ಅಧಿವೇಶನ-2023 | ಸಂವಿಧಾನ ಪೀಠಿಕೆ ಓದು ವಿಚಾರ, ಸಭಾಧ್ಯಕ್ಷರ ನಡೆಗೆ ಯತ್ನಾಳ್ ತೀವ್ರ ಆಕ್ಷೇಪ

Date:

Advertisements

16ನೇ ವಿಧಾನಸಭೆಯ ಮೊದಲ ದಿನದ ಅಧಿವೇಶನದಲ್ಲಿ ಸಂವಿಧಾನ ಪೀಠಿಕೆ ಓದು ವಿಚಾರವಾಗಿ ಸಭಾಧ್ಯಕ್ಷ ಯು ಟಿ ಖಾದರ್‌ ನಡೆಯನ್ನು ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ತೀವ್ರವಾಗಿ ಖಂಡಿಸಿದರು.

ಅಧಿವೇಶನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ಯು ಟಿ ಖಾದರ್ ಅವರು ಸಂವಿಧಾನದ ಮೂಲ ಪೀಠಿಕೆ ಪುಟವನ್ನು ಓದಿ ಹೇಳುವುದರ ಜೊತೆಗೆ ಎಲ್ಲರೂ ಅದನ್ನು ಮರು ಓದಿದರು. ಆದರೆ, ಆರಂಭದಲ್ಲೇ ಸಭಾಧ್ಯಕ್ಷರು ಓದಿದ ಮತ್ತು ಸದಸ್ಯರ ಕೈಯಲ್ಲಿ ನೀಡಿದ್ದ ಕಾಪಿ ಬೇರೆ ಬೇರೆಯಾಗಿತ್ತು. ಈ ವಿಚಾರಕ್ಕೆ ಯತ್ನಾಳ್‌ ಆಕ್ಷೇಪ ಎತ್ತಿದರು.

“ಸಭಾಧ್ಯಕ್ಷರೇ, ಓದಿದ ಸಂವಿಧಾನದ ಮೂಲ ಪೀಠಿಕೆಗೂ ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ಪೀಠಿಕೆಗೂ ವ್ಯತ್ಯಾಸವಿದೆ. ಇದು ಸರಿಯಲ್ಲ. ಸಂವಿಧಾದನ ಆಶಯ ಬದಲಾಗಬಾರದು. ಈ ನಡೆಯನ್ನು ನಾನು ಕಟುವಾಗಿ ಖಂಡಿಸುವೆ. ಇದು ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾದುದು. ಮೂಲ ಸಂವಿಧಾನದ ಪೀಠಿಕೆಯಲ್ಲಿ ಒಂದಕ್ಷರವೂ ಬದಲಾಗದಂತೆ ಬೋಧಿಸಬೇಕು” ಎಂದರು.

Advertisements

ಯತ್ನಾಳ್‌ ಮಾತಿಗೆ ಆಡಳಿತ ಪಕ್ಷದ ಸದಸ್ಯರೊಬ್ಬರು ಎದ್ದು ನಿಂತು, “ಬಿಜೆಪಿ ಸಂವಿಧಾನವನ್ನೇ ಬದಲಿಸಲು ಹೊರಟಿದ್ದನ್ನು ನಾವು ಮರೆತಿಲ್ಲ. ಭೂತದ ಬಾಯಲ್ಲಿ ಭಗವದ್ಗೀತೆ” ಎಂದು ವ್ಯಂಗ್ಯವಾಡಿದರು.

ಸಭಾಧ್ಯಕ್ಷರು ಮಧ್ಯ ಪ್ರವೇಶಿಸಿ, “ಬಿಜೆಪಿ ಸದಸ್ಯರ ಆಕ್ಷೇಪವನ್ನು ತೆಗೆದುಹಾಕದೆ ಅವರಿಗೆ ಸಮಾಧಾನ ಮಾಡುವಂತೆ ಮುಂದಿನ ದಿನಗಳಲ್ಲಿ ಈ ತಪ್ಪನ್ನು ಸರಿಪಡಿಸಿಕೊಳ್ಳಲಾಗುವುದು” ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡು ಅದನ್ನು ಅಲ್ಲಿಗೇ ಬಿಡಲು ಹಾಗೂ ಜನಪರ ಕೆಲಸ ಮಾಡುವ ವಿಷಯದ ಬಗ್ಗೆ ಗಮನ ಕೊಡಲು ಸದಸ್ಯರಲ್ಲಿ ಮನವಿ ಮಾಡಿಕೊಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ, “ಸಭಾಧ್ಯಕ್ಷರು ಓದಿದ ಸಂವಿಧಾನ ಪೀಠಿಕೆ ಪ್ರತಿಗೂ ಮತ್ತು ನಮಗೆ ಕೊಟ್ಟ ಪ್ರತಿಗೂ ವ್ಯತ್ಯಾಸವಿದೆ. ಆದರೆ, ಆಶಯ ಒಂದೇ ಎಂದು” ಸಮಜಾಯಿಷಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X