ಮಂಗಳೂರು ವಲಸೆ ಕಾರ್ಮಿಕನ ಹತ್ಯೆ ಘಟನೆ: ಮೃತಪಟ್ಟವನ ವಿವರ ಪತ್ತೆ

Date:

Advertisements

ಮಂಗಳೂರಿನ ಕುಡುಪು ಎಂಬಲ್ಲಿ ವಲಸೆ ಕಾರ್ಮಿಕನೋರ್ವನನ್ನು ಸುಮಾರು 30ಕ್ಕೂ ಅಧಿಕ ಮಂದಿಯ ಗುಂಪೊಂದು ಕೈಗೆ ಸಿಕ್ಕಿದ್ದನ್ನೆಲ್ಲ ಬಳಸಿಕೊಂಡು ಹತ್ಯೆ ಮಾಡಿದ್ದ ಘಟನೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ವಿವರ ಕೊನೆಗೂ ಪತ್ತೆಯಾಗಿದೆ.

ಮೃತಪಟ್ಟ ವ್ಯಕ್ತಿಯ ಸುದ್ದಿ, ಫೋಟೋ ಹಾಗೂ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ ನಂತರ ಗುರುತು ಪತ್ತೆಯಾಗಿದ್ದು, ಮೃತಪಟ್ಟ ವಲಸೆ ಕಾರ್ಮಿಕ ಕೇರಳದ ವಯನಾಡ್ ಜಿಲ್ಲೆಯ ನಿವಾಸಿ ಎಂದು ಕೇರಳದ ‘ಮೀಡಿಯಾ ವನ್’ ಚಾನೆಲ್ ವರದಿ ಮಾಡಿದೆ.

WhatsApp Image 2025 04 29 at 8.40.38 PM

ಮೃತಪಟ್ಟ ವ್ಯಕ್ತಿಯನ್ನು ಕುಂಞಿದ್ದುಕ್ಕಾ ಎಂಬುವವರ ಪುತ್ರ ಅಶ್ರಫ್ ಪುಲ್ಪಲ್ಲಿ ಎಂದು ಗುರುತಿಸಲಾಗಿದೆ. ಈತ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿ ಗೆದ್ದಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಪುಲ್ಪಲ್ಲಿ ನಿವಾಸಿ ಎಂದು ತಿಳಿದು ಬಂದಿದೆ.

Advertisements

ಈದಿನ ಡಾಟ್ ಕಾಮ್ ಮೃತಪಟ್ಟ ವ್ಯಕ್ತಿಯ ಸಹೋದರ ಹಮೀದ್ ಎಂಬುವವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದು, ‘ಫೋಟೋದಲ್ಲಿರುವ ವ್ಯಕ್ತಿ ನನ್ನ ಸಹೋದರ ಅಶ್ರಫ್’ ಎಂದು ಖಚಿತಪಡಿಸಿದ್ದಾರೆ.

“ಫೋಟೋ ನೋಡಿದಾಗ ನಮ್ಮ ಸಹೋದರ ಎಂದು ಗೊತ್ತಾಗಿದೆ. ಹೊಟೇಲ್‌ಗಳಲ್ಲಿ ಕಾರ್ಮಿಕರಾಗಿ ದುಡಿಯುವ ಹವ್ಯಾಸ ಇತ್ತು. ದುಡಿದು ಸಂಪಾದಿಸುವ ಹಣವನ್ನು ಹಲವರಿಗೆ ಹಂಚುವ ಹವ್ಯಾಸವಿತ್ತು. ಅವರಿಗೆ 38 ವರ್ಷ ವಯಸ್ಸು. ಕಳೆದ ಎರಡು ತಿಂಗಳ ಹಿಂದೆ ನಮ್ಮ ತಾಯಿಯನ್ನು ನೋಡಲೆಂದು ಊರಿಗೆ ಬಂದಿದ್ದರು. ಆ ಬಳಿಕ ಎಲ್ಲಿಗೆ ಹೋಗಿದ್ದರು ಎಂಬ ಮಾಹಿತಿ ಇರಲಿಲ್ಲ. ಮಂಗಳೂರಿನಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಮೃತಪಟ್ಟ ಬಗ್ಗೆ ಸುದ್ದಿಯನ್ನು ಗಮನಿಸಿದಾಗ ನಮಗೆ ವಿಷಯ ಗೊತ್ತಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದೇವೆ. ಇವತ್ತು ರಾತ್ರಿಯೇ ಮೃತದೇಹವನ್ನು ನೋಡಿ ದೃಢೀಕರಿಸಲು ಮಂಗಳೂರಿಗೆ ನಮ್ಮ ಕುಟುಂಬದ ಸದಸ್ಯರು ಪ್ರಯಾಣ ಬೆಳೆಸುತ್ತಿದ್ದೇವೆ. ರಾತ್ರಿ 2 ಗಂಟೆ ಆಸುಪಾಸಿನಲ್ಲಿ ಮಂಗಳೂರಿಗೆ ತಲುಪಲಿದ್ದೇವೆ” ಎಂದು ಸಂತ್ರಸ್ತ ಯುವಕ ಅಶ್ರಫ್ ಅವರ ಸಹೋದರ ಹಮೀದ್ ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಆದರೆ, ಕುಡುಪು ಗುಂಪು ಹತ್ಯೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X