ಬೀದರ್‌ | ರಸ್ತೆ ಮೇಲೆ ಹರಿಯುತ್ತಿದೆ ಚರಂಡಿ ನೀರು; ಅಧಿಕಾರಿ ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

Advertisements

ಸೂಕ್ತವಾದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದ ಕಾರಣ ಮನೆಯ ಮುಂಭಾಗದಲ್ಲಿ ಹೊಲಸು ನೀರು ಸಂಗ್ರಹವಾಗುತ್ತಿದ್ದು, ಓಣಿಯ ನಿವಾಸಿಗಳು ರೋಗದ ಭೀತಿಯಲ್ಲಿ ವಾಸಿಸುತ್ತಿದ್ದೇವೆ ಎಂದು ಬೀದರ್‌ ಜಿಲ್ಲೆಯ ಗ್ರಾಮಸ್ಥರು ದೂರಿದರು.

ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಗ್ರಾಮದ ದಲಿತ ಓಣಿಯಲ್ಲಿ ಕಳೆದ 8ರಿಂದ 10 ವರ್ಷಗಳಿಂದ ರಸ್ತೆ ಕಿತ್ತು ಹೋಗಿದ್ದರೂ ಸುಧಾರಣೆ ಕಂಡಿಲ್ಲ. ಇನ್ನು ಚರಂಡಿ ವ್ಯವಸ್ಥೆ ಅಂತೂ ಇಲ್ಲವೇ ಇಲ್ಲ. ಶುದ್ಧ ಕುಡಿಯುವ ನೀರಿನ ಪೈಪ್ ಇದೇ ಹೊಲಸು ನೀರಿನಲ್ಲಿದೆ. ಇದರಿಂದ ಕಾಲೋನಿಯ ಸುಮಾರು 40ಕ್ಕೂ ಹೆಚ್ಚಿನ ಕುಟುಂಬಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ” ಎಂದು ಸ್ಥಳೀಯ ನಿವಾಸಿ ಗೌತಮ ಸಿಂಧೆ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್‌ 2 1

ಸ್ಥಳೀಯ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮ ಪಂಚಾಯತ್ ಕೇಂದ್ರವಾದ ದಾಡಗಿ ಗ್ರಾಮದ ಇತರೆ ಓಣಿಯಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಮಾಡಲಾಗಿದೆ. ಆದರೆ ಪರಿಶಿಷ್ಟ ಜಾತಿ ಓಣಿಯಲ್ಲಿ ಸೌಕರ್ಯ ಒದಗಿಸಲು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರಿಗೆ ಕಳೆದ ಹಲವು ವರ್ಷಗಳಿಂದ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಇದೀಗ ಮಳೆಗಾಲ ಆರಂಭವಾದ ಕಾರಣ ಮನೆಮುಂದೆ ಸಂಗ್ರಹವಾದ ನೀರಿನಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ” ಎಂದು ಈ ದಿನ.ಕಾಮ್ ಗೆ ಮಾತನಾಡಿ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಸಂಘದಲ್ಲಿ ಸಾಲ ಮನ್ನಾಗೆ ಆಗ್ರಹಿಸಿ ಬಹಿರಂಗ ಪತ್ರ

ಈಗಾಗಲೇ ಜಿಲ್ಲೆಯ ಕೆಲವೆಡೆ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿದ್ದ ಘಟನೆಗಳು ಜರುಗಿವೆ. ಹೀಗಾಗಿ ಕೂಡಲೇ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ಅನಾಹುತಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ” ಎಂದು ಓಣಿಯ ನಿವಾಸಿಗಳು ಎಚ್ಚರಿಸಿದರು.

ಈ ವೇಳೆ ರಾಜಕುಮಾರ್ ಕಾಂಬಳೆ, ಮಾರುತಿ ಧಾವಲೆ, ಸಾಧಿಕ್ ಮಿಯ್ಯಾ, ಶಿವರಾಜ್ ಕಾಂಬಳೆ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X