ಬೆಂಗಳೂರು | ವಿಮಾನದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

Date:

Advertisements
  • ಸಿಬ್ಬಂದಿ ಸಲಹೆ ಮೇರೆಗೆ ವಿಮಾನ ನಿಲ್ದಾಣದ ಪೊಲೀಸ್‌ ಠಾಣೆಗೆ ದೂರು
  • ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ದೋಹಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ 51 ವರ್ಷದ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆತನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಜೂನ್ 27ರಂದು ನಡೆದಿದ್ದು, ಆರೋಪಿಯನ್ನು ತಮಿಳುನಾಡಿನ ಶಿವಗಂಗಾ ನಿವಾಸಿ ಅಮ್ಮವಾಸಾಯಿ ಮುರುಗೇಶನ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಓ) ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ತಿಳಿದುಬಂದಿದೆ.

ದೋಹಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪೋಷಕರೊಂದಿಗೆ 13 ವರ್ಷದ ಬಾಲಕಿ ಪ್ರಯಾಣಿಸುತ್ತಿದ್ದಳು. ಈ ವೇಳೆ, ಬಾಲಕಿಯ ಪಕ್ಕದ ಆಸನದಲ್ಲಿ ಕುಳಿತಿದ್ದ ಆರೋಪಿ ಪ್ರಯಾಣದ ಸಮಯದಲ್ಲಿ ಬಾಲಕಿಗೆ ತಿಂಡಿ-ನೀರು ಕೇಳುವ ನೆಪದಲ್ಲಿ ಆಕೆಯ ಖಾಸಗಿ ಅಂಗಾಂಗಗಳನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.  

Advertisements

ಬಾಲಕಿಯ ತಾಯಿ ತಿಂಡಿ-ನೀರು ಏನು ಬೇಡ ಎಂದು ಆರೋಪಿಗೆ ಹೇಳಿದ್ದರು ಕೂಡ ಆತ ಪದೇ ಪದೇ ತಿಂಡಿ-ನೀರು ಕೇಳುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುವುದನ್ನು ಮುಂದುವರೆಸಿದ್ದಾನೆ. ಬಳಿಕ ಬಾಲಕಿ ತಾಯಿ ವಿಮಾನದ ಸಿಬ್ಬಂದಿಗೆ ಈ ಬಗ್ಗೆ ತಿಳಿಸಿದ್ದಾರೆ. ಸಿಬ್ಬಂದಿ ಬಾಲಕಿ ಕುಳಿತ ಆಸನದಿಂದ ಮತ್ತೊಂದು ಆಸನಕ್ಕೆ ಸ್ಥಳಾಂತರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ₹500 ಕೋಟಿ ಅಕ್ರಮ ಆಸ್ತಿ | ತಹಶೀಲ್ದಾರ ಅಜಿತ್ ಕುಮಾರ್ ರೈ ಅಮಾನತು ಮಾಡಿದ ಕಂದಾಯ ಇಲಾಖೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಬಳಿಕ ಬಾಲಕಿಯ ಪೋಷಕರು ಸಿಬ್ಬಂದಿಯ ಸಲಹೆ ಮೇರೆಗೆ ವಿಮಾನ ನಿಲ್ದಾಣದ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಬಾಲಕಿಯ ಪೋಷಕರು ನೀಡಿರುವ ದೂರು ಆಧರಿಸಿ ಆರೋಪಿ ಮುರುಗೇಶನ್‌ನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X