ವಿದ್ಯುತ್‌ ಬಿಲ್ ಬಾಕಿ ಇದ್ದರು ‘ಗೃಹಜ್ಯೋತಿ’ ಲಾಭ ಪಡೆಯಬಹುದು: ಇಂಧನ ಇಲಾಖೆ

Date:

Advertisements
  • ಬಾಕಿ ಮೊತ್ತ ಮಾವತಿಸಲು ಸೆ. 30ರ ವರೆಗೂ (ಮೂರು ತಿಂಗಳು) ಗಡುವು
  • ಜುಲೈ 25ರ ಒಳಗೆ ನೋಂದಾಯಿಸಿಕೊಂಡರೆ, ಆಗಸ್ಟ್ ಬಿಲ್‌ನಲ್ಲಿ ಪ್ರಯೋಜನ

ಗ್ರಾಹಕರು ವಿದ್ಯುತ್‌ ಬಿಲ್ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಪಡೆಯಲು ಅರ್ಹರಾಗಿದ್ದಾರೆ. ಆದರೆ, ಹಿಂಬಾಕಿ ಮೊತ್ತವನ್ನು ಸೆಪ್ಟೆಂಬರ್‌ 30ರ ಒಳಗೆ ಪಾವತಿಸಬೇಕು ಎಂದು ಇಂಧನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25ರ ಒಳಗೆ ನೋಂದಾಯಿಸಿಕೊಂಡರೆ, ಆಗಸ್ಟ್ ತಿಂಗಳ ಬಿಲ್‌ನಲ್ಲಿ ಪ್ರಯೋಜನ ಸಿಗಲಿದೆ. ಅದೇ ರೀತಿ ಜುಲೈ 25ರಿಂದ ಆಗಸ್ಟ್ 25ರ ಒಳಗೆ ನೋಂದಾಯಿಸಿಕೊಂಡರೆ ಸೆಪ್ಟೆಂಬರ್ ತಿಂಗಳ ಬಿಲ್‌ನಲ್ಲಿ ಪ್ರಯೋಜನ ದೊರೆಯಲಿದೆ. ಪ್ರತಿ ತಿಂಗಳು 25ನೇ ತಾರೀಕಿನಿಂದ ನಂತರದ ತಿಂಗಳ 25ನೇ ತಾರೀಕಿನವರೆಗೆ ಬಿಲ್ ಮಾಡಲಾಗುತ್ತದೆ.

ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್ ಮೀರಿರಬಾರದು. ಗ್ರಾಹಕರು ಜುಲೈ 25ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್‌ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಹೀಗಾಗಿ, ಯೋಜನೆಯ ಪ್ರಯೋಜನ ಪಡೆಯಲು ತಕ್ಷಣವೇ ನೋಂದಣಿ ಮಾಡಿಕೊಳ್ಳಬೇಕು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ಪಡೆಯಬೇಡಿ ಎಂದು ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಸಿಎಂ ಕುಮಾರಸ್ವಾಮಿ: ಸಿದ್ದರಾಮಯ್ಯ ಆರೋಪ

ಗೃಹಜ್ಯೋತಿ’ ಯೋಜನೆಗೆ ನೋಂದಣಿ ಮಾಡುವುದು ಹೇಗೆ?

‘ಗೃಹಜ್ಯೋತಿ’ ಯೋಜನೆಗೆ ನೋಂದಣಿ ಮಾಡುವಾಗ ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿ ಮಾಹಿತಿ (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ಮತ್ತು ಮೊಬೈಲ್‌ ನಂಬರ್‌ ಬೇಕು. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ವೆಬ್​ಸೈಟ್​ ವಿಳಾಸ https://sevasindhugs.karnataka.gov.in. ಸಂಪರ್ಕಿಸಬಹುದು. ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಿ ಎಂದು ಇಂಧನ ಇಲಾಖೆ ಹೇಳಿದೆ.

  • ಎಸ್ಕಾಂ ಹೆಸರು
  • ಖಾತೆ ಸಂಖ್ಯೆ
  • ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ
  • ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ
  • ಎಸ್ಕಾಂ ಹೆಸರು1
  • ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ
  • ಆಧಾರ್ ಸಂಖ್ಯೆ
  • ಅರ್ಜಿದಾರರ ಹೆಸರು
  • ಸಂವಹನಕ್ಕಾಗಿ ದೂರವಾಣಿ ಸಂಖ್ಯೆ

ಈ ವಿವರಗಳನ್ನು ಭರ್ತಿ ಮಾಡಬೇಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X