ಬೆಂಗಳೂರು | ಗಾಂಧಿಯವರ ವಿಚಾರಗಳು ಸಾರ್ವಕಾಲಿಕ: ಡಾ.ವೂಡೇ ಪಿ ಕೃಷ್ಣ

Date:

Advertisements

ಗಾಂಧಿಯವರ ವಿಚಾರಗಳು ಮತ್ತು ಚಿಂತನೆಗಳು ಎಂದೆಂದಿಗೂ ಸಾರ್ವಕಾಲಿಕ. ಇಂದಿನ ಯುವ ಸಮುದಾಯ ಗಾಂಧಿಯವರ ಜೀವನ ಚರಿತ್ರೆ ತಿಳಿದುಕೊಳ್ಳುವುದು ಮತ್ತು ಅವರು ನಡೆಸಿದ ಜೀವನ ಶೈಲಿ ತಿಳಿದುಕೊಳ್ಳುವುದು ಅತ್ಯವಶ್ಯ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ ಕೃಷ್ಣ ಹೇಳಿದರು.

ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯುವ ಸಮುದಾಯಕ್ಕಾಗಿ ಗಾಂಧಿ” ಶಿಬಿರವನ್ನು
ಉದ್ಘಾಟಿಸಿ ಮಾತನಾಡಿದ ಅವರು, “ಗಾಂಧಿಯವರ ವಿಚಾರಧಾರೆಗಳು ಅಂದಿಗಿಂತ ಹೆಚ್ಚಾಗಿ ಇಂದಿಗೆ ಅನಿವಾರ್ಯವಾಗಿವೆ. ಯುವ ಪೀಳಿಗೆ ಅವರ ಅಹಿಂಸಾ ದಾರಿಯಲ್ಲಿ ನಡೆದು ಅವರ ಕನಸುಗಳನ್ನು ಸಾಕಾರಗೊಳಿಸಬೇಕು. ಅದನ್ನು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯ ಕೈಗೊಳ್ಳುವುದೂ ಅಗತ್ಯ” ಎಂದು ಹೇಳಿದರು.

ರಂಗ ನಿರ್ದೇಶಕ ಶ್ರೀಪಾದ ಭಟ್ ಮಾತನಾಡಿ, “ಇಂದಿನ ದಿನಗಳಲ್ಲಿ ಗಾಂಧಿ ಕುರಿತು ಹಲವರಿಗೆ ವಿರೋಧ ಭಾವನೆ ಇದೆ. ಅವರಿಗೆ ಅಪಪ್ರಚಾರ ಮಾಡುವ ಕಾರ್ಯಗಳು ನಡೆಯುತ್ತಿವೆ. ಇದೆಲ್ಲವನ್ನು ಯುವ ಸಮುದಾಯ ಈ ಗಾಂಧೀ ಶಿಬಿರದ ಮೂಲಕ ಗಾಂಧಿಯ ತತ್ವಗಳು, ಚಿಂತನೆಗಳ ಕುರಿತು ಡಿಜಿಟಲ್ ಮಾಧ್ಯಮದ ಮೂಲಕ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು. ಗಾಂಧಿಯ ಬಗ್ಗೆ ಇರುವ ಊಹಾಪೋಹಗಳ ಬಗ್ಗೆ ಸ್ಪಷ್ಟತೆ ನೀಡಬೇಕು” ಎಂದರು.

Advertisements

ಇದನ್ನೂ ಓದಿ: ಬೆಂಗಳೂರು | 400 ಮರಗಳ ಮಾರಣಹೋಮಕ್ಕೆ ರೈಲ್ವೆ ಸಿದ್ಧತೆ; ಪರಿಸರವಾದಿಗಳ ಆಕ್ರೋಶ

ಕಾರ್ಯಕ್ರಮದಲ್ಲಿ ಅನಂತ ಶಾಂದ್ರೆಯ, ಜಗದೀಶ್, ವಿಜಯ ಹನಕೆರೆ, ತನುಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X