ಕೂಡ್ಲಿಗಿ | ವೇತನ ಹೆಚ್ಚಳ; ಸಿಹಿ ಹಂಚಿ ಸಂಭ್ರಮಿಸಿದ ಹೊರಗುತ್ತಿಗೆ ನೌಕರರು

Date:

Advertisements

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಹಾಗೂ ಸಮಾಜ ಕಲ್ಯಾಣ ಇಲಾಖಾ ವಸತಿ ನಿಲಯ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರು, ಸರ್ಕಾರ ವೇತನ ಹೆಚ್ಚಿಸಿರುವುದಕ್ಕೆ, ಹರ್ಷ ವ್ಯಕ್ತಪಡಿಸಿದ್ದು ಸರ್ಕಾರದ ನಿಲುವನ್ನು ಸ್ವಾಗತಿಸಿದ್ದಾರೆ. ಕೂಡ್ಲಿಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಫಕೀರಪ್ಪರವರಿಗೆ ಸಿಹಿ ತಿನಿಸುವುದರ ಮೂಲಕ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

“ಹಗಲಿರುಳು ವಸತಿ ಶಾಲೆ, ವಸತಿ ನಿಲಯದಲ್ಲಿ ಕೆಲಸಕ್ಕೆ ಅತಿ ಕಡಿಮೆ ವೇತನ ನೀಡಲಾಗುತ್ತಿತ್ತು. ವೇತನ ಪರಿಷ್ಕರಿಸಿ ಹೆಚ್ಚಿಸಬೇಕೆಂಬ ಹೊರಗುತ್ತಿಗೆ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಗಣನೆಗೆ ತೆಗೆದುಕೊಂಡು ಈ ಬಾರಿ ವೇತನ ಹೆಚ್ಚಳ ಮಾಡಿರುವುದು ಸಂತಸ ತಂದಿದೆ. ಬೆವರಿಗೆ ಸೂಕ್ತ ಗೌರವ ನೀಡಿ ತಕ್ಕ ಪ್ರತಿ ಫಲವಾಗಿ, ನ್ಯಾಯಯುತವಾದ ವೇತನ ನೀಡಲು ಸರ್ಕಾರ ನಿರ್ಧರಿಸಿರುವುದನ್ನು ಸ್ವಾಗತಿಸಿದ್ದೇವೆ” ಎಂದು ಕಾರ್ಮಿಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಯುವ ಮುಖಂಡ ಜಿ ಪರಸಪ್ಪ, ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡ ಹಾಗೂ ಕಾರ್ಮಿಕರ ಪರ ದಲಿತ ಹೋರಾಟಗಾರ ಡಿ ‌ಹೆಚ್ ಮರಿಸ್ವಾಮಿ, ಗೋವಿಂದಪ್ಪ, ವಸತಿ ಶಾಲೆ ಹಾಗೂ ವಸತಿ ನಿಲಯಗಳ ಹೊರಗುತ್ತಿಗೆ ನೌಕರರಾದ ಅಂಜಿನಮ್ಮ, ಸಾವಿತ್ರಮ್ಮ, ಬೆನಾಳಮ್ಮ, ನಾಗರತ್ನ, ಕಲಾವತಿ, ಭಾರತಿ, ಲಕ್ಷ್ಮಿ, ಭಾಗ್ಯಮ್ಮ, ಸಿ ಜೆ ನಾಗರಾಜ, ಮಹಾಂತೇಶ, ಪವಿತ್ರ, ಸಿದ್ದಮ್ಮ, ರತ್ನಮ್ಮ, ಶಕುಂತಲಮ್ಮ, ಯಲ್ಲಮ್ಮ ಹಾಗೂ ಸಿದ್ದಲಿಂಗಮ್ಮ, ಕೆ.ರೇಣುಕಮ್ಮ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಸಿದ್ದಪ್ಪ ಸೇರಿದಂತೆ ಇತರರು ಹಾಜರಿದ್ದರು.

Advertisements

ಇದನ್ನೂ ಓದಿ: ವಿಜಯನಗರ | ಪಹಲ್‌ಗಾಮ್ ಭಯೋತ್ಪಾದಕರ ದಾಳಿಗೆ 28 ಜನರ ಸಾವು; ಡಿವೈಎಫ್ಐ ಖಂಡನೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X