ಹಾವೇರಿ | ಪ್ರತಿಯೊಬ್ಬ ದಲಿತರ ಮಕ್ಕಳು ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆಯಬೇಕು: ಉಡಚಪ್ಪ ಮಾಳಗಿ

Date:

Advertisements

“ಪ್ರತಿಯೊಬ್ಬ ದಲಿತರ ಮಕ್ಕಳು ಶಿಕ್ಷಣ ಪಡೆದು ಉನ್ನತ ಸರಕಾರಿ ಹುದ್ದೆ ಪಡೆಯಬೇಕು. ಆಗ ಮಾತ್ರ ಶೋಷಿಣೆಯಿಂದ ಮುಕ್ತಿ ಪಡೆಯಲು ಸಾಧ್ಯ” ಎಂದು ಕರ್ನಾಟಕ  ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದರು.

ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಹಾವಂಶಿ ಗ್ರಾಮದಲ್ಲಿ ಮಾದಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತ್ಯೋತ್ಸವ ಆಚರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಅಂದಿನ ಕಾಲಾವಧಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು  ಕೆಳ ಸಮುದಾಯದಲ್ಲಿ ಜನಿಸಿ ಮೇಲ್ವರ್ಗದ ಜನರಿಂದ ಸಾಕಷ್ಟು ನೋವನ್ನು ಕಂಡರು.ಅಂದಿನ ಅನಿಷ್ಟ ಜಾತಿ ಪದ್ದತಿಯನ್ನು ಮೆಟ್ಟಿ ನಿಂತು ಶಿಕ್ಷಣ ಪಡೆದು ದೇಶಕ್ಕೆ ಸಂವಿಧಾನ ನೀಡಿ ಎಲ್ಲ ಶೋಷಿತರನ್ನು ಸಮನಾಗಿ ಕಾಣಲು ತಮ್ಮ ಜೀವನವನ್ನೆ ಸವಿಸಿ ಜಗತ್ತಿಗೆ ಹೆಸರಾದರು. ಅವರು ಹಾಕಿಕೊಟ್ಟ ಮಾರ್ಗದಿಂದ ನಾವು ಇಂದಿನ ಸಮಯದಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ.ರಾಜ್ಯ ಸರಕಾರ ಕೂಡಲೇ ಮಾದಿಗರ ಒಳಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದರೆ ಬರುವ ತಾ.ಪಂ,ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Advertisements

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ ಹೆಡಿಗೊಂಡ ಮಾತನಾಡಿ, “ಅಂಬೇಡ್ಕರ್ ಅವರು ನಮ್ಮನ್ನು ಸಮಾಜದಲ್ಲಿ ಮೇಲಸ್ತರಕ್ಕೆ ತರಲು ತಮ್ಮ ಜೀವನವನ್ನೇ ಮುಡುಪಾಗಿಟ್ಟರು.ದಲಿತರು ಏಳಿಗೆ ಆಗದಂತೆ ಮೇಲ್ಜಾತಿಯ ಜನರು  ಬಹಳ ಹೀನ ರೀತಿಯಲ್ಲಿ ಕಾಣುವುದನ್ನು ಇಂದಿಗೂ ಅಲ್ಲಲ್ಲಿ ಇದೆ.ಇದನ್ನು ನಾವು ಹೋಗಲಾಡಿಸಬೇಕಾದರೆ ಪ್ರತಿಯೊಬ್ಬ ದಲಿತರು ಶಿಕ್ಷಣವಂತರಾಗಬೇಕು. ರಾಜಕೀಯ,ಸಾಮಾಜಿಕ,ಶೈಕ್ಷಣಿಕ, ಆರ್ಥಿಕ ಕ್ಷೇತ್ರದಲ್ಲಿ ಬೆಳೆಯಬೇಕು” ಎಂದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹಾವಂಶಿ ಗ್ರಾಮದ ವಿವಿಧ ಬೀದಿಗಳಲ್ಲಿ ಜಾಂಗ್ ಮೇಳ ಹಾಗೂ ವಿವಿಧ ವಾಧ್ಯಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಜರುಗಿತು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಂಜಯಗಾಂಧಿ ಸಂಜೀವಣ್ಣನವರ, ಜಿಲ್ಲಾಧ್ಯಕ್ಷರಾದ ಮಂಜಪ್ಪ ಮರೋಳ, ಮುತ್ತು ಮಾದರ, ಹನುಮಂತಪ್ಪ ಸಿ.ಡಿ, ಜಗದೀಶ್ ಹರಿಜನ, ಮಹೇಶಪ್ಪ ಹರಿಜನ, ಶಂಭುಲಿಂಗಪ್ಪ ದುಟಗೇರ, ದೇವೇಂದ್ರಪ್ಪ ಗೂರವರ, ಚನ್ನವೀರಪ್ಪ ನಡುವನಹಳ್ಳಿ, ನಿಂಗಪ್ಪ ಬಣಕಾರ, ಮಂಜುನಾಥ ಬ್ಯಾಲುಹುಣಸಿ, ಬಸಪ್ಪ ದಾನಮ್ಮನವರ, ಲೋಕೇಶ್ ಮಡಿವಾಳರ, ದಿಳ್ಳೇಪ್ಪ ಬೂದಮೂರು, ಫಕ್ಕೀರಪ್ಪ ಮುದಕಮ್ಮನವರ, ನಿಂಗರಾಜ ಮುದಕಮ್ಮನವರ, ಚನ್ನಬಸಪ್ಪ ಹರಿಜನ, ಉಚ್ಚೆಂಗಪ್ಪ ಹರಿಜನ, ಮಹಿಂದ್ರಪ್ಪ ಮಾದರ, ದುರಗಪ್ಪ ಹರಿಜನ, ಪರಸಪ್ಪ ತಿಪ್ಪಣ್ಣನವರ, ರವಿ ಹರಿಜನ, ಪರಶುರಾಮ ಕರಿಯಮ್ಮನವರ, ಮಹೇಶ ಕುರವತ್ತಿ, ಕುಮಾರ ಹರಿಜನ, ಮಾರುತಿ ಕರಿಯಮ್ಮನವರ, ಮರಿಯಪ್ಪ ಮಾದರ, ರಾಮಪ್ಪ ಮುದಕಮ್ಮನವರ, ಅವಿನಾಶ ದೊಡ್ಡಮನಿ, ಪರಸಪ್ಪ ಹರಿಜನ ಹಾಗೂ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X