ಐಪಿಎಲ್ 2025 | ಇದು ನನ್ನ ಮೈದಾನ: ಗೆದ್ದ ನಂತರ ಕೆ ಎಲ್ ರಾಹುಲ್‌ಗೆ ಟಾಂಗ್‌ ಕೊಟ್ಟ ವಿರಾಟ್ ಕೊಹ್ಲಿ!

Date:

Advertisements

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಆರ್‌ಸಿಬಿ ಗೆಲುವು ಪಡೆದ ನಂತರ ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ‘ಇದು ನನ್ನ ಮೈದಾನ’ ಎಂದು ಹೇಳಿ ಕೆ ಎಲ್‌ ರಾಹುಲ್‌ಗೆ ತಮಾಷೆಯ ಮೂಲಕ ಟಾಂಗ್‌ ನೀಡಿದ್ದಾರೆ.

6 ವಿಕೆಟ್‌ಗಳ ಜಯ ಗಳಿಸಿದ ಬಳಿಕ ರಾಹುಲ್‌ ಜೊತೆ ಕೊಹ್ಲಿ ಸಂತೋಷದಿಂದ ಮಾತನಾಡುತ್ತಿದ್ದರು. ಈ ವೇಳೆ ಕೊಹ್ಲಿ ನೆಲಕ್ಕೆ ಕೈ ತೋರಿಸುತ್ತಾ ಇದು ನನ್ನ ಮೈದಾನ ಎಂದು ಹೇಳಿದರು. ಇದಕ್ಕೆ ರಾಹುಲ್‌, ಪೆವಿಲಿಯನ್‌ಗೇ ಕೊಹ್ಲಿ ಹೆಸರು ಇದೆ ಎಂದು ನಗು ನಗುತ್ತಲೆ ಸನ್ನೆ ಮಾಡಿದರು. ನಂತರ ಕೊಹ್ಲಿ, ರಾಹುಲ್‌ ಅವರನ್ನು ಅಪ್ಪಿಕೊಂಡು ಮುನ್ನಡೆದರು. ಈ ಎಲ್ಲ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಮೂಲತಃ ದೆಹಲಿಯವರಾದ ಕೊಹ್ಲಿ ಈ ಮೈದಾನದಲ್ಲೇ ತಮ್ಮ ಕ್ರಿಕೆಟ್‌ ಜೀವನವನ್ನು ಶುರು ಮಾಡಿದ್ದರು. ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿರುವ ಒಂದು ಸ್ಟ್ಯಾಂಡ್‌ಗೆ ‘ವಿರಾಟ್‌ ಕೊಹ್ಲಿ ಪೆವಿಲಿಯನ್‌’ ಎಂದು ಹೆಸರನ್ನು ಇಡಲಾಗಿದೆ.

Advertisements

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿರುದ್ಧ ಗೆದ್ದ ಬಳಿಕ ಕನ್ನಡಿಗ ಕೆ ಎಲ್‌ ರಾಹುಲ್‌ ಕಾಂತಾರ ಶೈಲಿಯಲ್ಲಿ ವೃತ್ತ ಬರೆದು, ‘ಇದು ನನ್ನ ನೆಲ’ ಎಂದು ಸಂಭ್ರಮಿಸಿದ್ದರು.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಪಾಕ್‌ನ ಬಾಬರ್‌ ಅಜಮ್‌ ದಾಖಲೆ ಅಳಿಸಿದ ವಿರಾಟ್ ಕೊಹ್ಲಿ

ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದ ರಾಹುಲ್‌, ಬೆಂಗಳೂರು ನನ್ನ ಮನೆ. ಈ ಮೈದಾನದ ಬಗ್ಗೆ ಎಲ್ಲರಿಗಿಂತ ಚೆನ್ನಾಗಿ ನನಗೆ ತಿಳಿದಿದೆ ಎಂದರು. ಈ ಡೈಲಾಗ್‌ ಹೊಡೆಯುವ ಮೂಲಕ ಹರಾಜಿನಲ್ಲಿ ತನ್ನನ್ನು ಪರಿಗಣಿಸದ ಆರ್‌ಸಿಬಿಗೆ ಟಾಂಗ್‌ ನೀಡಿದ್ದರು.

ನಿನ್ನೆಯ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 8 ವಿಕೆಟ್‌ ನಷ್ಟಕ್ಕೆ 162 ರನ್‌ ಕಲೆ ಹಾಕಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ 9 ಎಸೆತ ಬಾಕಿ ಇರುವಂತೆಯೇ 165 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಕೃನಾಲ್‌ ಪಾಂಡ್ಯ ಅಜೇಯ 73 ರನ್‌ (47 ಎಸೆತ, 5 ಬೌಂಡರಿ, 4 ಸಿಕ್ಸ್‌) ಬಾರಿಸಿದರೆ, ವಿರಾಟ್‌ ಕೊಹ್ಲಿ 51 ರನ್‌( 47 ಎಸೆತ, 4 ಬೌಂಡರಿ) ಪೇರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆಡಿದ 10 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಅಂಕ ಪಡೆದು ಆರ್‌ಸಿಬಿ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X