ಕಲಬುರಗಿ | ಉದ್ಯೋಗ ಖಾತ್ರಿ ಕೆಲಸದ ವೇಳೆ ಕಾರ್ಮಿಕ ಮಹಿಳೆ ಸಾವು : ಪರಿಹಾರಕ್ಕೆ ಆಗ್ರಹ

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ಮಹಿಳೆ ದಿಢೀರನೇ ಕುಸಿದು ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನ ಮುಧೋಳ ಗ್ರಾಮದ ರಾಮ ಕೆರೆ ಬಳಿ ನಡೆದಿದೆ.

ಮುಧೋಳ ಗ್ರಾಮದ ರಾಮುಲಮ್ಮ ಹಣಮಂತು ನಾಡೆಪಲ್ಲಿ (46) ಮೃತಪಟ್ಟ ಮಹಿಳೆ ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಮನರೇಗಾ ಯೋಜನೆಯಡಿ ಮುಧೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮ ಕೆರೆಯ ಬಲಭಾಗದ ಕಾಲುವೆ ಕೆಲಸ ಮಾಡುತ್ತಿದ್ದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪರಿಹಾರಕ್ಕೆ ಆಗ್ರಹ : ಉದ್ಯೋಗ ಖಾತ್ರಿ ಕೆಲಸ ಮಾಡುವಾಗಲೇ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಮುಖಂಡ ವಿಜಯ ಕುಮಾರ್ ಖೇವಜಿ ಮತ್ತು ತಮ್ಮಪ್ಪ‌ ಬಾಗಾಳಿ ಒತ್ತಾಯಿಸಿದ್ದಾರೆ.

Advertisements

ಘಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ ಚನ್ನಪ್ಪ ರಾಯಣ್ಣನವರ್ ಭಾನುವಾರ ಭೇಟಿ ನೀಡಿದರು. ಘಟನೆ ಬಗ್ಗೆ ವಿವರ ಪಡೆದ ಅವರು, ʼಗ್ರಾಮ ಪಂಚಾಯಿತಿ ಮತ್ತು ಸರ್ಕಾರದ ವತಿಯಿಂದ ಪರಿಹಾರ ಒದಗಿಸಲು ಸಹಕಾರ ನೀಡುತ್ತೇನೆʼ ಎಂದು ತಿಳಿಸಿದರು. ನರೇಗಾ ಸಹಾಯಕ ನಿರ್ದೇಶಕ ರಾಜಶೇಖರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭಗವಂತರಾಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X