ಕಲಬುರಗಿ | ಎಸ್‌ಬಿಐ ಎಟಿಎಂ ದರೋಡೆ ಪ್ರಕರಣ; ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ

Date:

Advertisements

ಕಲಬುರಗಿ ನಗರದ ರಿಂಗ್ ರಸ್ತೆಯ ಎಸ್‌ಬಿಐ ಎಟಿಎಂ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬ್‌ ಅರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಹರಿಯಾಣ ಮೂಲದ ದರೋಡೆ ಪ್ರಕರಣದ ಆರೋಪಿಗಳಾದ ತಸ್ಲೀಮ್(28) ಮತ್ತು ಷರೀಫ್(22) ಗಾಯಗೊಂಡವರು. ಜಿಮ್ಸ್ ಆವರಣದ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲಬುರಗಿಯ ಬೇಲೂರ ಕ್ರಾಸ್ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಕಾನ್‌ಸ್ಟೆಬಲ್‌ಗಳಾದ ಮಂಜು, ಫಿರೋಜ್ ಮತ್ತು ರಾಜಕುಮಾರ್ ಅವರ ಮೇಲೆ ದಾಳಿ ಮಾಡಿದ್ದರೆಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisements

ಶರಣಾಗುವಂತೆ ಸೂಚಿಸಿದರೂ ಕೂಡ ಆರೋಪಿಗಳು ದಾಳಿ ನಡೆಸುತ್ತಿದ್ದರು. ಅನಿವಾರ್ಯವಾಗಿ ಆತ್ಮರಕ್ಷಣೆಗಾಗಿ ಸಬ್‌ ಅರ್ಬನ್ ಠಾಣೆಯ ಸಿಪಿಐ ಸಂತೋಷ್ ತಟ್ಟೆಪಲ್ಲಿ ಹಾಗೂ ಪಿಎಸ್‌ಐ ಬಸವರಾಜ ಅವರು ತಸ್ಲೀಮ್ ಮತ್ತು ಷರೀಫ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಕಾನ್‌ಸ್ಟೆಬಲ್‌ಗಳು ಹಾಗೂ ಗುಂಡೇಟು ತಿಂದ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ಹೇಳಿವೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಉಗ್ರರ ದಾಳಿಗೆ ಮೃತರಾದ ಮಂಜುನಾಥ್ ಮನೆಗೆ ಎಚ್ ಆರ್ ಬಸವರಾಜಪ್ಪ ಭೇಟಿ ಸಾಂತ್ವನ

ಬಂಧಿತ ದರೋಡೆಕೋರರಾದ ತಸ್ಲೀಮ್ ವಿರುದ್ಧ 8 ಹಾಗೂ ಷರೀಫ್ ವಿರುದ್ಧ 3 ಪ್ರಕರಣಗಳು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಎಟಿಎಂ ದರೋಡೆ ಸಂಬಂಧ ಪ್ರಕರಣಗಳು ದಾಖಲಾಗಿವೆ.

ಕಲಬುರಗಿ ನಗರದ ರಿಂಗ್ ರಸ್ತೆಯ ರಾಮನಗರದಲ್ಲಿ ಏಪ್ರಿಲ್ 9ರಂದು ಇದೇ ಆರೋಪಿಗಳು ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ನುಗ್ಗಿ, ಸಿಸಿಟಿವಿ ಕ್ಯಾಮೆರಾಗಳ ಮೇಲೆ ಕಪ್ಪು ಬಣ್ಣದ ಸ್ಪ್ರೇ ಎರಚಿ, ಎಟಿಎಂ ಯಂತ್ರವನ್ನು ಧ್ವಂಸಮಾಡಿ ₹18 ಲಕ್ಷ ದರೋಡೆ ಮಾಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X