ಶಿಂದೆ ಟೀಕೆ | ತನಿಖೆ ಮುಂದುವರಿಸಿ, ಕುನಾಲ್ ಕಾಮ್ರಾರನ್ನು ಬಂಧಿಸಬೇಡಿ: ಬಾಂಬೆ ಹೈಕೋರ್ಟ್‌

Date:

Advertisements

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ವಿರುದ್ಧ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ನೀಡಿದ ಹೇಳಿಕೆ ಸಂಬಂಧಿಸಿದಂತೆ ತನಿಖೆಯನ್ನು ಮುಂದುವರೆಸಲು ಪೊಲೀಸರಿಗೆ ಬಾಂಬೆ ಹೈಕೋರ್ಟ್ ತಿಳಿಸಿದೆ. ಆದರೆ ಕಾಮ್ರಾರ ಬಂಧನ ಮಾಡಬೇಡಿ ಎಂದು ಹೈಕೋರ್ಟ್ ಶುಕ್ರವಾರ ಹೇಳಿದೆ.

ಕಾರ್ಯಕ್ರಮವೊಂದರಲ್ಲಿ ಕುನಾಲ್ ಕಾಮ್ರಾ ಶಿಂದೆ ಅವರನ್ನು ‘ದ್ರೋಹಿ’ ಎಂದು ಕರೆದಿದ್ದರು. ತನ್ನ ಪಕ್ಷವನ್ನೇ ಇಬ್ಭಾಗ ಮಾಡಿದ ದ್ರೋಹಿ ಎಂದಿದ್ದರು. ಇವೆಲ್ಲವನ್ನು ಹಾಡಿನ ಮೂಲಕ ವಿವರಿಸಿದ್ದರು. ಎಲ್ಲಿಯೂ ಶಿಂದೆ ಹೆಸರನ್ನು ಬಳಸದ ಕಾಮ್ರಾ ‘ಥಾಣೆಯ ನಾಯಕ’ ಎಂದು ಹೇಳಿದ್ದರು.

ಇದನ್ನು ಓದಿದ್ದೀರಾ? ಶಿಂದೆ ಟೀಕೆ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

Advertisements

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಂದೆ ಬೆಂಬಲಿಗರು ಕಾಮ್ರಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕಿಡಿಗೇಡಿಗಳು ಈ ವಿಡಿಯೋ ರೆಕಾರ್ಡ್ ಆದ ಸ್ಟುಡಿಯೋ ಇದ್ದ ಹೊಟೇಲ್‌ ಮೇಲೆ ದಾಳಿ ನಡೆಸಿ ಹಲವು ವಸ್ತುಗಳ ಧ್ವಂಸ ಮಾಡಿದ್ದರು. ಈ ಬಗ್ಗೆ ಪ್ರಕರಣವೂ ದಾಖಲಾಗಿದೆ.

ಇವೆಲ್ಲವುದರ ನಡುವೆ ಶಿವಸೇನೆ ನಾಯಕರು ಕಾಮ್ರಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬೆದರಿಕೆಯನ್ನೂ ಹಾಕಿದ್ದರು. ಜೊತೆಗೆ ಕಾಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕುನಾಲ್ ಕಾಮ್ರಾ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ಎಸ್ ಎಂ ಮೋಡಕ್ ಅವರ ಪೀಠವು ಪುರಸ್ಕರಿಸಿದೆ.

ಅಂದರೆ ಕಾಮ್ರಾ ಅವರ ಅರ್ಜಿಯನ್ನು ದೀರ್ಘವಾಗಿ ವಿಚಾರಣೆಗೆ ಒಳಪಡಿಸಲಾಗುವುದು. ಈ ಅರ್ಜಿಯ ವಿಚಾರಣೆಯ ವೇಳೆ ಕುನಾಲ್ ಕಾಮ್ರಾ ಅವರು ಬಂಧಿಸಬಾರದು ಎಂದು ಪೀಠ ಹೇಳಿದೆ.

ಇದನ್ನು ಓದಿದ್ದೀರಾ? ‘ಯಾರು ಅವರು, 2 ನಿಮಿಷದ ಕಾಮೆಡಿಯನ್’: ಕುನಾಲ್ ಕಾಮ್ರಾ ಬಗ್ಗೆ ಕಂಗನಾ ರಣಾವತ್ ಕಿಡಿ

ಹಾಗೆಯೇ ಪೊಲೀಸರು ಕಾಮ್ರಾ ಅವರ ಹೇಳಿಕೆಯನ್ನು ದಾಖಲಿಸಲು ಬಯಸಿದರೆ ಕಾಮ್ರಾ ಪ್ರಸ್ತುತ ವಾಸವಿರುವ ಚೆನ್ನೈನಲ್ಲಿ ನಡೆಸಬೇಕು. ಮೊದಲೇ ಸೂಚನೆ ನೀಡಬೇಕು ಎಂದೂ ಕೋರ್ಟ್ ತಿಳಿಸಿದೆ.

ಇನ್ನು ಕುನಾಲ್ ಕಾಮ್ರಾ ಅರ್ಜಿಯಲ್ಲಿ ತಾನು ತಮಿಳುನಾಡು ನಿವಾಸಿಯಾಗಿ ಎಂದು ಹೇಳಿದ್ದಾರೆ. ಕಾರ್ಯಕ್ರಮದ ನಂತರ ಬರುತ್ತಿರುವ ಕೊಲೆ ಬೆದರಿಕೆಗಳಿಂದಾಗಿ ಮಹಾರಾಷ್ಟ್ರಕ್ಕೆ ಬರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X