ಬೀದರ್‌ | ಸ್ಮಶಾನ ಭೂಮಿ ಮಂಜೂರಾತಿಗೆ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಆಗ್ರಹ

Date:

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಎನ್‌ಎಸ್‌ಒಎಸ್‌ವೈಎಫ್‌ ಕಾರ್ಯಕರ್ತರು ಬೀದರ್‌ ಜಿಲ್ಲೆಯ ಔರಾದ್‌ ತಾಲೂಕು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಪ್ರತಿಭಟಿಸಿದರು.

“ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಔರಾದ್ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ‌ಸಾಧ್ಯವಾಗುತ್ತಿಲ್ಲ. ಶೈಕ್ಷಣಿಕ ಅಭಿವೃದ್ಧಿಗೆ ಉನ್ನತ ಶಿಕ್ಷಣ ಸಂಸ್ಥೆಗಳಿಲ್ಲ. ಉದ್ಯೋಗಕ್ಕೆ  ಯಾವುದೇ ರೀತಿಯ ಕಾರ್ಖಾನೆ, ಕಂಪನಿ, ವ್ಯಾಪಾರ ಕೇಂದ್ರಗಳಿಲ್ಲ. ಹೀಗೆ ಸುಮಾರು ಸಮಸ್ಯೆಗಳಿಗೆ ಒಳಗಾಗಿ ಬಡತನದಲ್ಲಿ ವಾಸಿಸುತ್ತಿರುವ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಅಂತಿಮ ಸಂಸ್ಕಾರ ನಡೆಸಲು ಜಾಗ ಇಲ್ಲದಿರುವುದು ಜ್ವಲಂತ ಸಮಸ್ಯೆಯಾಗಿದೆ” ಎಂದು ದೂರಿದರು.

ನಮ್ಮ ಸಂಘಟನೆಯಿಂದ ಹಲವು ಬಾರಿ ಮನವಿ ಮಾಡಿದ್ದೇವೆ. 2017ರ ಎಪ್ರಿಲ್ 9ರಂದು ಧರಣಿ  ಸತ್ಯಾಗ್ರಹವನ್ನೂ ಮಾಡಿದ್ದೇವೆ. ಆದರೆ ನಮಗೆ ಈವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಅದಕ್ಕಾಗಿ ನಮ್ಮ ಸಂಘಟನೆಯ ರಾಜ್ಯ ಸಂಚಾಲಕ ಶಿವ ಕಾಂಬಳೆ ನೇತೃತ್ವದಲ್ಲಿ ಹಲವು ಮುಖಂಡರು  ಮತ್ತೆ 2017ರ ನವೆಂಬರ್ 22ರಂದು ಮೂರು ದಿನಗಳ ಕಾಲ ನಿರಂತರವಾಗಿ   ಉಪವಾಸ ಸತ್ಯಾಗ್ರಹ ನಡೆಸಲಾಗಿತ್ತು” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿಮಾ ಯೋಜನೆ ವಂಚನೆಗೆ ಕಡಿವಾಣ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

“ಬೀದರ್ ಸಹಾಯಕ ಆಯುಕ್ತ ಶಿವಕುಮಾರ ಶಿಲವಂತ  ತಹಶೀಲ್ದಾರ್ ಮುಖಾಂತರ 2017ರಲ್ಲಿ ತಾಲೂಕಿನಾದ್ಯಂತ 30 ದಿನಗಳಲ್ಲಿ ಸ್ಮಶಾನ ಭೂಮಿ ಹದ್ದುಬಸ್ತಿ ಮತ್ತು ಮಂಜೂರು ಮಾಡಬೆಕೆಂದು ಆದೇಶ ಮಾಡಿದ್ದರು. ಆದರೆ ಈವರೆಗೆ ಔರಾದ್ ಪಟ್ಟಣ ಸೇರಿದಂತೆ ತಾಲೂಕಿನ ಯಾವುದೇ ಗ್ರಾಮಗಳಿಗೆ ಸ್ಮಶಾನ ಭೂಮಿ ಮಂಜೂರು ಮಾಡದಿರುವುದು ದುರಂತವೇ ಸರಿ. ಇಂಥ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ಸ್ಮಶಾನ ಭೂಮಿ ಮಂಜೂರು ಪ್ರಕ್ರಿಯೆ ನಡೆಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕ ಶಿವಕುಮಾರ ಕಾಂಬಳೆ, ಪ್ರವೀಣ ಕಾರಂಜೆ, ಸುನೀಲ ವಾಘಮಾರೆ, ಸಂತೋಷ ಸೂರ್ಯವಂಶಿ, ಸುಂದರ ಮೇತ್ರೆ, ದಿನೇಶ ಶಿಂಧೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X