ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ ಪ್ರಕರಣ; ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಎಸ್ ಮೂರ್ತಿ

Date:

Advertisements
  • ಪರಿಶಿಷ್ಟ ಜಾತಿಯ ಅಧಿಕಾರಿ ಎಂಬ ಕಾರಣಕ್ಕೆ ದುರುದ್ದೇಶದಿಂದ ಇಂತಹ ನಿರ್ಧಾರ
  • ಪೂರ್ವಗ್ರಹಪೀಡಿತ ವಿಚಾರಣಾ ವರದಿ ಆಧಾರಿಸಿ ಹುದ್ದೆಯಿಂದ ಕೆಳಕ್ಕಿಳಿಸಲಾಗಿದೆ

2016 ಮತ್ತು 2017ರಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದ ಪ್ರಕರಣವನ್ನು ಪುನರ್ ಪರಿಶೀಲನೆ ನಡೆಸಿ, ದೋಷ ಮುಕ್ತಗೊಳಿಸಿ, ತಮಗೆ ಹಿಂದಿನ ಹುದ್ದೆಯನ್ನು ನೀಡುವಂತೆ ವಿಧಾನಸಭೆಯ ಅಧೀನ ಕಾರ್ಯದರ್ಶಿ ಎಸ್ ಮೂರ್ತಿ ವಿಧಾನಸಭೆ ಸಚಿವಾಲಯದ ವಿಶೇಷ ಮಂಡಳಿಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಜೂನ್ 30ರಂದು ಹೊಸದಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿರುವ ಅವರು, “ಲೆಕ್ಕ ಪರಿಶೋಧನಾ ಇಲಾಖೆಯ ಕೆಲವು ಅಧಿಕಾರಿಗಳಿಂದ ಅನಧಿಕೃತವಾಗಿ ಪಡೆದ ಲೆಕ್ಕ ಪರಿಶೋಧನಾ ವರದಿ ಆಧಾರದಲ್ಲಿ ನನ್ನ ವಿರುದ್ಧ ಕ್ರಮ ಜರುಗಿಸಲಾಗಿದೆ. ದಂಡನೆ ವಿಧಿಸಿ ವಿಧಾನಸಭೆಯ ಕಾರ್ಯದರ್ಶಿ ಹುದ್ದೆಯಿಂದ ಅಧೀನ ಕಾರ್ಯದರ್ಶಿ ಹುದ್ದೆಗೆ ಹಿಂಬಡ್ತಿ ನೀಡಲಾಗಿದೆ. ಶೋಕಾಸ್ ನೋಟಿಸ್‌ಗೆ ನಾನು ಉತ್ತರಿಸಿದ್ದರೂ ಆ ಬಗ್ಗೆ ಉಲ್ಲೇಖಿಸದೇ ದಂಡನಾ ಆದೇಶ ಹೊರಡಿಸಲಾಗಿದೆ” ಅರ್ಜಿಯಲ್ಲಿ ತಿಳಿಸಿದ್ದಾರೆ.

“ಎರಡೂ ಅಧಿವೇಶನಗಳಲ್ಲಿ ನಾನು ಕೈಗೊಂಡಿದ್ದ ತೀರ್ಮಾನಗಳಿಂದ ವಿಧಾನಸಭೆ ಸಚಿವಾಲಯಕ್ಕೆ ಆರ್ಥಿಕವಾಗಿ ಉಳಿತಾಯವಾಗಿದೆ. ಆದರೆ, ತಪ್ಪು ಲೆಕ್ಕಾಚಾರವನ್ನು ಆಧರಿಸಿ ನನ್ನ ವಿರುದ್ಧ ಕ್ರಮ ಜರುಗಿಸಲಾಗಿದೆ. ನಾನು ಪರಿಶಿಷ್ಟ ಜಾತಿಯ ಅಧಿಕಾರಿ ಎಂಬ ಕಾರಣಕ್ಕೆ ದುರುದ್ದೇಶದಿಂದ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ. ಪೂರ್ವಗ್ರಹಪೀಡಿತವಾದ ವಿಚಾರಣಾ ವರದಿ ಆಧಾರದಲ್ಲಿ ಹುದ್ದೆಯಿಂದ ಕೆಳಕ್ಕೆ ಇಳಿಸಲಾಗಿದೆ” ಎಂದು ದೂರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ನಾನು ಸಿದ್ದರಾಮಯ್ಯರ ಅಭಿಮಾನಿ, ಅವರ ಶಿಷ್ಯ; ಬಿಜೆಪಿ ನಾಯಕ ಎಸ್ ಟಿ ಸೋಮಶೇಖರ್‌ ಅಚ್ಚರಿಯ ಹೇಳಿಕೆ

“ನಿಯಮಾನುಸಾರ ಮರು ಪರಿಶೀಲನೆ ನಡೆಸುವಂತೆ ರಾಜ್ಯಪಾಲರಿಗೆ ನಾನು ಮನವಿ ಸಲ್ಲಿಸಿದ್ದೆ. ರಾಜ್ಯಪಾಲರು ನನ್ನ ಮನವಿಯನ್ನು ಮುಂದಿನ ಕ್ರಮಕ್ಕಾಗಿ ವಿಶೇಷ ಮಂಡಳಿಗೆ ಕಳುಹಿಸಿದ್ದಾರೆ. ಆದರೆ, ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪ್ರಕರಣದ ಮರು ಪರಿಶೀಲನೆ ನಡೆಸಲು ಮಂಡಳಿಗೆ ಕಾನೂನಿನಲ್ಲಿ ಅವಕಾಶವಿದೆ” ಎಂದು ತಿಳಿಸಿದ್ದಾರೆ.

“ದುರುದ್ದೇಶದಿಂದ ನೀಡಿದ ವಿಚಾರಣಾ ವರದಿ ಆಧಾರದಲ್ಲಿ ನನಗೆ ವಿಧಿಸಿರುವ ದಂಡನೆಯನ್ನು ರದ್ದುಪಡಿಸಿ, ವಿಧಾನಸಭೆ ಕಾರ್ಯದರ್ಶಿ ಹುದ್ದೆಗೆ ಮರು ನೇಮಕ ಮಾಡಬೇಕು. ಎಂ ಕೆ ವಿಶಾಲಾಕ್ಷಿ ಅವರಿಗೆ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿರುವ ತೀರ್ಮಾನವನ್ನೂ ರದ್ದುಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X