ಶಿವಮೊಗ್ಗ | ಅಂಬೇಡ್ಕರ್ ಸಂವಿಧಾನವನ್ನ ಸ್ಮರಿಸಬೇಕು; ಎಚ್ ಆರ್ ಬಸವರಾಜಪ್ಪ, ಗಣ್ಯರಿಂದ ಅರಿವೇ ಅಂಬೇಡ್ಕರ ವಿಶೇಷ ಸಂಚಿಕೆ ಬಿಡುಗಡೆ

Date:

Advertisements

ಇಂದು ಶಿವಮೊಗ್ಗದಲ್ಲಿ ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪನವರು ಭಾಗವಹಿಸಿದರು, ಕಾರ್ಯಕ್ರಮದ ಉದ್ಘಾಟನೆಯ ನಂತರ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಮಾತನಾಡಿದರು.

1001524185

ಅಂಬೇಡ್ಕರ್ ರವರು ಕೊಟ್ಟಂತಹ ಸಂವಿಧಾನದ ಕೊಡುಗೆಯನ್ನು ಈ ದೇಶದ ಪ್ರತಿಯೊಬ್ಬರು ಸ್ಮರಿಸಬೇಕು, ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಎಲ್ಲರೂ ಒಪ್ಪಿಕೊಳ್ಳುವಂತ ಒಂದು ಗ್ರಂಥ ಅಂದರೆ ಅದು ಸಂವಿಧಾನ. ಸ್ವಾತಂತ್ರ್ಯ ಪೂರ್ವದಲ್ಲಿ ಯಾವುದೇ ಸ್ವಾತಂತ್ರವಿಲ್ಲದೆ ಬದುಕುತ್ತಿದ್ದೇವು, ಬಹಳಷ್ಟು ಜನರ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿತು, ಯಾವುದಕ್ಕಾಗಿ ಸ್ವಾತಂತ್ರ್ಯ ತಂದು ಕೊಟ್ಟರು ಅನ್ನೊದನ್ನ ಸಂವಿಧಾನ ಪೀಠಿಕೆಯಲ್ಲಿ ತಿಳಿಸಿದ್ದಾರೆ. ನಾವು ಕೇವಲ ಹುಟ್ಟಹಬ್ಬವನ್ನ, ಸಂವಿಧಾನ ದಿನಾಚರಣೆಯನ್ನ ಮಾಡಿದರೆ ಸಾಲದು ಅದರ ಜೊತೆಗೆ ಅದರ ಅರ್ಥವನ್ನು ಅಂಬೇಡ್ಕರ್ ರವರ ವಿಚಾರಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು.ಈ ಕೆಲಸವನ್ನು ನಾವೆಲ್ಲರೂ ಸೇರಿ ಮಾಡೋಣವೆಂದರು.

ಈ ಸಂದರ್ಭದಲ್ಲಿ ಈದಿನ ಡಾಟ್ ಕಾಮ್ ಹೊರ ತಂದಿರುವ ಅರಿವೇ ಅಂಬೇಡ್ಕರ ವಿಶೇಷ ಸಂಚಿಕೆಯನ್ನು ವೇದಿಕೆಯ ಗಣ್ಯರೊಂದಿಗೆ ಬಿಡುಗಡೆ ಮಾಡಲಾಯಿತು.

Advertisements
1001524119

ಈ ಸಂದರ್ಭದಲ್ಲಿ ಡಿ.ಎಸ್.ಎಸ್ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್,ಮೈಸೂರು ವಿಭಾಗೀಯ ಸಂಚಾಲಕರಾದ ಟಿ.ಹೆಚ್ ಹಾಲೇಶಪ್ಪ, ರಘು ಡಿ, ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X