ಉಡುಪಿ | ಕೊಲ್ಲೂರು ಕೊರಗ ಮಹಿಳೆಯ ಮನೆ ಧ್ವಂಸ, ಡಿಸಿ ಮತ್ತು ಎಸ್ ಪಿಗೆ ಮನವಿ ಸಲ್ಲಿಕೆ

Date:

Advertisements

ನಕಲಿ ದಾಖಲೆ ಮುಂದಿಟ್ಟುಕೊಂಡು ಕೋರ್ಟಿನಿಂದ ಆದೇಶ ತಂದು ಕೊಲ್ಲೂರಿನ ಕೊರಗ ವಿಧವಾ ಮಹಿಳೆ ಗಂಗೆ ಅವರ ಮನೆಯನ್ನು ಜೆಸಿಬಿ ಮೂಲಕ ನೆಲಸಮ ಮಾಡಿ ಧ್ವಂಸಗೊಳಿಸಿದ ಜಗದಾಂಭಾ ಟ್ರಸ್ಟ್ ವಿರುದ್ಧ ಸೂಕ್ತ ಕ್ರಮಕೊಳ್ಳು ವಂತೆ ಆಗ್ರಹಿಸಿ ಇಂದು ಕರ್ನಾಟಕ ಮತ್ತು ಕೇರಳ ಕೊರಗ ಒಕ್ಕೂಟ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಶಾಖೆ ವತಿಯಿಂದ ಮನವಿ ಸಲ್ಲಿಸಲಾಯಿತು.

1005211469

ಸಂತ್ರಸ್ತೆ ಮಹಿಳೆ ಗಂಗೆ ಅವರಿಗೆ ಅದೇ ಜಾಗದಲ್ಲಿ ಹಕ್ಕು ಪತ್ರ ನೀಡಿ ಮನೆ ನಿರ್ಮಿಸಿಕೊಡಬೇಕು ಮತ್ತು ಸೂಕ್ತ ಪರಿಹಾರ ಒದಗಿಸಬೇಕು. ದಲಿತ ದೌರ್ಜನ್ಯ ನಿಷೇಧ ಕಾಯ್ದೆ ಅನ್ವಯ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.

ಮನವಿಗೆ ಸ್ಪಂಧಿಸಿದ ಅಧಿಕಾರಿಯವರು ಇನ್ನೆರಡು ದಿನದೊಳಗೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ನಿಯೋಗದಲ್ಲಿ ಸಂತ್ರಸ್ತೆ ಗಂಗೆ, ಕೊರಗ ಒಕ್ಕೂಟದ ಸುಶೀಲ ನಾಡ, ಪುತ್ರನ್, ಕುಮಾರದಾಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು, ಸಂಘಟನಾ ಸಂಚಾಲಕರಾದ ಸುರೇಶ ಹಕ್ಲಾಡಿ, ಅಣ್ಣಪ್ಪ ನಕ್ರೆ, ಮಂಜುನಾಥ ನಾಗೂರು, ಗೀತಾ ಸುರೇಶ, ಚೈತ್ರ ಬೈಂದೂರು, ರಾಜು ಬೆಟ್ಟಿನಮನೆ, ಗೋಪಾಲಕೃಷ್ಣ ನಾಡ, ಸಂತ್ರಸ್ತೆಯ ಇಬ್ಬರು ಮಕ್ಕಳು ಉಪಸ್ಥಿತರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X