ಹಾಸನ l ಆನೆ ದಾಳಿ: ತೋಟದ ಮಾಲೀಕ ಸಾವು 

Date:

Advertisements

ಕಾಡಾನೆ ದಾಳಿಗೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಅಮೃತೇಶ್ವರ ಕಾಫಿ ತೋಟದ ಮಾಲಿಕ ಮೃತ ವ್ಯಕ್ತಿ ಷಣ್ಮುಖ(45), ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ತೋಟದಲ್ಲಿ ಕೆಲಸ ಮಾಡಿಸಲು ತೆರಳಿದ ಸಂದರ್ಭದಲ್ಲಿ, ಈ ದುರ್ಘಟನೆ ನಡೆದಿದೆ.

ಮೃತ ಷಣ್ಮುಖ 15 ಎಕರೆ  ಕಾಫಿ ತೋಟ ಹೊಂದಿದ್ದು, ರಾತ್ರಿಯಿಂದಲೇ ಆನೆಗಳ ಹಿಂಡು ತೋಟದಲ್ಲಿ ಬೀಡು ಬಿಟ್ಟಿದೆ ಎಂದು ಅರಣ್ಯ ಇಲಾಖೆಯವರು ಎಲ್ಲೆಡೆ ಕರೆ ಕೊಟ್ಟಿದ್ದರು. ಈ ಮಾಹಿತಿ ಷಣ್ಮುಖ ಅವರಿಗೂ ತಿಳಿದಿತ್ತು, ಆದರೂ ತೋಟಕ್ಕೆ ತೆರಳಿದ್ದಾರೆ. ಬೆಳಗ್ಗೆ ತೋಟಕ್ಕೆ ಹೋದವರು ಮನೆಗೆ ಹಿಂದುರುಗಿ ಬರದೇ ಇದ್ದಾಗ ಅವರ ಕುಟುಂಬದವರು ಸಮೀಪದವರಿಗೆ ತಿಳಿಸಿದ್ದಾರೆ, ಸ್ಥಳಕ್ಕೆ ಹೋಗಿ ನೋಡಿದಾಗ ಷಣ್ಮುಖ ಮೃತ ಪಟ್ಟಿದ್ದಾರೆ.

Advertisements

ಇದನ್ನೂ ಓದಿದ್ದೀರಾ?ಹಾಸನ l ಏ.28 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಈ ಘಟನೆ ಕುರಿತು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲಿಸಿ ದಯವಿಟ್ಟು ತೋಟ ಮತ್ತೆ ಗದ್ದೆಗೆ ಹೋಗುವವರು ಬೈಕಿನಲ್ಲಿ ತಿರುಗಾಡುವವರು ಗ್ರಾಮದ ಜನರು ಅತಿ ಎಚ್ಚರಿಕೆಯಿಂದ ಜಾಗರೂಕತೆಯಿಂದ ಓಡಾಡಬೇಕಾಗಿ ಅಧಿಕಾರಿಗಳು  ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X