ವಿಜಯಪುರ | 225 ಕಳ್ಳತನ ಪ್ರಕರಣಗಳಲ್ಲಿ ₹7 ಕೋಟಿ ಮೌಲ್ಯದ ವಸ್ತುಗಳು ಜಪ್ತಿ; ಬೃಹತ್ ಪ್ರಾಪರ್ಟಿ ರಿಟರ್ನ್ ಪರೇಡ್

Date:

Advertisements

ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯೊಳಗೆ ನಡೆದ 225 ಕಳ್ಳತನ ಪ್ರಕರಣಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಒಟ್ಟಾರೆ 345 ಆರೋಪಿಗಳನ್ನು ಬಂಧಿಸಿ ಅವರಿಂದ ಏಳು ಕೋಟಿ ರೂಗಳಿಗೂ ಅಧಿಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಿದ ವಸ್ತುಗಳನ್ನು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವಾರಸುದಾರರಿಗೆ ಹಸ್ತಾಂತರಿಸಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬೆಳಿಗ್ಗೆ ಬೃಹತ್ ಪ್ರಾಪರ್ಟಿ ರಿಟರ್ನ್ ಪರೇಡ್ ನಡೆಸಿದ ಎಸ್‌ಪಿ ನಿಂಬರಗಿ, “ಬಂಗಾರ-ಬೆಳ್ಳಿ ಆಭರಣಗಳು, ಬೈಕ್‌ಗಳು, ಐಷಾರಾಮಿ ಕಾರುಗಳು ಟ್ಯಾಕ್ಟರ್‌ಗಳು, ಟಿಪ್ಟರ್‌ಗಳು ಸೇರಿ ಒಟ್ಟು ₹7.02 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ ₹3.46 ಕೋಟಿ ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಬಾಕಿ ಉಳಿದ ₹3.56 ಕೋಟಿ ಮೌಲ್ಯದ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ವಾರಸುದಾರರಿಗೆ ನೀಡುವ ಪ್ರಕ್ರಿಯೆ ಮುಂದುವರಿದಿದೆ” ಎಂದು ತಿಳಿಸಿದರು.

Advertisements
ವಿಜಯಪುರ ಕಳ್ಳತನ

“ನಗದು ಹಣ ದೋಚಿದ 19 ಪ್ರಕರಣಗಳಲ್ಲಿನ 31 ಆರೋಪಿಗಳನ್ನು ಬಂಧಿಸಲಾಗಿದೆ. ₹1.91 ಕೋಟಿ ಮೌಲ್ಯದ ನಗದು ವಶಪಡಿಸಿಕೊಳ್ಳಲಾಗಿದೆ. 21 ಇತರೆ ಕಳ್ಳತನ ಪ್ರಕರಣಗಳಲ್ಲಿ 36 ಜನರನ್ನು ಬಂಧಿಸಿ ₹12.42 ಲಕ್ಷ ಮೌಲ್ಯದ ವಿವಿಧ ರೀತಿಯ 143 ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಎಲ್ಲ ಕೃತ್ಯಗಳಲ್ಲಿ ಭಾಗವಹಿಸಿದ್ದ ವಿಜಯಪುರ ಜಿಲ್ಲೆ ಮಾತ್ರವಲ್ಲದೇ, ಬೆಳಗಾವಿ, ವಿಜಯನಗರ, ಬಾಗಲಕೋಟೆ ಹಾಗೂ ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ದೆಹಲಿ ಮೂಲದ ಆರೋಪಿಗಳನ್ನೂ ಪತ್ತೆ ಹಚ್ಚಲಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಎಸ್‌ಆರ್‌ಟಿಸಿ ನೌಕರರಿಗಾಗಿ ಸಾರಿಗೆ ಸುರಕ್ಷಾ ಯೋಜನೆ ಜಾರಿ: ಸಚಿವ ರಾಮಲಿಂಗರೆಡ್ಡಿ

ಪ್ರಾಪರ್ಟಿ ರಿಟರ್ನ್ ಪರೇಡ್‌ನಲ್ಲಿ ಹೆಚ್ಚುವರಿ ಎಸ್‌ಪಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟ ಡಿವೈಎಸ್‌ಪಿ ಬಸವರಾಜ ಯಲಿಗಾರ, ಸುನೀಲ ಕಾಂಬಳೆ, ಟಿ ಎಸ್‌ ಸುಲಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X