಲಾಗುತ್ತಿದೆ. ಕೇವಲ 5 ಸಾವಿರ ರೂ.ಗಳ ಶುಲ್ಕದಲ್ಲಿ ರಾಜ್ಯದ ಬಡ ರೈತರ ಮಕ್ಕಳು ಈ ಕೋರ್ಸ್‌ಗೆ ಪ್ರವೇಶ ಪಡೆಯಬಹುದಿತ್ತು. ಅಲ್ಲದೇ ಇಂತಹ ಡಿಪ್ಲೊಮಾ ಕೋರ್ಸ್‌ಗಳನ್ನು ಪಾಸು ಮಾಡಿದ ಯುವಕರಿಗೆ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ದೊರೆಯುತ್ತಿದ್ದವು” ಎಂದು ಮನವರಿಕೆ ಮಾಡಿದ್ದಾರೆ.

“ರಾಜ್ಯ ಸರ್ಕಾರ ಕೂಡಲೇ ಕೃಷಿ ವಿಶ್ವವಿದ್ಯಾಲಯಗಳಿಗೆ ಸೂಕ್ತ ಆದೇಶ ನೀಡುವ ಮೂಲಕ ಕೃಷಿ ವಿಜ್ಞಾನ ಡಿಪ್ಲೊಮಾ ಕೋರ್ಸ್‌ಗಳನ್ನು ಮತ್ತೆ ಆರಂಭಿಸಲು ಸೂಚಿಸಬೇಕು” ಎಂದು ಪತ್ರ ಮೂಲಕ 11 ಸದಸ್ಯರು ಸಹಿಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕೋರಿದ್ದಾರೆ.

ಬಿಜೆಪಿ ಆದೇಶವನ್ನೇ ಮುಂದುವರಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ 2023-24ನೇ ಸಾಲಿನ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರದ ಆದೇಶ‌ಕ್ಕೆ ತಲೆಬಾಗಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ವಿವಿಗಳು ಹಿಂಪಡೆದಿವೆ. ಈ ಕುರಿತು ಈ ದಿನ.ಕಾಮ್‌ ವಿಶೇಷ ವರದಿ ಪ್ರಕಟಿಸಿತ್ತು.

ಕೃಷಿ ವಿಶ್ವವಿದ್ಯಾಲಯಗಳಲ್ಲಿ ದಶಕದ ಹಿಂದೆ ರಾಜ್ಯ ಸರ್ಕಾರ ಆರಂಭಿಸಿದ್ದ ಎರಡು ವರ್ಷದ ಡಿಪ್ಲೊಮಾ ಕೋರ್ಸ್‌ಗಳನ್ನು ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಸ್ಥಗಿತಗೊಳಿಸಿದೆ. ಪರಿಣಾಮ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಬರೆ ಎಳೆದಂತಾಗಿದೆ. ಕಾಂಗ್ರೆಸ್‌ ಸರ್ಕಾರ ಕೂಡ ಈ ಬಗ್ಗೆ ಪರಿಶೀಲಿಸದೆ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದುವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X