ಏಕರೂಪ ನಾಗರಿಕ ಸಂಹಿತೆ ಜಾರಿಗೆ ವಿರೋಧವಿಲ್ಲ, ಆದರೆ ಬೆಂಬಲಿಸುವುದಿಲ್ಲ: ಮಾಯಾವತಿ

Date:

Advertisements
  • ಏಕರೂಪ ನಾಗರಿಕ ಸಂಹಿತೆ ಮಸೂದೆ ಕುರಿತು ಜುಲೈ 3ಕ್ಕೆ ಚರ್ಚಿಸಲಿರುವ ಸ್ಥಾಯಿ ಸಮಿತಿ
  • ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದಿಂದ ಯುಸಿಸಿ ಮಸೂದೆ ಮಂಡನೆ ಸಾಧ್ಯತೆ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಮ್ಮ ಪಕ್ಷದ ವಿರೋಧವಿಲ್ಲ, ಆದರೆ, ಅದನ್ನು ಜಾರಿಗೆ ತರುತ್ತಿರುವ ವಿಧಾನವನ್ನು ತಾವು ಬೆಂಬಲಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ (ಜುಲೈ 2) ಹೇಳಿದ್ದಾರೆ.

“ನಮ್ಮ ಪಕ್ಷ ಯುಸಿಸಿ ಅನುಷ್ಠಾನಕ್ಕೆ ವಿರುದ್ಧವಾಗಿಲ್ಲ. ಆದರೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಪ್ರಯತ್ನಿಸುತ್ತಿರುವ ವಿಧಾನವನ್ನು ನಾವು ಬೆಂಬಲಿಸುವುದಿಲ್ಲ. ವಿಷಯವನ್ನು ರಾಜಕೀಯಗೊಳಿಸುವುದು ಮತ್ತು ದೇಶದಲ್ಲಿ ಯುಸಿಸಿಯನ್ನು ಬಲವಂತವಾಗಿ ಜಾರಿಗೊಳಿಸುವುದು ಸರಿಯಲ್ಲ” ಎಂದು ಮಾಯಾವತಿ ಸುದ್ದಿಗಾರರಿಗೆ ತಿಳಿಸಿದರು.

“ಏಕರೂಪ ನಾಗರಿಕ ಸಂಹಿತೆ ಬಗ್ಗೆ ಈಗಾಗಲೇ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಬಲವಂತವಾಗಿ ಈ ನೀತಿ ಜಾರಿಗೊಳಿಸುವುದನ್ನು ಸಂವಿಧಾನ ಬೆಂಬಲಿಸುವುದಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯು ಎಲ್ಲ ದಿಕ್ಕುಗಳಿಂದ ಯುಸಿಸಿಯನ್ನು ಅವಲೋಕಿಸಬೇಕಿದೆ” ಎಂದು ಮಾಯಾವತಿ ಹೇಳಿದರು.

Advertisements

“ಯುಸಿಸಿಗೆ ಸಂಬಂಧಿಸಿದ ಎಲ್ಲ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕು. ಪ್ರತಿಯೊಂದು ಸಂದರ್ಭದಲ್ಲೂ ಒಂದೇ ಕಾನೂನು ಎಲ್ಲ ಧರ್ಮದ ಜನರಿಗೆ ಅನ್ವಯಿಸಿದರೆ, ಅದು ದೇಶವನ್ನು ಬಲಪಡಿಸುತ್ತದೆ” ಎಂದು ಮಾಯಾವತಿ ಉಲ್ಲೇಖಿಸಿದರು.

ಏಕರೂಪ ನಾಗರಿಕ ಸಂಹಿತೆಯ ಕುರಿತು ಸಂಸದೀಯ ಸ್ಥಾಯಿ ಸಮಿತಿ ಜುಲೈ 3 ರಂದು ಚರ್ಚೆ ನಡೆಸುವ ಮುನ್ನವೇ ಮಾಯಾವತಿ ಯುಸಿಸಿ ಕುರಿತು ಹೇಳಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಸಮ್ಮತಿಯ ಸೆಕ್ಸ್‌ನಲ್ಲಿ ಮಹಿಳೆಯರ ವಯೋಮಿತಿ 16ಕ್ಕೆ ಇಳಿಸಲು ಹೈಕೋರ್ಟ್‌ ಕೇಂದ್ರಕ್ಕೆ ಮನವಿ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X