ಜೆಎನ್‌ಯು | ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ರೇಲ್ ಪರ ಘೋಷಣೆ ಕೂಗಿದ ಎಬಿವಿಪಿ; ವ್ಯಾಪಕ ಆಕ್ರೋಶ

Date:

Advertisements

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆವರಣದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸದಸ್ಯರು ಇಸ್ರೇಲ್‌ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ತೇಲ್ ಪರವಾದ ಘೋಷಣೆಗಳನ್ನು ಕೂಗಿದ್ದಾರೆ. ಭಾರತದಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವ ತಂತ್ರದ ಭಾವವಾಗಿ ಈ ಪ್ರತಿಭಟನೆ ನಡೆದಿದೆ ಎಂದು ಹೇಳಲಾಗಿದೆ.

ಹಿಂದುತ್ವವಾದಿ ವಿದ್ಯಾರ್ಥಿ ಸಂಘಟನೆ ಎಪಿವಿಪಿಯ ಮುಖಂಡರು ಪ್ಯಾಲೆಸ್ತೀನ್ ಧ್ವಜವನ್ನು ಸುಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಬಿವಿಪಿಯ ನಡೆಯನ್ನು ಹಲವಾರು ವಿದ್ಯಾರ್ಥಿ ಸಂಘಟನೆಗಳು ಖಂಡಿಸಿವೆ. ಎಬಿವಿಪಿ ಮುಖಂಡರ ವಿರುದ್ಧ ವಿಶ್ವವಿದ್ಯಾಲಯವು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿವೆ.

ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದೆ. ತನ್ನ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 50,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಇಸ್ರೇಲ್‌ ಕೊಂದಿದೆ. ಇಡೀ ಜಗತ್ತು ಪ್ಯಾಲೆಸ್ತೀನ್ ಪರವಾಗಿ ನಿಲ್ಲಬೇಕು. ಪ್ಯಾಲೆಸ್ತೀನ್‌ನಲ್ಲಿ ಶಾಂತಿ ನೆಲೆಸಲು ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಬೇಕು ಎಂಬ ಒತ್ತಾಯಗಳಿವೆ.

Advertisements

ಪ್ಯಾಲೆಸ್ತೀನ್‌ ಪರವಾಗಿ ಭಾರತದಲ್ಲಿ ಹಲವಾರು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಶಾಂತಿಗಾಗಿ ಒತ್ತಾಯಿಸುತ್ತಿವೆ. ಇಂತಹ ಸಂದರ್ಭದಲ್ಲಿ ಎಬಿಪಿವಿ ಮುಖಂಡರು ಜೆಎನ್‌ಯುನಲ್ಲಿ ಇಸ್ರೇಲ್‌ ಪರವಾಗಿ ಪ್ರತಿಭಟನೆ ನಡೆಸಿ, ಘೋಷಣೆ ಕೂಗಿದ್ದಾರೆ.

“ಎಬಿವಿಪಿ ಎಸಗಿರುವ ಈ ಕೃತ್ಯವು ಸಾವಿರಾರು ಪ್ಯಾಲೆಸ್ತೀನಿಯರ ನರಮೇಧ ನಡೆಸಿದ ಇಸ್ರೇಲ್‌ ಆಡಳಿತಕ್ಕೆ ಬಿಜೆಪಿ-ಎಬಿವಿಪಿಯ ನಿಷ್ಠೆಯನ್ನು ಪ್ರತಿಬಿಂಬಿಸುತ್ತದೆ. ಇಸ್ಲಾಮೋಫೋಬಿಕ್ ಮತ್ತು ದ್ವೇಷಪೂರಿತ ಕೃತ್ಯದ ಮೂಲಕ ಕ್ಯಾಂಪಸ್‌ನಲ್ಲಿ ಹಿಂಸಾಚಾರ ಮತ್ತು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಎಬಿವಿಪಿ ಪ್ರಯತ್ನಿಸುತ್ತಿದೆ. ಇಂತಹ ಕೃತ್ಯಗಳು ವಿಶ್ವವಿದ್ಯಾಲಯದಲ್ಲಿ ಶಾಂತಿ, ಸಾಮರಸ್ಯದ ಮೇಲೆ ನೇರ ದಾಳಿಯಾಗಿವೆ” ಎಂದು ಫ್ರೆಟರ್ನಿಟಿ ಮೂವ್‌ಮೆಂಟ್ ಹೇಳಿದೆ.

ಎಬಿವಿಪಿಯ ಧೋರಣೆ ಖಂಡಿಸಿ ಮುಸ್ಲಿಂ ವಿದ್ಯಾರ್ಥಿ ಒಕ್ಕೂಟ (ಎಂಎಸ್‌ಎಫ್) ಕೂಡ ಹೇಳಿಕೆ ಬಿಡುಗಡೆ ಮಾಡಿದೆ. “ದ್ವೇಷದಿಂದ ಲಾಭ ಪಡೆಯಲು ಯತ್ನಿಸುವವರಿಂದ ನಾವು ಏನನ್ನು ಬಯಸಲು ಸಾಧ್ಯ. ದಬ್ಬಾಳಿಕೆಯ ವಿರುದ್ಧ ಹೋರಾಡುತ್ತಿರುವ ಜನರ ಧ್ವಜವನ್ನು ಸುಡುವುದು ನಿಮ್ಮನ್ನು (ಎಬಿವಿಪಿ) ಬಲಪಡಿಸುವುದಿಲ್ಲ. ಅದು ನಿಮ್ಮ ರಾಜಕೀಯದ ಶೂನ್ಯತೆಯನ್ನು ಮಾತ್ರ ಬಹಿರಂಗಪಡಿಸುತ್ತದೆ” ಎಂದು ಹೇಳಿದೆ.

ಮತ್ತೊಂದು ವಿದ್ಯಾರ್ಥಿ ಸಂಘಟನೆ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ​​(ಎಐಎಸ್‌ಎ), “ಎಬಿವಿಪಿಯ ಕ್ರಮವು ‘ನರಮೇಧದ ವೈಭವೀಕರಣ’ವಾಗಿದೆ. ಇಂತಹ ನಡೆಗಳು ನೈತಿಕವಾಗಿ ಅಸಹ್ಯಕರ ಮಾತ್ರವಲ್ಲದೆ ದ್ವೇಷ ಮತ್ತು ಹಿಂಸೆಗೆ ಸ್ಪಷ್ಟ ಪ್ರಚೋದನೆ ನೀಡುತ್ತವೆ. ರಾಷ್ಟ್ರೀಯ ಚಿಹ್ನೆಗಳಿಗೆ ಉದ್ದೇಶಪೂರ್ವಕವಾಗಿ ಅಗೌರವ ತೋರುವುದು, ನರಮೇಧವನ್ನು ವೈಭವೀಕರಿಸುವುದು ಮಾನವೀಯತೆ ಮತ್ತು ಘನತೆಯ ತತ್ವಗಳನ್ನು ಉಲ್ಲಂಘಿಸುವ ಕೃತ್ಯಗಳಾಗಿವೆ. ಈ ರೀತಿಯ ಧರ್ಮಾಂಧತೆ ಮತ್ತು ಆಕ್ರಮಣಶೀಲತೆಗೆ ಪ್ರಜಾಪ್ರಭುತ್ವ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X