ವಿಜಯಪುರ | ಬಸವ ವೃತ್ತದಲ್ಲಿ ದವಿಪ ವತಿಯಿಂದ ʼಬಸವ ಜಯಂತಿʼ ಆಚರಣೆ

Date:

Advertisements

ವಿಜಯಪುರ ನಗರದಲ್ಲಿರುವ ವಿಶ್ವ ಗುರು ಬಸವಣ್ಣ ವೃತ್ತದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ವತಿಯಿಂದ ಬಸವ ಜಯಂತಿ ಆಚರಣೆ ಮಾಡಲಾಯಿತು.

ಈ ವೇಳೆ ರಾಷ್ಟೀಯ ಬಸವದಳದ ಮುಖಂಡ ಡಾ. ರವಿ ಬಿರಾದಾರ ಮಾತನಾಡಿ, “ವಿಶ್ವ ವಿಖ್ಯಾತಿ ಪಡೆದ ಮಹಾತ್ಮ ಬಸವಣ್ಣನವರು ನಮ್ಮ ನಾಡಿನ ಮಣ್ಣಲ್ಲಿ ಹುಟ್ಟಿರುವುದು ನಮ್ಮ ಹೆಮ್ಮೆ. 12ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಮತ್ತು ಸಮಾನ ತತ್ವದ ಪರಿಕಲ್ಪನೆಯೊಂದಿಗೆ ಅನುಭವ ಮಂಟಪ ಸ್ಥಾಪನೆ ಮಾಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ಅವರ ಕಾರ್ಯವನ್ನ ಸ್ಮರಿಸುವ ಉದ್ದೇಶದಿಂದ ಇವತ್ತಿನ ಸರ್ಕಾರ ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಣೆ ಮಾಡಿರುವುದು ಯುವಪೀಳಿಗೆಗೆ ಸ್ಫೂರ್ತಿಯಾಗಬೇಕು” ಎಂದರು.

ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಮುಖಂಡ ಶ್ರೀನಾಥ ಪೂಜಾರಿ ಮಾತನಾಡಿ, “ಬಸವಣ್ಣನವರ ವಚನಗಳು ನಮಗೆ ಆದರ್ಶವಾಗಬೇಕಾಗಿದೆ. ಇವತ್ತಿನ ಯುವಪೀಳಿಗೆಗೆ ಅವರ ತತ್ವಗಳು ಮತ್ತು ಆದರ್ಶ ವಿಚಾರಗಳನ್ನು ಕೋಮುವಾದಿ ಕಪಿಮುಷ್ಟಿಯಿಂದ ಹೊರ ತರಬೇಕಾಗಿದೆ. ವೈಚಾರಿಕ ವಿಚಾರವನ್ನು ಯುವ ಪೀಳಿಗೆ ಮೈಗೂಡಿಸಿಕೊಂಡು ಪ್ರಜ್ಞಾವಂತರಾಗಬೇಕಿದೆ” ಎಂದು ಕರೆ ನೀಡಿದರು.

Advertisements

ಇದನ್ನೂ ಓದಿ: ಗದಗ | ಬುದ್ಧಿಮಾಂದ್ಯ, ಅಂಗವಿಕಲರ ಆತ್ಮವಿಶ್ವಾಸಕ್ಕೆ ನೀರೆರೆದ ಮನರೇಗಾ

ಕಾರ್ಯಕ್ರಮದಲ್ಲಿ ಅಕ್ಷಯ ಅಜಮನಿ, ಮಾದೇಶ್ ಚಲವಾದಿ, ಶಂಕರ್ ಬಸರಗಿ, ದಾವೂದ್ ನಾಯ್ಕೋಡಿ, ಸಂದೇಶ್ ಕುಮುಟಗಿ, ಪ್ರಶಾಂತ್ ದಾಂಡೇಕರ್, ಪ್ರವೀಣ್ ಹಂಗರಗಿ, ಸಮೀರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X