ರಾಯಚೂರು | ಪರಿಶಿಷ್ಟ ಜಾತಿಗಳ ಸಮೀಕ್ಷೆ ; ಮಾದಿಗ ನಮೂದಿಸಲು ಮನವಿ

Date:

Advertisements

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನೀಡಲು ರಚಿಸಲಾಗಿರುವ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗ ಮೇ 5 ರಿಂದ ಜಾತಿಗಣತಿ ನಡೆಸಲಿದ್ದು ಮಾದಿಗ ಸಮೂದಾಯ ಜನರು ಬೇರೆ ಬೇರೆ ಉಪಜಾತಿಗಳನ್ನು ನಮೂದಿಸುವ ಬದಲು ಮಾದಿಗ ಎಂದು ನಮೂದಿಸಬೇಕೆಂದು ಮೀಸಲಾತಿ ಹೋರಾಟ ಸಮಿತಿ ಸಂಚಾಲಕ ಜೆ.ಬಿ.ರಾಜು ಮನವಿ ಮಾಡಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಕಳೆದ 35 ವರ್ಷಗಳಿಂದ ಒಳ ಮೀಸಲಾತಿಗೆ ಆಗ್ರಹಿಸಿ ರಾಜ್ಯದಲ್ಲಿ ಹೋರಾಟ ನಡೆದಿದೆ. ಕೊನೆಗೂ ತಾರ್ಕಿಕ ಅಂತ್ಯ ಕಾಣುವ ದಿನಗಳು ಸಮೀಪಿಸಿವೆ. ಮನೆ ಮನೆಗೆ ಬರುವ ಗಣತಿದಾರರಿಗೆ ಕಲಂ 61 ರಲ್ಲಿ ಮಾದಿಗ ಎಂದ ನಮೂದಿಸಬೇಕಿದೆ. ಬೇರೆ ಬೇರೆ ಉಪಜಾತಿಗಳಿಂದ ಸಮೂದಾಯ ಜನರನ್ನು ಕರೆಯಲಾಗುತ್ತಿದ್ದು ಮಾದಿಗ ಎಂದು ನಮೂದಿಸಿದರೆ ಖಚಿತ ದತ್ತಾಂಶ ಸಂಗ್ರಹಕ್ಕೆ ಸಹಕಾರಿಯಾಗುತ್ತದೆ ಎಂದರು.

ಜಾತಿ ಗಣತಿ ನಡೆಯಲು ಸಮೂದಾಯ ಸಂಘಟಕರು ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ಜಾತಿ ನಮೂದಿಸಲು ಜಾಗೃತಿ ಮೂಡಿಸಲಾಗುತ್ತದೆ. ಮೇ 1 ರಂದು ಜಾಗೃತಿ ಜಾಥಾ ನಡೆಸಲಾಗುತ್ತದೆ. ಜಿಲ್ಲೆಯ ಎಲ್ಲಾ ತಾಲೂಕ, ಹೋಬಳಿ ಕೇಂದ್ರಗಳಿಗೆ ತೆರಳಿ ಸಮೂದಾಯ ಜನರಲ್ಲಿ ಅರಿವು ಮೂಡಿಸಲಾಗುತ್ತದೆ.ನಗರದ ಅಂಬೇಡ್ಕರ್ ವೃತ್ತದಿಂದ ಜಾಥಾ ಪ್ರಾರಂಭಗೊಳ್ಳುತ್ತದೆ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ವೈಯಕ್ತಿಕ ದ್ವೇಷ ;ಕ್ಲರ್ಕ್ ಮೇಲೆ ಮಚ್ಚಿನಿಂದ ಕೊಲೆಗೆ ಯತ್ನ

ಎಂ ವಿರೂಪಾಕ್ಷಿ ಮಾತನಾಡಿ ಜಿಲ್ಲೆಯಲ್ಲಿ ನಡೆಯುವ ಜಾತಿ ಗಣತಿಯಿಂದ ಸಮೂದಾಯ ಜನರು ವಂಚಿತರಾಗದಂತೆ ಎಚ್ಚರವಹಿಸಬೇಕಿದೆ. ಸಮೂದಾಯ ಜನರಿಗೆ ತಿಳುವಳಿಕೆ ನೀಡಲು ಮೇ 1 ರಿಂದ ಪ್ರಾರಂಭವಾಗುವ ಜಾಗೃತಿ ಜಾಥಾವನ್ನು ಮಹಾನಗರ ಪಾಲಿಕೆ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ ಉದ್ಘಾಟಿಸಲಿದ್ದಾರೆ.

ಮತ್ತೊಬ್ಬ ಹೋರಾಟಗಾರ ಅಂಬಣ್ಣ ಆರೋಲಿಕರ ಮಾತನಾಡಿ ಮೇ 5 ರಿಂದ ಪ್ರಾರಂಭವಾಗುವ ಜಾತಿ ಗಣತಿ ಮೇ 31 ಕ್ಕೆ ಅಂತ್ಯಗೊಳ್ಳುತ್ತದೆ. ಸಮೂದಾಯ ಜನರ ಆಧಾರ ಕಾರ್ಡ, ಜಾತಿ ಪ್ರಮಾಣ ಪತ್ರ ಸೇರಿದಂತ ಇತರೆ ದಾಖಲೆಗಳನ್ನು ಪರಿಶೀಲಿಸಿ ಉಪ ಜಾತಿ ನಮೂದಿಸಲಾಗುತ್ತದೆ. ಸುಳ್ಳು ಮಾಹಿತಿ ನೀಡಲು ಅವಕಾಶವೇ ಇಲ್ಲ. ಸಮುದಾಯ ಜನರು ಗೊಂದಲಕ್ಕೆ ಒಳಗಾಗದೇ ಮಾದಿಗ ಎಂದು ನಮೂದಿಸಬೇಕು.ಸಮಾಜದ ಮುಖಂಡರುಗಳು ಸರಿಯಾದ ದಾಖಲೀಕರಣಕ್ಕೆ ಸಹರಿಸಬೇಕೆಂದರು.

ಈ ಸಂದರ್ಬದಲ್ಲಿ ನರಸಿಂಹಲು ಮಾಡಗಿರಿ, ಕೆ.ಪಿ.ಅನಿಲ್‌ಕುಮಾರ, ನರಸಪ್ಪ ಆಶಾಪುರು, ಶಂಕರಪ್ಪ ಹೊಸೂರು ಸೇರಿ ಅನೇಕರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X