ಗೌರಿಬಿದನೂರು | 24 ಗಂಟೆಯಲ್ಲಿ ದ್ವಿಚಕ್ರ ವಾಹನ ಕಳ್ಳನ ಬಂಧನ; ಐಜಿಪಿ ಲಾಬುರಾಮ್ ಮೆಚ್ಚುಗೆ

Date:

Advertisements

ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು 24 ಗಂಟೆಯೊಳಗೆ ಪತ್ತೆಹಚ್ಚಿ ಬಂಧಿಸುವಲ್ಲಿ ಗೌರಿಬಿದನೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಕೇಂದ್ರ ವಲಯದ ಐಜಿಪಿ ಲಾಬುರಾಮ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗೌರಿಬಿದನೂರು ನಗರದ ನಿವಾಸಿ ತನ್ವೀರ್‌ ಖಾನ್‌ ಎಂಬಾತ ಹಿರೇಬಿದನೂರಿನ ಡೈರಿ ಬಳಿಯ ಮರದ ಕೆಳಗೆ ಏ.24ರಂದು ತನ್ನ ಪ್ಯಾಷನ್‌ ಪ್ರೊ ಬೈಕ್‌ ನಿಲ್ಲಿಸಿದ್ದು, ಇದ್ದಕ್ಕಿದ್ದಂತೆ ಬೈಕ್‌ ಕಳ್ಳತನವಾಗಿತ್ತು. ಈ ಕುರಿತು ತನ್ವೀರ್‌ ಖಾನ್‌ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸ್‌ ಅಪರಾಧ ತಂಡ ಹಿಂದೂಪುರ, ಬೆಂಗಳೂರಿಗೆ ಹೋಗಿ ಆರೋಪಿಯ ಸುಳಿವನ್ನು ಪತ್ತೆಹಚ್ಚಿದ್ದರು. ಗೌರಿಬಿದನೂರು ನಗರದ ಮುದಗಾನಕುಂಟೆ ಕ್ರಾಸ್‌ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿಯನ್ನು ಹಿಡಿದು ವಿಚಾರನೆಗೊಳಪಡಿಸಿದ್ದು, ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ.

IMG 20250425 WA0024

ಗೌರಿಬಿದನೂರು ನಗರದ ನದಿಗಡ್ಡೆ ನಿವಾಸಿ ಪ್ರಭು ಬಿನ್‌ ನರಸಿಂಹಮೂರ್ತಿ(24) ಕಳ್ಳತನದ ಆರೋಪಿ. ಆರೋಪಿಯಿಂದ ಸುಮಾರು 1.15 ಲಕ್ಷ ಮೌಲ್ಯದ ಒಟ್ಟು ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisements
IMG 20250425 WA0025

ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಗೌರಿಬಿದನೂರು ನಗರ ಎಸ್‌ಐ ಚಂದ್ರಕಲಾ, ಸಿಬ್ಬಂದಿಗಳಾದ ಶ್ರೀರಾಮಯ್ಯ, ಪುಷ್ಪ, ಶಿವಶೇಖರ್‌, ಮಹಂತೇಶ್‌, ಸಂತೋಷ್ ಮಾಳಗಿ,‌ ತಾಂತ್ರಿಕ ಸಿಬ್ಬಂದಿಯವರಾದ ರವಿಕುಮಾರ್‌, ಮುನಿಕೃಷ್ಣ ಅವರನ್ನು ಎಸ್ಪಿ ಕುಶಾಲ್‌ ಚೌಕ್ಸೆ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X