ಇಂಡಿ ತಾಲೂಕಿನ ಕೆರೆಗಳಿಗೆ ಕಂದಾಯ ಉಪ ವಿಭಾಗಾಧಿಕಾರಿ ಭೇಟಿ; ರೈತರು ಜೋಡಿಸಿದ್ದ 25 ಪಂಪ್‌ಸೆಟ್‌ ಜಪ್ತಿ

Date:

Advertisements

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೆಗಳಾದ ಸಂಗೋಗಿ, ತಡವಲಗಾ, ನಿಂಬಾಳ ಕೆಡಿ, ಹಂಜಗಿ ಕೆರೆಗಳಿಗೆ ಕಂದಾಯ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಅವರ ನೇತೃತ್ವದಲ್ಲಿ ಆಕಸ್ಮಿಕ ಭೇಟಿ ನೀಡಿದರು.

ಸಂಗೋಗಿ ಕೆರೆಗೆ ರೈತರು ಜೋಡಿಸಿದ್ದ 25 ಪಂಪ್‌ಸೆಟ್‌ಗಳನ್ನು ಜಪ್ತಿ ಮಾಡಿ, ʼಕೆರೆಯ ನೀರು ಕೇವಲ ಕುಡಿಯುವ ನೀರಿಗಾಗಿ ಮಾತ್ರ ಬಳಸಲಾಗುತ್ತಿದ್ದು, ರೈತರು ಕೃಷಿಗೆ ಬಳಸಿದರೆ ಎಫ್‌ಐಆರ್ ದಾಖಲಿಸಲಾಗುವುದು” ಎಂದು ತಾಕೀತು ಮಾಡಿದರು.

“ಬೇಸಿಗೆ ಬೇಗೆಯ ಕಾವು ತಾಲೂಕಿನಾದಂತ ಏರುತ್ತಿರುವಂತೆಯೇ ತಾಲೂಕಿನಲ್ಲಿ ಜಲಸಂಕಟದ ಭೀತಿ ಎದುರಾಗಿದೆ. ಕೆರೆಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಸದ್ಯ ಕೆರೆಯಲ್ಲಿರುವ ನೀರು ಕೇವಲ ಗ್ರಾಮದ ಜನರಿಗೆ ಉಪಯೋಗಕ್ಕೆ ಮಾತ್ರ ಬಳಸಲು ಆದೇಶವಿದೆ. ರೈತರು ಕೃಷಿಗೆ ಬಳಸಬಾರದು” ಎಂದು ಎಸಿ ಅನುರಾಧಾ ಹೇಳಿದರು.

Advertisements
ಪಂಪ್‌ಸೆಟ್‌ ಜಪ್ತಿ

“ಮೇ ತಿಂಗಳಲ್ಲಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಲುವಾಗಿ ಕೆರೆಗಳಲ್ಲಿ ನೀರು ಸಂಗ್ರಹಿಸಲಾಗುತ್ತಿದೆ. ಅದನ್ನು ಕೃಷಿಗೆ ಬಳಸಿದರೆ ಮುಂದೆ ಕೆರೆ ತುಂಬಲು ಕಷ್ಟ. ಹೀಗಾಗಿ ಕೆರೆಯ ನೀರು ಬಳಸಬಾರದು” ಎಂದು ವಿನಂತಿಸಿದರು.

ಇಒ ನಂದೀಪ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಕಂದಾಯ ನಿರೀಕ್ಷಕ ಎಚ್ ಎಚ್ ಗುನ್ನಾಪುರ, ಪಿಡಿಒ ಅಶೋಕ ಹೊನವಾಡ, ಪಿಎಸ್‌ಐ ಎಸ್ ಬಿ ಗಂಗನಹಳ್ಳಿ ಸೇರಿದಂತೆ ಇತರರು ಇದ್ದರು.

ಮಹಿಳಾ ಧ್ವನಿ ಪ್ರಾಯೋಗಿಕ ಪತ್ರಿಕೆಯ 100ನೇ ಸಂಚಿಕೆ ಬಿಡುಗಡೆ

ಮಹಿಳಾ ವಿವಿ 3

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಹಿಳಾ ಧ್ವನಿ ಪ್ರಾಯೋಗಿಕ ಪತ್ರಿಕೆಯ 100ನೇ ಸಂಚಿಕೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಬಿಡುಗಡೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | 8 ಮಂದಿ ಮಕ್ಕಳೊಂದಿಗೆ ಆರಂಭವಾದ ಶಾಲೆಯಲ್ಲಿ ಇಂದು 148 ದಾಖಲಾತಿ; ಕಾರಣವೇನು?

ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕ ಸಂದೀಪ, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X