ಬೀದರ್‌ | ಪಿಯುಸಿ ಮರು ಮೌಲ್ಯಮಾಪನ : ಔರಾದ್ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಆರತಿ

Date:

Advertisements

ಔರಾದ್ ಪಟ್ಟಣದ ಪತ್ರಿಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾ ಆರತಿ ರವೀಂದ್ರ ಪಿಯುಸಿ ಮರು ಮೌಲ್ಯಮಾಪನದಲ್ಲಿ 11 ಹೆಚ್ಚಿನ ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಎಸ್.ಕೆ.ಖಲೀಲ್‌ ತಿಳಿಸಿದ್ದಾರೆ.

ಮರು ಮೌಲ್ಯಮಾಪನದಲ್ಲಿ ವಿದ್ಯಾರ್ಥಿನಿ ಆರತಿ ರವಿಂದ್ರ ಅವರಿಗೆ ಇಂಗ್ಲಿಷ್ ವಿಷಯದಲ್ಲಿ 10, ಜೀವಶಾಸ್ತ್ರದಲ್ಲಿ 1 ಸೇರಿದಂತೆ ಒಟ್ಟು 11 ಅಂಕಗಳು ಹೆಚ್ಚಾಗಿದ್ದು, ಈ ಹಿಂದೆ 560 ಅಂಕಗಳು ಹೊಂದಿರುವ ಆರತಿಗೆ ಇದೀಗ ಒಟ್ಟು 571 (95.16%) ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ಇದೇ ಕಾಲೇಜಿನ ಶಿಫಾ ರಿಯಾಜೋದ್ದಿನ್ ಶೇಖ್ ವಿದ್ಯಾರ್ಥಿನಿ ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯದಲ್ಲಿ 11 ಅಂಕಗಳು ಹೆಚ್ಚಾಗಿದ್ದು, ಈ ಹಿಂದೆ 556 ಅಂಕಗಳು ಹೊಂದಿರುವ ಶಿಫಾ ಇದೀಗ 567 (94.50%) ಅಂಕ ಪಡೆದು ತಾಲ್ಲೂಕಿಗೆ ದ್ವೀತಿಯ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಔರಾದ್ ತಾಲೂಕು ಬಸವಕೇಂದ್ರಕ್ಕೆ ಜಗನ್ನಾಥ ಮೂಲಗೆ, ಮಲ್ಲಿಕಾರ್ಜುನ ಟಂಕಸಾಲೆ ನೇಮಕ

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಮಾಜಿ ಶಾಸಕ ಗುಂಡಪ್ಪ ಬಿರಾದಾರ್ ಉಪನ್ಯಾಸಕರಾದ ಅನೀಲಕುಮಾರ, ಆಜರಾ ಬೇಗಂ, ಅಕ್ಬರ್, ಮಹಾದೇವ, ಮುಕೇಶ, ಪವಿತ್ರಾ, ಶಿವಾಂಜಲಿ, ಮಯೂರಿ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X