ಉದ್ಯೋಗಕ್ಕಾಗಿ ಭೂಮಿ ಹಗರಣ: ಸಿಬಿಐ ಆರೋಪ ಪಟ್ಟಿಯಲ್ಲಿ ಬಿಹಾರದ ಡಿಸಿಎಂ ತೇಜಸ್ವಿ ಯಾದವ್ ಹೆಸರು

Date:

Advertisements

ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ಹೊಸ ಆರೋಪ ಪಟ್ಟಿ ಸಲ್ಲಿಸಿದೆ. ಆರೋಪ ಪಟ್ಟಿಯಲ್ಲಿ ಬಿಹಾರದ ಉಪ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಆರ್‌ಜೆಡಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ಹೆಸರಿಸಿದ್ದು, ಇದನ್ನು ನ್ಯಾಯಾಲಯವು ಜುಲೈ 12 ರಂದು ಪರಿಗಣಿಸಲಿದೆ.

ಎಫ್‌ಐಆರ್‌ನಲ್ಲಿ ತೇಜಸ್ವಿ ಯಾದವ್ ಹೆಸರಿಲ್ಲ. ಆದರೆ ತನಿಖೆಯ ಸಂದರ್ಭದಲ್ಲಿ, ಅವರಿಗೆ ಲಾಭದಾಯಕ ಅಪರಾಧದ ಆದಾಯದ ಬಗ್ಗೆ ಪುರಾವೆಗಳು ದೊರಕಿವೆ ಎಂದು ಸಿಬಿಐ ಮೂಲಗಳು ಸುದ್ದಿ ಮಾಧ್ಯಮಗಳಿಗೆ ತಿಳಿಸಿವೆ. ಸಿಬಿಐ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಮಧ್ಯವರ್ತಿ ಮತ್ತು ಫಲಾನುಭವಿಗಳನ್ನು ಹೆಸರಿಸಲಾಗಿದೆ ಹಾಗೂ ಉದ್ಯೋಗಾಕಾಂಕ್ಷಿಗಳು ಹಗರಣದ ಬಗ್ಗೆ ಸಾಕ್ಷ್ಯ ನೀಡಿರುವ ಹೇಳಿಕೆಗಳು ದಾಖಲಾಗಿವೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಎನ್‌ಸಿಪಿಯಿಂದ ಮೂವರ ಉಚ್ಚಾಟನೆ; 9 ಶಾಸಕರು, ಇಬ್ಬರು ಸಂಸದರ ಅನರ್ಹತೆಗೆ ನಿರ್ಣಯ

Advertisements

ತನಿಖಾ ಸಂಸ್ಥೆಯ ಪ್ರಕಾರ, 2004 ರಿಂದ 2009ರವರೆಗೆ ಲಾಲು ಅವರು ಕೇಂದ್ರ ಸಚಿವರಾಗಿದ್ದ ಅವಧಿಯಲ್ಲಿ ಪಾಟ್ನಾದ 12 ಅಭ್ಯರ್ಥಿಗಳನ್ನು ರೈಲ್ವೆಯಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ನೇಮಿಸಲಾಯಿತು. ಈ ನೇಮಕವು ಯಾವುದೇ ಜಾಹೀರಾತು ಅಥವಾ ಸಾರ್ವಜನಿಕ ಸೂಚನೆಯಿಲ್ಲದೆ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿ ಮಾಡಲಾಗಿತ್ತು.

ಈ ನೇಮಕಾತಿಗಳ ಬದಲಾಗಿ, ಆರೋಪಿಗಳು ನಗರ ಮತ್ತು ಇತರೆಡೆಗಳಲ್ಲಿ ಏಳು ನಿವೇಶನಗಳನ್ನು ಹೆಚ್ಚಿನ ರಿಯಾಯಿತಿ ಬೆಲೆಯಲ್ಲಿ ಪಡೆದರು. ಈ ಜಮೀನು ಉದ್ಯೋಗ ಪಡೆದ 12 ಮಂದಿಗೆ ಸೇರಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಗ್ರೂಪ್‌ ಡಿ ಹುದ್ದೆ ಅಭ್ಯರ್ಥಿಗಳ 4 ಜಮೀನುಗಳನ್ನು ಕೇವಲ 7.5 ಲಕ್ಷ ರೂ.ಗೆ ಲಾಲು ಕುಟುಂಬ ಖರೀದಿಸಿತ್ತು. ಅದನ್ನು ಆರ್‌ಜೆಡಿ ನಾಯಕನೊಬ್ಬನಿಗೆ 3.5 ಕೋಟಿ ರೂ.ಗೆ ಲಾಲು ಪತ್ನಿ ರಾಬ್ಡಿ ದೇವಿ ಮಾರಿದ್ದರು. ಬಂದ ಹಣವನ್ನು ಹೆಚ್ಚಾಗಿ ಲಾಲು ಪ್ರಸಾದ್‌ ಯಾದವ್‌ ಅವರ ಪುತ್ರ ತೇಜಸ್ವಿ ಯಾದವ್ ಅವರ ಖಾತೆಗೆ ವರ್ಗಾಯಿಸಲಾಗಿತ್ತು’ ಎಂದು ಇಡಿ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X