ವಿಜಯಪುರ | ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಸಭೆ

Date:

Advertisements

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರಿ ಇಲಾಖೆಯೊಂದಿಗೆ ದೌರ್ಜನ್ಯ ತಡೆ ಸಮಿತಿಯೂ ಇದೆ. ಅಧ್ಯಕ್ಷರು ಹಾಗೂ ಸೌಜನ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು ನಮ್ಮೊಂದಿಗೆ ಸಹಕರಿಸಬೇಕು, ದೌರ್ಜನ್ಯ ನಿಯಂತ್ರಣ ಮಾಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅನುರಾಧ ವಸ್ತ್ರದ ತಿಳಿಸಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಮಿನಿ ಆಡಳಿತಸೌಧ ಸಭಾ ಭವನದಲ್ಲಿ ನಡೆದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಮೇಲ್ಪಂಕ್ತಿಗೆ ಬರಬೇಕು. ಗ್ರಾಮೀಣ ಭಾಗಗಳಲ್ಲಿ ಸಮಸ್ಯೆಗಳಿದ್ದರೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.‌

Advertisements

ದೌರ್ಜನ್ಯ ಸಮಿತಿ ಅಧ್ಯಕ್ಷ ಬಾಬು ಗುಡಮಿ ಮಾತನಾಡಿ, “ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಾಕಷ್ಟು ಇವೆ. ತಾಲೂಕಿನಾದ್ಯಂತ ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ. ಅಧಿಕಾರಿಗಳು ಆತ್ಮಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಲು ವಿನಂತಿಸಿದ್ದಾರೆ. ಅಥರ್ಗಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಭೂಮಿ ಇಲ್ಲ. ಇದನ್ನು ಕೂಡಲೇ ಮಂಜೂರು ಮಾಡಬೇಕು” ಎಂದು ವಿನಂತಿಸಿದರು.

ಇದನ್ನೂ ಓದಿದ್ದೀರಾ? ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

ಸಭೆಯಲ್ಲಿ ಹಲವು ಸಮಸ್ಯೆಗಳನ್ನು ಸಮಿತಿ ಪದಾಧಿಕಾರಿಗಳು ಪ್ರಸ್ತಾಪಿಸಿದರು. ಅವುಗಳಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದೆಂದು ಅಧಿಕಾರಿಗಳು ಉತ್ತರಿಸಿದರು.

ಈ ವೇಳೆ ಶಿವಾನಂದ ಮೂರುಮನ್, ತಶೀಲ್ದಾರ್ ಬಿ ಎಸ್ ಕಡಕಬಾವಿ, ತಾಪಂ ಇಒ ನಂದೀಪ್ ರಾಠೋಡ, ಡಿವೈಎಸ್‌ಪಿ ಜಗದೀಶ್ ಎಸ್ ಎಚ್, ಸಮಾಜ ಕಲ್ಯಾಣ ತಾಲೂಕು ಅಧಿಕಾರಿ ಉಮೇಶ್ ಲಮಾಣಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X