ಶಿವಮೊಗ್ಗ | ಅಂಬೇಡ್ಕರ್ ಕುರಿತು ಅವಹೇಳನ ರಾತ್ರೋ ರಾತ್ರಿ ಪ್ರತಿಭಟನೆ

Date:

Advertisements

ಆನಂದಪುರದ ಎಂ. ಎಸ್ ಎಲೆಕ್ಟ್ರಾನಿಕ್ಸ್ ಅಂಗಡಿಯ ಮಾಲೀಕರಾದ ರಾಘವೇಂದ್ರ ಎಂಬುವವರು ಗೆಳೆಯರ ಬಳಗ ವಾಟ್ಸಪ್ ಗ್ರೂಪ್ ನಲ್ಲಿ ಸಂವಿಧಾನ ಹಾಗೂ ಅಂಬೇಡ್ಕರ್ ವಿರೋಧಿಯಾಗಿ ಮೆಸೇಜನ್ನು ಮಾಡಿದ್ದು ಇದನ್ನು ಬಲವಾಗಿ ವಿರೋಧಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಜೈ ಭೀಮ್ ಸಂಘಟನೆ ರಾತ್ರೋರಾತ್ರಿ ಆನಂದಪುರ ಬಸ್ ನಿಲ್ದಾಣದಲ್ಲಿ ಧರಣಿ ಮಾಡಿದರು .

ದಲಿತ ಸಂಘರ್ಷ ಸಮಿತಿಯ ತಾಲೂಕು ಅಧ್ಯಕ್ಷರಾದ ಅಕ್ಷಯ್ ಮಾತನಾಡಿ ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ಅವ್ಯಾಚ್ಯ ಶಬ್ದದಿಂದ ಮೆಸೇಜ್ ಮಾಡಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ.ರಾಘವೇಂದ್ರನು ಸಂವಿಧಾನ ಬದಲಾಯಿಸಬೇಕೆಂಬ ಆಶಯವನ್ನು ಹೊಂದಿರುವ ಹಾಗೆ ಕಾಣುತ್ತದೆ. ಅಷ್ಟು ಕೇವಲವಾಗಿ ಬಿಟ್ಟಿದ್ಯ ನಮ್ಮ ಅಂಬೇಡ್ಕರ್ ಹಾಗೂ ಅವರು ಬರೆದ ಸಂವಿಧಾನ ಇವರಿಗೆಗೆ ಎಂದು ಬಲವಾಗಿ ವಿರೋಧಿಸಿದರು.ಸಾರ್ವಜನಿಕವಾಗಿ ಬಸ್ ನಿಲ್ದಾಣದಲ್ಲಿ ರಾಘವೇಂದ್ರ ಕ್ಷಮಾಪಣೆ ಕೇಳಬೇಕು ಇಲ್ಲವಾದರೆ ಅವರ ವಿರುದ್ಧ ದೂರು ದಾಖಲಿಸುತ್ತೇವೆ ಮತ್ತು ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಹೀಗೆ ಮುಂದುವರಿಯುವುದು ಎಂದು ಸೂಚಿಸಿದರು.

1001515918

ಜೈ ಭೀಮ್ ಸಂಘಟನೆ ಅಧ್ಯಕ್ಷ ವಿಕಾಸ್ ಮಾತನಾಡಿ ಅಂಬೇಡ್ಕರ್ ಬಗ್ಗೆ ಯಾರಾದರು ಕೆಟ್ಟದಾಗಿ ಮಾತಾಡಿದರೆ ನಮ್ಮ ಸಂಘಟನೆಯವರು ಕೈಕಟ್ಟಿ ಕೂರುವುದಿಲ್ಲ ಇದರ ವಿರುದ್ಧ ಹೋರಾಟದ ಮೂಲಕ ಉತ್ತರ ನೀಡುತ್ತೇವೆ ಎಂದರು.

Advertisements

ದಲಿತ ಸಂಘರ್ಷ ಸಮಿತಿಯ ಉಪಾಧ್ಯಕ್ಷ ನಾಗರಾಜ್ ಮಾತನಾಡಿ ಈ ದೇಶದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬದುಕುವ ಹಕ್ಕನ್ನು ಅಂಬೇಡ್ಕರ್ ಅವರು ನೀಡಿದ್ದಾರೆ ಅಂತಹ ವ್ಯಕ್ತಿಯ ಬಗ್ಗೆ ಯಾರಾದರು ಸೊಕ್ಕಿನಿಂದ ಇಲ್ಲಸಲ್ಲದ ಆರೋಪ ಮಾಡಿದರೆ ಅವರ ಸೊಕ್ಕನ್ನು ನಮ್ಮ ಸಂಘಟನೆ ಅಡಗಿಸುತ್ತೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಸಂಚಾಲಕರು ಅಮಿತ್,ದಲಿತ ಸಂಘರ್ಷ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯ್,ಜೈ ಭೀಮ್ ಉಪಾಧ್ಯಕ್ಷರು ಸುದೀಪ್ ,ಹೇಮಂತ್,ಚರಣ, ನವೀನ್,ಪೃಥ್ವಿ,ಸಂತು,ಮಂಜುನಾಥ್, ಸುನೀಲ್ ಮತ್ತು ಜೈ ಭೀಮ್ ಸಂಘಟನೆ ಹಾಗೂ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಹೋರಾಟದಲ್ಲಿ ಭಾಗಿಯಾಗಿದ್ದರು.

ವರದಿ ಅಮಿತ್ ಆರ್ ಆನಂದಪುರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X