ಅಜಿತ್‌ ಪವಾರ್‌ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಕೋರಿ ಸ್ಪೀಕರ್‌ಗೆ ಎನ್‌ಸಿಪಿ ಮನವಿ

Date:

Advertisements
  • ಉಪಮುಖ್ಯಮಂತ್ರಿಯಾಗಿ ಅಜಿತ್‌ ಪ್ರಮಾಣ
  • 1999ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್‌ ಪವಾರ್

ಅಜಿತ್‌ ಪವಾರ್‌ ತಮ್ಮ ಬೆಂಬಲಿತ ಎಂಟು ಶಾಸಕರ ಜೊತೆ ಬಂಡಾಯವೆದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಸರ್ಕಾರ ಸೇರಿದ ನಂತರ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ಒಂಬತ್ತು ಮಂದಿ ಶಾಸಕರ ವಿರುದ್ಧ ಅನರ್ಹತೆಯ ಅಸ್ತ್ರ ಪ್ರಯೋಗಿಸಲು ಎನ್‌ಸಿಪಿ ತೀರ್ಮಾನಿಸಿದೆ. ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಎನ್‌ಸಿಪಿ ವಿಧಾನ ಸಭಾಧ್ಯಕ್ಷರಿಗೆ ಮನವಿ ಮಾಡಿದೆ ಎಂದು ಸೋಮವಾರ (ಜುಲೈ 3) ಮಾಧ್ಯಮಗಳು ವರದಿ ಮಾಡಿವೆ.

ಈ ಬಗ್ಗೆ ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, “ಅಜಿತ್‌ ಮತ್ತು ಇತರ ಶಾಸಕರ ಅನರ್ಹತೆ ಕುರಿತ ಅರ್ಜಿಯನ್ನು ಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ಸಲ್ಲಿಸಲಾಗಿದೆ” ಎಂದು ತಿಳಿಸಿದರು.

Advertisements

“ಎನ್‌ಸಿಪಿಯ ನಿರ್ಧಾರ ಕೈಗೊಳ್ಳುವ ಅಧಿಕಾರ ಶರದ್ ಪವಾರ್ ಬಳಿಯೇ ಇದೆ ಎಂದು ತಿಳಿಸುವ ಇ-ಮೇಲ್ ಸಂದೇಶವನ್ನು ಭಾರತದ ಚುನಾವಣಾ ಆಯೋಗಕ್ಕೂ ಕಳುಹಿಸಲಾಗಿದೆ” ಎಂದು ಜಯಂತ್‌ ಪಾಟೀಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ವೈಫಲ್ಯಗಳನ್ನು ಬೇರೆಡೆ ಸೆಳೆಯಲು ಜನರ ದಿಕ್ಕು ತಪ್ಪಿಸುತ್ತಿರುವ ಪ್ರಧಾನಿ: ಕಾಂಗ್ರೆಸ್ ಆಕ್ರೋಶ

ಮಹಾರಾಷ್ಟ್ರ ರಾಜಕೀಯದಲ್ಲಿ ಭಾನುವಾರ ಹಠಾತ್‌ ಬೆಳವಣಿಗೆಯಾಯಿತು. ಎನ್‌ಸಿಪಿಯ ಅಜಿತ್‌ ಪವಾರ್‌ ಅವರು ಇತರ ಎಂಟು ಶಾಸಕರೊಂದಿಗೆ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಬಿಜೆಪಿ ಸರ್ಕಾರವನ್ನು ಸೇರಿದರು.

ಬಳಿಕ ಅಜಿತ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶರದ್‌ ಪವಾರ್‌ ಅವರು 1999ರಲ್ಲಿ ಎನ್‌ಸಿಪಿ ಸ್ಥಾಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X