ಐಪಿಎಲ್ 2025 | ರಿಂಕು ಸಿಂಗ್​​ಗೆ ಕುಲ್‌ದೀಪ್‌ ಯಾದವ್‌ ಕಪಾಳ ಮೋಕ್ಷ; ಅಭಿಮಾನಿಗಳ ಆಕ್ರೋಶ

Date:

Advertisements

ನಿನ್ನೆ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್‌ ಆವೃತ್ತಿಯ 48ನೇ ಪಂದ್ಯದಲ್ಲಿ ಕುಲದೀಪ್ ಯಾದವ್ ಮತ್ತು ರಿಂಕು ಸಿಂಗ್ ನಡುವೆ ಅನಿರೀಕ್ಷಿತ ಘಟನೆ ನಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್‌ದೀಪ್‌ ಯಾದವ್ ಕೆಕೆಆರ್ ಆಟಗಾರ ರಿಂಕು ಸಿಂಗ್‌ಗೆ ಕಪಾಳಮೋಕ್ಷ ಮಾಡಿದ್ದು, ಈ ದೃಶ್ಯ ಎಲ್ಲಡೆ ವೈರಲ್ ಆಗಿದೆ.

ಪಂದ್ಯ ಮುಕ್ತಾಯವಾದ ನಂತರ ರಿಂಕು ಮಾತನಾಡುತ್ತಿರುವ ಸಂದರ್ಭದಲ್ಲಿ ಮೊದಲಿಗೆ ಕುಲದೀಪ್‌ ಕಪಾಳ ಮೋಕ್ಷ ಮಾಡಿದ್ದಾರೆ. ಹಾಗೆಯೇ ಮತ್ತೆ ಏನೋ ಹೇಳಲು ಹೋದಾಗ ಎರಡನೇ ಬಾರಿಯೂ ಕುಲದೀಪ್‌ ಹಲ್ಲೆ ಮಾಡಿದ್ದಾರೆ. ಆದರೆ ಕುಲದೀಪ್ ಯಾದವ್ ಏಕೆ ಹೊಡೆದರು ಎಂಬುದು ತಿಳಿದಿಲ್ಲ. ಈ ಘಟನೆ ಇಬ್ಬರ ನಡುವೆ ತಮಾಷೆಯಾಗಿ ನಡೆಯಿತೋ ಅಥವಾ ಗಂಭೀರವಾಗಿ ನಡೆಯಿತೋ ಎಂಬ ಮಾಹಿತಿಗೆ ಉತ್ತರ ದೊರಕಿಲ್ಲ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಇದು ನನ್ನ ಮೈದಾನ: ಗೆದ್ದ ನಂತರ ಕೆ ಎಲ್ ರಾಹುಲ್‌ಗೆ ಟಾಂಗ್‌ ಕೊಟ್ಟ ವಿರಾಟ್ ಕೊಹ್ಲಿ!

Advertisements

ಈ ಮಧ್ಯೆ, ಕುಲದೀಪ್ ಬೌಲಿಂಗ್‌ನಲ್ಲಿ ರಿಂಕು ಸಿಂಗ್ 22 ರನ್ ಗಳಿಸಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಲು ವಿಭಿನ್ನವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೆಲವರು ಇದನ್ನು ತಮಾಷೆಯ ಘಟನೆ ಎಂದು ಸಮರ್ಥಿಸಿಕೊಂಡರೆ, ಇನ್ನು ಕೆಲವರು ಕುಲದೀಪ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಆಟಗಾರರು ಕಪಾಳಮೋಕ್ಷ ಮಾಡಿಕೊಳ್ಳುವುದು ಇದೇ ಮೊದಲ ಘಟನೆಯೇನು ಅಲ್ಲ. ಈ ಹಿಂದೆ ಮುಂಬೈ ಇಂಡಿಯನ್ಸ್ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ಪಂಜಾಬ್ ಕಿಂಗ್ಸ್ ಮಾಜಿ ಆಟಗಾರ ಎಸ್ ಶ್ರೀಶಾಂತ್ ಅವರಿಗೆ ಮೈದಾನದಲ್ಲೇ ಕಪಾಳಕ್ಕೆ ಬಾರಿಸಿ ಸುದ್ದಿಯಾಗಿದ್ದರು. ಶ್ರೀಶಾಂತ್ ಕಣ್ಣೀರಿಡುತ್ತಾ ಸಾಗುತ್ತಿದ್ದ ದೃಶ್ಯಗಳು ಎಲ್ಲಡೆ ಹರಿದಾಡಿತ್ತು. ಈ ಘಟನೆಯ ವಿರುದ್ಧ ಬಿಸಿಸಿಐ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹರ್ಭಜನ್ ಸಿಂಗ್ ಅವರಿಗೆ 11 ಪಂದ್ಯಗಳಿಗೆ ನಿಷೇಧ ವಿಧಿಸಿತ್ತು. ಆ ಬಳಿಕ ಹರ್ಭಜನ್ ಸಿಂಗ್ ತಮ್ಮ ತಪ್ಪನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X