ಐಪಿಎಲ್ : ಇತಿಹಾಸ ಸೃಷ್ಟಿಸಿದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ; ಸ್ಫೋಟಕ ಶತಕ

Date:

Advertisements

ಐಪಿಎಲ್ ಇತಿಹಾಸದಲ್ಲಿ ಕೇವಲ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇಂದು ಗುಜರಾತ್ ಟೈಟಾನ್ಸ್ ಎದುರು ಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲಿಗೆ ಸೃಷ್ಟಿಸಿದ್ದಾರೆ.

ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಇದೀಗ 2025ರ ಐಪಿಎಲ್ ಟೂರ್ನಿಯಲ್ಲಿ ಅತಿವೇಗದ ಅರ್ಧಶತಕ ಸಿಡಿಸಿದ ಅಪರೂಪದ ಸಾಧನೆಯನ್ನು ಮಾಡುವ ಮೂಲಕ ಎಲ್ಲ ಹಿರಿಯ ಆಟಗಾರರು ಹುಬ್ಬೇರುವಂತೆ ಮಾಡಿದ್ದಾರೆ.

ಏಪ್ರಿಲ್ 20ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ವೈಭವ್, ದೈತ್ಯ ಆಟಗಾರ ಕ್ರಿಸ್ ಗೇಲ್ ಬಳಿಕ ಈ ಸಾಧನೆ ಮಾಡಿದ್ದಾರೆ. ಅಲ್ಲದೇ, ಅತಿಕಿರಿಯ ಕ್ರಿಕೆಟಿಗ ಎನ್ನುವ ಹಿರಿಮೆಗೂ ಪಾತ್ರರಾಗಿದ್ದಾರೆ.

Advertisements

ಲಕ್ನೋ ವಿರುದ್ಧ ತಾನು ಎದುರಿಸಿದ್ದ ಶಾರ್ದುಲ್ ಠಾಕೂರ್ ಅವರ ಮೊದಲ ಎಸೆತದಲ್ಲೇ ವೈಭವ್ ಸೂರ್ಯವಂಶಿ ಸಿಕ್ಸರ್ ಬಾರಿಸುವ ಮೂಲಕ ಮಿಂಚಿದ್ದರು. ಇದೀಗ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸ್ಫೋಟಕ ಶತಕ ಬಾರಿಸುವ ಮೂಲಕ ಆಡಿದ ಮೂರನೇ ಪಂದ್ಯದಲ್ಲಿ ಮೊದಲನೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವರ್ಷದ ಕೊನೆಯಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನ ಎರಡನೇ ದಿನ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಬರೋಬ್ಬರಿ 1.1 ಕೋಟಿ ರೂಪಾಯಿ ನೀಡಿ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಿತ್ತು. ಆಗ 13 ವರ್ಷದವರಾಗಿದ್ದ ವೈಭವ್ ಈಗ 14 ವರ್ಷದವರಾಗಿದ್ದಾರೆ.

ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಾಯಕ ಶುಭ್‌ಮನ್ ಗಿಲ್(84) ಹಾಗೂ ಜೋಸ್ ಬಟ್ಲರ್(50) ಅಜೇಯ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತ್ತು.

ಆದರೆ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಅತ್ಯದ್ಭುತ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ ಕೇವಲ 11.5 ಓವರ್‌ನಲ್ಲಿ 166 ರನ್‌ಗಳ ಜೊತೆಯಾಟವಾಡುವ ಮೂಲಕ ರಾಜಸ್ಥಾನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸೂರ್ಯವಂಶಿ 38 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 11 ಸಿಕ್ಸರ್ ಸಹಿತ 101 ರನ್ ಸಿಡಿಸಿ ಪ್ರಸಿದ್ಧ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಯಶಸ್ವಿ ಜೈಸ್ವಾಲ್ ಅಜೇಯ 70 ರನ್ ಸಿಡಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X